Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:13 - ಕನ್ನಡ ಸತ್ಯವೇದವು C.L. Bible (BSI)

13 ಆ ಒಪ್ಪಂದವೇನೆಂದರೆ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ವಾಗ್ದಾನ ಮಾಡುತ್ತೇನೆ. ಅವನು ತನ್ನ ದೇವರ ಗೌರವದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾನೆ; ಇಸ್ರಯೇಲರ ದೋಷಕ್ಕಾಗಿ ಪ್ರಾಯಶ್ಚಿತ್ತ ಮಾಡಿದ್ದಾನೆ. ಆದ್ದರಿಂದ ಅವನಿಗೇ ಈ ವಾಗ್ದಾನ ಮಾಡಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಒಡಂಬಡಿಕೆ ಏನಂದರೆ, ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಸ್ಥಾಪಿಸಿ ಇಸ್ರಾಯೇಲ್ಯರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:13
34 ತಿಳಿವುಗಳ ಹೋಲಿಕೆ  

ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಆದರೆ, ನನ್ನ ದಾಸ ದಾವೀದನ ಸಂತಾನವನ್ನು ಅಸಂಖ್ಯಾತ ನಕ್ಷತ್ರಗಣದಷ್ಟು ಹೆಚ್ಚಿಸುವೆನು. ನನ್ನ ಪರಿಚಾರಕರಾದ ಲೇವಿಯ ಸಂಖ್ಯೆಯನ್ನು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕರಿಸುವೆನು.”


ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗೂ ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಕುಲದಲ್ಲಿ ಇದ್ದೇ ಇರುವನು.”


ಆತ ಮಾಡಿದಾ ನೈಪುಣ್ಯ I ಆಯಿತು ತಲಾಂತರಕು ಗಣ್ಯ II


ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನು ಕೂಡ ಅಭಿಷೇಕಿಸು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು,” ಎಂದು ಹೇಳಿದರು.


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಇಸ್ರಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿತ್ತಾದರೆ, ಆರೋನನ ಪರಂಪರೆಗೆ ಸೇರದೆ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಕಾಣಿಸಿಕೊಳ್ಳುವ ಅವಶ್ಯಕತೆ ಏನಿತ್ತು?


‘ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು.


“ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.


ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II


ಅದಕ್ಕೆ ಅವನು, “ಸೇನಾಧೀಶ್ವರರಾದ ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟನು.


ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


ಆಗ ಅರಸ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮ್ಮ ಪರವಾಗಿ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಕೊಟ್ಟರೆ ನೀವು ಸರ್ವೇಶ್ವರನ ಪ್ರಜೆಯನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಆದುದರಿಂದಲೇ ಇಸ್ರಯೇಲರು ಶತ್ರುಗಳ ಮುಂದೆ ನಿಲ್ಲಲಾರದೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದುದನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.


ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.


ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು. ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು.


ಮರೆತುಬಿಟ್ಟರು ವಿರೋಧಿಗಳು ನಿನ್ನ ವಾಕ್ಯವನು I ಎಂತಲೆ ದಹಿಸುತಿದೆ ಧರ್ಮಾಸಕ್ತಿ ಎನ್ನನು II


ಈ ದಿನ ನಿನ್ನನ್ನು ಕೊಲ್ಲಿಸುವುದಿಲ್ಲ,” ಎಂದು ಹೇಳಿದನು. ಆದರೆ ಅವನನ್ನು ಸರ್ವೇಶ್ವರನ ಯಾಜಕವೃತ್ತಿಯಿಂದ ತೆಗೆದುಬಿಟ್ಟನು. ಹೀಗೆ ಸರ್ವೇಶ್ವರ ಶಿಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಭವಿಷ್ಯ ಹೇಳಿದ ಮಾತು ನೆರವೇರಿತು.


ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕ ಸೇವೆಗೆ ಸೇರಿಸು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತ ನಿಯಮವಾಗಿ ಪ್ರಾಪ್ತಿಸುವುದು.


ಮೋಶೆ ಹೇಳಿದಂತೆಯೇ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮುದಾಯದವರ ಬಳಿಗೆ ಓಡಿಬಂದಾಗ ಆ ಘೋರವ್ಯಾಧಿ ಜನರಲ್ಲಿ ಹರಡಿಕೊಳ್ಳುತ್ತಲಿತ್ತು. ಅವನು ಧೂಪಹಾಕಿ ಆ ಜನರ ಪರವಾಗಿ ದೋಷಪರಿಹಾರ ಮಾಡಿದನು;


ಆ ಮಿದ್ಯಾನ್ ಮಹಿಳೆಯೊಡನೆ ಹತನಾದವನ ಹೆಸರು ಜಿಮ್ರೀ. ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರ ನಾಯಕನಾದ ಸಾಲೂ ಎಂಬವನ ಮಗ.


“ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿ.”


“ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.


ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.


ಇಸ್ರಯೇಲರು ಮೋಶೆಯ ಬಳಿಗೆ ಬಂದು, “ಇಗೋ ನಾವು ನಾಶವಾಗಲಿದ್ದೇವೆ, ನಶಿಸಿಹೋಗುತ್ತೇವೆ, ನಿಶ್ಯೇಷವಾಗಿ ನಿರ್ಮೂಲವಾಗುವ ಹಾಗೆ ಕಾಣುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು