Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:2 - ಕನ್ನಡ ಸತ್ಯವೇದವು C.L. Bible (BSI)

2 ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲ್ಯರು ಅವನಿಗೆ ಕಾಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬಿಳಾಮನು ಕಣ್ಣೆತ್ತಿ ನೋಡಿದಾಗ ಇಸ್ರೇಲರೆಲ್ಲರನ್ನು ಕಂಡನು. ಅವರು ತಮ್ಮ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬಿಳಾಮನು ತನ್ನ ಕಣ್ಣೆತ್ತಿ ಇಸ್ರಾಯೇಲರು ಅವರವರ ಗೋತ್ರಗಳ ಪ್ರಕಾರ ತಮ್ಮ ಡೇರೆಗಳಲ್ಲಿ ವಾಸವಾಗಿರುವುದನ್ನು ನೋಡಿದಾಗ, ದೇವರಾತ್ಮ ಪ್ರೇರಿತನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:2
17 ತಿಳಿವುಗಳ ಹೋಲಿಕೆ  

ಕೂಡಲೆ ಅವನನ್ನು ಹಿಡಿದುತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿಸಮೂಹವು ಪರವಶವಾಗಿ ಮಾತಾಡುವುದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನೂ ಕಂಡರು. ಆಗ ದೇವರ ಆತ್ಮ ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.


ಓದೇದನ ಮಗ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.


ಅವನು ಅಲ್ಲಿಂದ ರಾಮಾದ ಮಠಕ್ಕೆ ಹೋಗುವಾಗ ದೇವರ ಆತ್ಮ ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವವರೆಗೆ ಪರವಶನಾಗಿ ಮಾತಾಡುತ್ತಾ ಹೋದನು.


ಅವನು ದೇವಗಿರಿಗೆ ಬಂದ ಕೂಡಲೆ ಪರವಶರಾದ ಪ್ರವಾದಿಗಳ ಗುಂಪೊಂದು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮ ಅವನ ಮೇಲೆ ಇಳಿದು ಬಂದುದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.


ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.


ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.


ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ.


ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.


“ಉದಯಿಸುತ್ತಿರುವಳಿವಳು ಅರುಣೋದಯದಂತೆ ಸುಂದರಿಯಾಗಿಹಳು ಚಂದ್ರನಂತೆ ಶುಭ್ರಳಾಗಿಹಳು ಸೂರ್ಯನಂತೆ ಭಯಂಕರಳು ಪತಾಕಿನಿಯಂತೆ ಎಂಥವಳಿರಬಹುದು ಇವಳು ಪೇಳೈ?


ನನ್ನ ಪ್ರಿಯಳೇ, ನೀನು ಸುಂದರಿ, ತಿರ್ಚನಗರದಂತೆ ಮನೋಹರಿ, ಜೆರುಸಲೇಮಿನಂತೆ ಭಯಂಕರಿ, ಪತಾಕಿನಿಯಂತೆ.


ಯಕೋಬ್ಯರೇ, ನಿಮ್ಮ ಡೇರೆಗಳೆಷ್ಟು ರಮ್ಯ! ಇಸ್ರಯೇಲರೇ, ನಿಮ್ಮ ನಿವಾಸಗಳೆಷ್ಟು ಸುಂದರ!


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು