Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:8 - ಕನ್ನಡ ಸತ್ಯವೇದವು C.L. Bible (BSI)

8 ಆ ಇಸ್ರಯೇಲ ವ್ಯಕ್ತಿಯ ಹಿಂದೆಯೇ ಹೋಗಿ, ಅವನ ಒಳಕೋಣೆಯನ್ನು ಹೊಕ್ಕು ಅವರಿಬ್ಬರನ್ನು, ಅಂದರೆ ಆ ಇಸ್ರಯೇಲನನ್ನು ಮತ್ತು ಆ ಮಹಿಳೆಯನ್ನು ಒಂದೇ ಬಾರಿಗೆ ಹೊಟ್ಟೆಯಲ್ಲಿ ತಿವಿದುಕೊಂದನು. ಹೀಗೆ ಇಸ್ರಯೇಲರಿಗೆ ಒದಗಿದ್ದ ಜಾಡ್ಯ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಇಸ್ರಾಯೇಲ್ಯನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಹೊಕ್ಕು ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲ್ಯನನ್ನೂ ಆ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರಾಯೇಲ್ಯರಿಗುಂಟಾಗಿದ್ದ ವ್ಯಾಧಿ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಇಸ್ರೇಲನನ್ನು ಹಿಂಬಾಲಿಸಿ ಮಲಗುವ ಕೋಣೆಯೊಳಗೆ ಹೋಗಿ ಅವನನ್ನೂ ಆ ಮಿದ್ಯಾನ್ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರೇಲರಿಗುಂಟಾದ ವ್ಯಾಧಿ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ, ಇಸ್ರಾಯೇಲಿನವನನ್ನೂ ಆ ಮಹಿಳೆಯನ್ನೂ ಒಂದೇ ಬಾರಿಗೆ ಇಬ್ಬರ ಹೊಟ್ಟೆಯನ್ನು ತಿವಿದನು. ಹೀಗೆ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:8
10 ತಿಳಿವುಗಳ ಹೋಲಿಕೆ  

ದಾವೀದನು ಅವನಿಗೆ, “ನಿನ್ನ ಕಣವನ್ನೂ ಭೂಮಿಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುತ್ತೇನೆ; ಪೂರ್ಣ ಕ್ರಯ ತೆಗೆದುಕೊಂಡು ಅದನ್ನು ಕೊಡು,” ಎಂದು ಹೇಳಿದನು.


ಅಲ್ಲಿ ಸರ್ವೇಶ್ವರನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಅವರಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಅರ್ಪಿಸಿದನು. ಹೀಗೆ ನಾಡಿನ ಮೇಲಿದ್ದ ಸರ್ವೇಶ್ವರನ ಕೋಪ ಶಮನವಾಯಿತು. ಇಸ್ರಯೇಲರಲ್ಲಿದ್ದ ಆ ಸಂಹಾರಕವ್ಯಾಧಿ ನಿಂತುಹೋಯಿತು.


“ಮಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಇಸ್ರಯೇಲರ ಮೇಲೆ ನನಗಿದ್ದ ಕೋಪವನ್ನು ತೊಲಗಿಸಿದ್ದಾನೆ. ನನ್ನ ಬಗ್ಗೆ ಅವನೊಬ್ಬನೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾನೆ. ನನ್ನ ಗೌರವವನ್ನು ಕಾಪಾಡಿಕೊಳ್ಳಲು ಇನ್ನು ಇಸ್ರಯೇಲರನ್ನು ನಿರ್ಮೂಲ ಮಾಡಬೇಕಾದ ಅಗತ್ಯವಿಲ್ಲ.


ಅಂತೆಯೇ ಮೋಶೆ ಇಸ್ರಯೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನು ಪೆಗೋರದ ಬಾಳ್ ದೇವತೆಗೆ ಪೂಜಿಸುವ ತನ್ನ ತನ್ನ ವಂಶದವರಿಗೆ ಪ್ರಾಣಶಿಕ್ಷೆಯನ್ನು ವಿಧಿಸಬೇಕು,” ಎಂದು ಆಜ್ಞಾಪಿಸಿದನು.


“ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ ತರುವಂಥ ಒಡಂಬಡಿಕೆ. ಅವರು ಭಯಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದ್ದು. ಅಂತೆಯೇ ಹಿಂದೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನಡೆದುಕೊಂಡರು; ನನ್ನ ನಾಮಕ್ಕೆ ಅಂಜಿ ಬಾಳಿದರು.


ಸರ್ವೇಶ್ವರನ ಗುಡಾರದ ಸಮೀಪಕ್ಕೆ ಬರುವವರೆಲ್ಲರು ಸಾಯಲೇ ಬೇಕಾದರೆ ಇನ್ನು ನಾವೆಲ್ಲರು ಸತ್ತಹಾಗೆ ತಾನೆ?” ಎಂದರು.


ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಗುಡ್ಡೆಯನ್ನು ಹಾಕಿದರು. ಅದು ಇಂದಿನವರೆಗೂ ಇದೆ. ಬಳಿಕ ಸರ್ವೇಶ್ವರನ ಕೋಪಾಗ್ನಿ ತಣ್ಣಗಾಯಿತು. ಈ ಘಟನೆಯಿಂದಾಗಿ ಆ ಸ್ಥಳಕ್ಕೆ ‘ಆಕೋರಿನ ಕಣಿವೆ’ ಎಂಬ ಹೆಸರು ಬಂದಿತು.


ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ನಾಡಿನ ಮೇಲೆ ದೇವರಿಗಿದ್ದ ಕೋಪ ಶಮನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು