Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:4 - ಕನ್ನಡ ಸತ್ಯವೇದವು C.L. Bible (BSI)

4 ಮೋಶೆಗೆ, “ಈ ಜನರ ಮುಖಂಡರೆಲ್ಲರನ್ನು ಹಿಡಿಸಿ, ನನ್ನ ಆಜ್ಞಾನುಸಾರ ಬಹಿರಂಗವಾಗಿ ಮರಣದಂಡನೆಗೆ ಗುರಿಮಾಡಿಸು. ಆಗ ನನ್ನ ಕೋಪಾಗ್ನಿ ಇಸ್ರಯೇಲರಿಂದ ತೊಲಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರಿಗೆ ಯೆಹೋವನಿಗೋಸ್ಕರ ಬಹಿರಂಗವಾಗಿ ಮರಣದಂಡನೆಯನ್ನು ಮಾಡಿಸಬೇಕು; ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲ್ಯರಿಂದ ತೊಲಗಿಸಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಮೋಶೆಗೆ, “ನೀನು ಜನರ ನಾಯಕರನ್ನೆಲ್ಲ ಬಂಧಿಸಿ ಯೆಹೋವನ ಮುಂದೆ ಬಹಿರಂಗವಾಗಿ ಅವರನ್ನು ನೇಣುಗಂಬಕ್ಕೆ ಏರಿಸು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರೇಲರಿಂದ ತೊಲಗಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೋಪಾಗ್ನಿಯು ಇಸ್ರಾಯೇಲಿನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥರೆಲ್ಲರನ್ನು ತೆಗೆದುಕೊಂಡು, ಅವರನ್ನು ಹಗಲು ಹೊತ್ತಿನಲ್ಲಿ ಯೆಹೋವ ದೇವರ ಮುಂದೆ ಕೊಂದುಹಾಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:4
21 ತಿಳಿವುಗಳ ಹೋಲಿಕೆ  

ಆ ಶಾಪಗ್ರಸ್ತ ವಸ್ತುಗಳಲ್ಲಿ ನೀವು ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು.


ಪೆಗೋರದ ಬಾಳ್ ದೇವತೆಯ ವಿಷಯದಲ್ಲಿ ಸರ್ವೇಶ್ವರ ಮಾಡಿದ ಕಾರ್ಯವನ್ನು ನೀವು ನೋಡಿದ್ದೀರಷ್ಟೆ; ಆ ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆಯಿಂದ ನಾಶಮಾಡಿದರಲ್ಲವೆ?


ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.


ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.


“ಮಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಇಸ್ರಯೇಲರ ಮೇಲೆ ನನಗಿದ್ದ ಕೋಪವನ್ನು ತೊಲಗಿಸಿದ್ದಾನೆ. ನನ್ನ ಬಗ್ಗೆ ಅವನೊಬ್ಬನೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾನೆ. ನನ್ನ ಗೌರವವನ್ನು ಕಾಪಾಡಿಕೊಳ್ಳಲು ಇನ್ನು ಇಸ್ರಯೇಲರನ್ನು ನಿರ್ಮೂಲ ಮಾಡಬೇಕಾದ ಅಗತ್ಯವಿಲ್ಲ.


ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”


ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು.


ಆತ ಇಸ್ರಯೇಲರೆಲ್ಲರನ್ನು, ಅವರ ಹಿರಿಯರನ್ನು, ಮುಖ್ಯಸ್ಥರನ್ನು, ನ್ಯಾಯಾಧಿಪತಿಗಳನ್ನು ಹಾಗೂ ಅಧಿಕಾರಿಗಳನ್ನು ತನ್ನ ಬಳಿಗೆ ಕರೆಯಿಸಿದನು. ಅವರಿಗೆ, “ನಾನು ಮುಪ್ಪಿನ ಮುದುಕನಾದೆ.


ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೆ? ಅದರ ನಿಮಿತ್ತ ಸರ್ವೇಶ್ವರನ ಸಭೆಗೇ ಜಾಡ್ಯ ತಗಲಿತು. ಆದ್ದರಿಂದ ನಾವು ಇಂದಿಗೂ ಶುದ್ಧರಾಗಲಿಲ್ಲ.


ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅದರಲ್ಲಿ ಇರುವ ಎಲ್ಲ ಜನರನ್ನೂ ಜಾನುವಾರುಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು.


ಅಲ್ಲಿ ವಾಸವಾಗಿರುವ ಇಸ್ರಯೇಲರಲ್ಲಿ ಕೆಲವು ಮಂದಿ ದುಷ್ಟರು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಬಹುದು. ‘ಆ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಬಹುದು.


ಅವರು ಪೆಗೋರದಲ್ಲಿ ನಡೆದ ಘಟನೆಗಳಲ್ಲೂ ತಮ್ಮ ನಾಯಕನ ಮಗಳಾದ ಕೊಜ್ಜೀ ಎಂಬ ಸ್ವಕುಲಸ್ತ್ರೀಯ ವಿಷಯದಲ್ಲೂ ನಿಮ್ಮನ್ನು ಮೋಸಗೊಳಿಸಿದ್ದಾರೆ. ನಿಮಗೆ ಕೇಡುಮಾಡಿದ್ದಾರೆ,” ಎಂದರು. ಆ ಮಹಿಳೆ ಹತಳಾದುದು ಪೆಗೋರದ ಘಟನೆಗಳ ನಿಮಿತ್ತ ದೊಡ್ಡ ರೋಗ ಬಂದಾಗ.


ಇಸ್ರಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಮೇಲೆ ಅಧಿಪತಿಗಳನ್ನು ನೇಮಿಸಿದನು.


ಅವರಕ್ರಮ ನಡತೆ ಪ್ರಭುವನು ಕೆಣಕಿತು I ಭೀಕರ ವ್ಯಾಧಿ ಅವರ ಮಧ್ಯೆ ಹಬ್ಬಿತು II


ಇದನ್ನು ಇಸ್ರಯೇಲರೆಲ್ಲರು ಕೇಳಿ, ಭಯಪಟ್ಟು, ಅಂಥ ದುಷ್ಕಾರ್ಯವನ್ನು ಮುಂದೆ ಮಾಡರು.


“ಮರಣಶಿಕ್ಷೆಗೆ ಪಾತ್ರನಾದ ಅಪರಾಧಿಯನ್ನು ಗಲ್ಲುಮರಕ್ಕೇರಿಸಿದ ಮೇಲೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು