Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:5 - ಕನ್ನಡ ಸತ್ಯವೇದವು C.L. Bible (BSI)

5 ಯಕೋಬ್ಯರೇ, ನಿಮ್ಮ ಡೇರೆಗಳೆಷ್ಟು ರಮ್ಯ! ಇಸ್ರಯೇಲರೇ, ನಿಮ್ಮ ನಿವಾಸಗಳೆಷ್ಟು ಸುಂದರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಕೋಬ್ಯರೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ; ಇಸ್ರಾಯೇಲ್ಯರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯಾಕೋಬ್ಯರೇ, ನಿಮ್ಮ ಡೇರೆಗಳು ಬಹಳ ಸುಂದರವಾಗಿವೆ! ಇಸ್ರೇಲರೇ, ನೀವು ವಾಸಿಸುವ ಸ್ಥಳಗಳು ಬಹಳ ರಮ್ಯವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಯಾಕೋಬೇ, ನಿನ್ನ ಡೇರೆಗಳೂ; ಇಸ್ರಾಯೇಲರೇ, ನಿಮ್ಮ ಗುಡಾರಗಳೂ ಉತ್ತಮವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:5
13 ತಿಳಿವುಗಳ ಹೋಲಿಕೆ  

ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.


ಅವಿವೆ ಉದ್ದುದ್ದ ಚಾಚಿಕೊಂಡಿರುವ ಕಣಿವೆಗಳಂತೆ ನದಿಯ ಬಳಿಯಿರುವ ತೋಟಗಳಂತೆ ಸರ್ವೇಶ್ವರ ನೆಟ್ಟ ಅಗರುಮರಗಳಂತೆ, ನೀರ ಬದಿಯ ದೇವದಾರು ವೃಕ್ಷಗಳಂತೆ.


ದೇವದರ್ಶನದ ಗುಡಾರವನ್ನು ನಿರ್ಮಿಸಿದಾಗ ಉಪಯೋಗಿಸಿದ ಲೋಹಗಳ ಲೆಕ್ಕ ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಮಾಡಿಸಿದ ಪಟ್ಟಿ:


ಆ ಏಳು ದಿನಗಳು ನೀವು ಪರ್ಣಕುಟೀರಗಳಲ್ಲೇ ವಾಸವಾಗಿರಬೇಕು. ಸ್ವದೇಶೀಯರಾದ ಇಸ್ರಯೇಲರೆಲ್ಲರು ಪರ್ಣಕುಟೀರಗಳಲ್ಲೇ ವಾಸವಾಗಿರಬೇಕು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಹಾಗೆಯೆ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಅಂತೆಯೇ ಗೋತ್ರ ಕುಟುಂಬಗಳ‍ ಪ್ರಕಾರ ಹೊರಡುತ್ತಿದ್ದರು.


ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು.


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ಆದರೆ ನಾನು ಆ ಬಿಳಾಮನಿಗೆ ಸಮ್ಮತಿ ಕೊಡಲಿಲ್ಲವಾದ್ದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆ.


ಏಕೆಂದರೆ ಅವರು ಇಸ್ರಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ; ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಅವನನ್ನು ಕರೆಸಿದ್ದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದರು ಎಂಬ ಮಾತು ಬರೆದಿರುವುದಾಗಿ ಗೊತ್ತಾಯಿತು.


ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II


ನನ್ನ ಪ್ರಿಯಳೇ, ಸರ್ವಾಂಗಸುಂದರಿಯೇ, ನಿನ್ನೊಳು ಯಾವ ಕಳಂಕವು ಇಲ್ಲದಿರುವೆ.


ನನ್ನ ಪ್ರಿಯಳೇ, ನೀನು ಸುಂದರಿ, ತಿರ್ಚನಗರದಂತೆ ಮನೋಹರಿ, ಜೆರುಸಲೇಮಿನಂತೆ ಭಯಂಕರಿ, ಪತಾಕಿನಿಯಂತೆ.


ಇಂಥ ಕೃತ್ಯವನ್ನು ಎಸಗುವವನು ಎಂಥ ಕುಟುಂಬಕ್ಕಾದರೂ ಸೇರಿರಲಿ - ಅಂಥವನನ್ನು ಸೇನಾಧೀಶ್ವರ ಸರ್ವೇಶ್ವರ ಯಕೋಬನ ಕುಲದಿಂದ ಹೊರಗೆ ಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು