Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:11 - ಕನ್ನಡ ಸತ್ಯವೇದವು C.L. Bible (BSI)

11 ಆದುದರಿಂದ ನಿನ್ನ ಊರಿಗೆ ತೆರಳು. ನಿನ್ನನ್ನು ಬಹಳವಾಗಿಸನ್ಮಾನಿಸಬೇಕೆಂದಿದ್ದೆ. ಆದರೆ ನಿನಗೆ ಸನ್ಮಾನ ಕೂಡದೆಂದು ಸರ್ವೇಶ್ವರ ಆಜ್ಞೆಮಾಡಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದಕಾರಣ ನಿನ್ನ ಊರಿಗೆ ಹೋಗಿಬಿಡು; ನಿನ್ನನ್ನು ಬಹಳವಾಗಿ ಘನಪಡಿಸುವೆನೆಂದು ಹೇಳಿಕೊಂಡೆನು; ಆದರೆ ನಿನಗೆ ಘನತೆಯುಂಟಾಗದಂತೆ ಯೆಹೋವನು ಅಡ್ಡಿಮಾಡಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನೀನೀಗ ನೇರವಾಗಿ ಮನೆಗೆ ಹೋಗಿಬಿಡು. ನಿನಗೆ ಹೆಚ್ಚು ಹಣ ಕೊಡುವುದಾಗಿ ಆಲೋಚಿಸಿದ್ದೆನು. ಆದರೆ ನೀನು ನಿನ್ನ ಬಹುಮಾನವನ್ನು ಕಳೆದುಕೊಳ್ಳುವಂತೆ ಯೆಹೋವನು ಮಾಡಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈಗ ನಿನ್ನ ಸ್ಥಳಕ್ಕೆ ಓಡಿಹೋಗು. ನಾನು ನಿನ್ನನ್ನು ಬಹು ಗೌರವಿಸಬೇಕೆಂದಿದ್ದೆ. ಆದರೆ ಇಗೋ, ಯೆಹೋವ ದೇವರು ನಿನಗೆ ಘನತೆ ಬಾರದಂತೆ ತಡೆದಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:11
10 ತಿಳಿವುಗಳ ಹೋಲಿಕೆ  

ನಾನು ತಮ್ಮನ್ನು ಬಹಳವಾಗಿ ಸನ್ಮಾನಿಸುವೆನು; ತಾವು ಏನು ಹೇಳಿದರೂ ಅದರಂತೆಯೇ ಮಾಡುವೆನು; ತಾವು ಅಗತ್ಯವಾಗಿ ಬಂದು ಈ ಜನಾಂಗದವರನ್ನು ಶಪಿಸಿ ನನಗೆ ನೆರವಾಗಬೇಕು’ ಎಂದು ಹೇಳಿಕಳಿಸಿದ್ದಾರೆ,” ಎಂದರು.


ಅಲ್ಲಿ ಬಿಳಾಮನನ್ನು ಕಂಡು, “ತಮ್ಮನ್ನು ತುರ್ತಾಗಿ ಕರೆದುತರಲು ನಾನು ದೂತರನ್ನು ಕಳಿಸಿದೆನಲ್ಲವೆ? ತಾವೇಕೆ ಆಗಲೇ ಬರಲಿಲ್ಲ? ತಮಗೆ ಯೋಗ್ಯವಾದ ಸತ್ಕಾರ್ಯ ನೀಡಲು ನಾನು ಅಸಮರ್ಥನೇ?” ಎಂದನು.


ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಅದಕ್ಕೆ ಪೇತ್ರನು, “ನಿನ್ನ ಹಣಕಾಸು ನಿನ್ನೊಂದಿಗೆ ಹಾಳಾಗಿಹೋಗಲಿ; ದೇವರ ವರವನ್ನು ಹಣಕ್ಕೆ ಕೊಳ್ಳಬೇಕೆಂದಿರುವೆಯಾ?


ಇದನ್ನು ಕೇಳಿ ಬಾಲಾಕನಿಗೆ ಬಿಳಾಮನ ಮೇಲೆ ಕಡುಕೋಪ ಉಂಟಾಯಿತು. ಅವನು ಕೈಕೈಹಿಸಿಕಿಕೊಂಡು ಬಿಳಾಮನಿಗೆ, “ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆ; ಆದರೆ ನೀನು ಮೂರು ಸಾರಿಯೂ ಅವರನ್ನೇ ಆಶೀರ್ವದಿಸಿದೆ.


ಅದಕ್ಕೆ ಬಿಳಾಮನು, “ನೀನು ನಿನ್ನ ಮನೆತುಂಬ ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಸರ್ವೇಶ್ವರನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಏನನ್ನೂ ಮಾಡಲಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು