Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:18 - ಕನ್ನಡ ಸತ್ಯವೇದವು C.L. Bible (BSI)

18 ಅವರು ಪೆಗೋರದಲ್ಲಿ ನಡೆದ ಘಟನೆಗಳಲ್ಲೂ ತಮ್ಮ ನಾಯಕನ ಮಗಳಾದ ಕೊಜ್ಜೀ ಎಂಬ ಸ್ವಕುಲಸ್ತ್ರೀಯ ವಿಷಯದಲ್ಲೂ ನಿಮ್ಮನ್ನು ಮೋಸಗೊಳಿಸಿದ್ದಾರೆ. ನಿಮಗೆ ಕೇಡುಮಾಡಿದ್ದಾರೆ,” ಎಂದರು. ಆ ಮಹಿಳೆ ಹತಳಾದುದು ಪೆಗೋರದ ಘಟನೆಗಳ ನಿಮಿತ್ತ ದೊಡ್ಡ ರೋಗ ಬಂದಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಪೆಗೋರದ ವಿಷಯದಲ್ಲಿಯೂ, ಮಿದ್ಯಾನ್ಯರ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ತ್ರೀಯ ವಿಷಯದಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದ್ದಾರೆ. ಆ ಸ್ತ್ರೀಯು ಪೆಗೋರದ ಘಟನೆಗಳ ನಿಮಿತ್ತ ಘೋರ ವ್ಯಾಧಿ ಉಂಟಾದಾಗ ಹತಳಾದವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಪೆಗೋರದ ಸಂಗತಿಯಲ್ಲಿಯೂ ತಮ್ಮ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ವಕುಲ ಸ್ತ್ರೀಯ ಸಂಗತಿಯಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದರಲ್ಲಾ. (ಆ ಸ್ತ್ರೀಯು ಪೆಗೋರದ ಸಂಗತಿಯಿಂದ ಘೋರ ವ್ಯಾಧಿಯುಂಟಾದಾಗ ಹತವಾದಳು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾಕೆಂದರೆ ಅವರು ನಿಮ್ಮನ್ನು ವೈರಿಗಳೆಂದು ಪರಿಗಣಿಸಿ ಪೆಗೋರನ ಘಟನೆಯಲ್ಲಿ ನಿಮ್ಮನ್ನು ಮೋಸಗೊಳಿಸಿದರು. ಮಿದ್ಯಾನಿನ ನಾಯಕನೊಬ್ಬನ ಮಗಳೂ ತಮ್ಮ ರಕ್ತಸಂಬಂಧಿಯೂ ಆಗಿದ್ದ ಕೊಜ್ಬೀಯ ವಿಷಯದಲ್ಲಿಯೂ ಅವರು ನಿಮ್ಮನ್ನು ಮೋಸಗೊಳಿಸಿದರು. ಪೆಗೋರಿನ ಘಟನೆಯಿಂದ ಇಸ್ರೇಲರಿಗೆ ಕಾಯಿಲೆ ಉಂಟಾದಾಗ ಆ ಸ್ತ್ರೀಯೂ ಸತ್ತಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಪೆಯೋರಿನ ವಿಷಯದಲ್ಲಿಯೂ, ಪೆಯೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಹತಳಾದ ತಮ್ಮ ಸಹೋದರಿಯಾಗಿಯೂ, ಮಿದ್ಯಾನ್ಯರ ಪ್ರಧಾನನ ಮಗಳಾಗಿಯೂ, ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರವ ಕೊಡುತ್ತಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:18
13 ತಿಳಿವುಗಳ ಹೋಲಿಕೆ  

ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಇಸ್ರಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿದ್ದರಿಂದ ಸರ್ವೇಶ್ವರ ಅವರನ್ನು ದಂಡಿಸಿದರು.


ಅಲ್ಲದೆ, ಆರೋನನನ್ನು ಉದ್ದೇಶಿಸಿ, “ನೀನು ಈ ಜನರಿಂದ ಮಹಾಪಾಪವನ್ನು ಮಾಡಿಸಿರುವೆ. ಹೀಗೆ ಮಾಡಿಸಲು ಇವರು ನಿನಗೇನು ಮಾಡಿದರು,” ಎಂದು ವಿಚಾರಿಸಿದನು. ಅದಕ್ಕೆ ಆರೋನನು,


ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಮಾಡಬಹುದೆ? ನಮ್ಮಲ್ಲಿ ಯಾರಾದರೊಬ್ಬನು ನಿನ್ನ ಹೆಂಡತಿಯನ್ನು ಕೂಡಿರಬಹುದಿತ್ತಲ್ಲವೆ? ಆಗ ನಿನ್ನಿಂದ ನನಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲವೆ?” ಎಂದು ಹೇಳಿದನು.


ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು.


ಹತಳಾದ ಮಿದ್ಯಾನ್ ಮಹಿಳೆಯ ಹೆಸರು ಕೊಜ್ಜೀ. ಅವಳು ಮಿದ್ಯಾನ್ಯರಲ್ಲಿ ಗೋತ್ರನಾಯಕನಾದ ಚೂರ್ ಎಂಬವನ ಮಗಳು.


“ನೀನು ದಾಳಿಮಾಡಿ ಮಿದ್ಯಾನ್ಯರನ್ನು ಹಾಳುಮಾಡು.


ಆ ದೊಡ್ಡರೋಗ ನಿಂತ ಮೇಲೆ ಸರ್ವೇಶ್ವರ ಸ್ವಾಮಿ ಮೋಶೆಗೆ ಮತ್ತು ಆರೋನನ ಮಗ ಎಲ್ಲಾಜಾರನಿಗೆ:


ಅವರು ಮೊದಲು ಮಿದ್ಯಾನಿಗೂ ಆಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವುಮಂದಿ ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಈಜಿಪ್ಟಿನ ಅರಸ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನು ಹಾಗು ಭೂಮಿಯನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು