Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:55 - ಕನ್ನಡ ಸತ್ಯವೇದವು C.L. Bible (BSI)

55 ಪ್ರತಿಯೊಂದು ಕುಲದ ಮೂಲಪುರುಷನ ಹೆಸರನ್ನು ಬರೆದು ಚೀಟು ಹಾಕಿ ಆಯಾ ಕುಲಕ್ಕೆ ಸೊತ್ತನ್ನು ಗೊತ್ತುಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಇದಲ್ಲದೆ ಚೀಟು ಹಾಕುವುದರಿಂದ ದೇಶವನ್ನು ಪಾಲುಮಾಡಬೇಕು. ತಮ್ಮ ಗೋತ್ರಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ತಮ್ಮ ಪಾಲನ್ನು ಪಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:55
21 ತಿಳಿವುಗಳ ಹೋಲಿಕೆ  

ಅದಕ್ಕನುಸಾರವಾಗಿ ಮೋಶೆ ಇಸ್ರಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ ನಾಡು ಇದೇ. ಒಂಬತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.


ಚೀಟು ಹಾಕಿ ಅದನ್ನು ನಿಮ್ಮ ನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಿ. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಆಸ್ತಿ ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಅಲ್ಲೇ ಆ ಕುಟುಂಬದ ಸೊತ್ತಿರಬೇಕು. ಒಂದೊಂದು ಕುಲಕ್ಕೆ ಸೇರಿದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ಸರ್ವೇಶ್ವರಸ್ವಾಮಿ ಮೋಶೆಯ ಮೂಲಕ ಆಜ್ಞಾಪಿಸಿದಂತೆ ಜೋರ್ಡನಿನ ಪಶ್ಚಿಮದ ಕಾನಾನ್ ನಾಡನ್ನು ಚೀಟುಹಾಕಿ ಇಸ್ರಯೇಲರ ಒಂಬತ್ತುವರೆ ಕುಲದವರಿಗೆ ಸ್ವಂತ ಆಸ್ತಿಯಾಗಿ ಹಂಚಿಕೊಟ್ಟರು.


ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.


ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


ಅನಂತರ ಚೀಟುಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.


ಚೀಟುಹಾಕುವುದರಿಂದ ವ್ಯಾಜ್ಯಗಳ ಶಮನ; ಜಟ್ಟಿಗಳ ನಡುವೆ ಕಾಳಗದ ವಿರಾಮ.


ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು.


ಏಳನೇ ಸಾರಿಯ ಚೀಟು ದಾನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸೊತ್ತಾಗಿ ದೊರಕಿದ ಊರುಗಳು ಇವು:


ಆರನೇ ಸಾರಿಯ ಚೀಟು ನಫ್ತಾಲಿ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ಎಲ್ಲೆ ಹೀಗಿದೆ:


ಐದನೇ ಸಾರಿಯ ಚೀಟು ಅಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಇವು:


ನಾಲ್ಕನೇ ಸಾರಿಯ ಚೀಟು ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅದರ ಗೋತ್ರಗಳಿಗೆ ಸಿಕ್ಕಿದ ನಾಡಿನಲ್ಲಿರುವ ನಗರಗಳು ಯಾವುವು ಎಂದರೆ -


ಮೂರನೇ ಸಾರಿಯ ಚೀಟು ಜೆಬುಲೂನ್ಯರಿಗೆ ಬಿದ್ದಿತು. ಈ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ಎಲ್ಲೆ.


ಎರಡನೇ ಸಾರಿಯ ಚೀಟು ಸಿಮೆಯೋನ್ ಕುಲದವರಿಗೆ ಬಿದ್ದಿತು. ಈ ಸಿಮೆಯೋನ್ ಕುಲದ ಗೋತ್ರಗಳ ಸೊತ್ತು ಯೂದಕುಲದವರ ಸೊತ್ತಿನ ಮಧ್ಯದಲ್ಲಿತ್ತು.


ನೀವು ನಾಡನ್ನು ಏಳು ಪಾಲಾಗಿ ವಿಂಗಡಿಸಿ ನನ್ನ ಬಳಿಗೆ ಬರಬೇಕು. ನಾನು ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನಿಮಗೋಸ್ಕರ ಚೀಟು ಹಾಕುತ್ತೇನೆ.


ಜೋಸೆಫ್ಯರು ಯೆಹೋಶುವನಿಗೆ, “ನೀವು ಚೀಟುಹಾಕಿ, ನಮಗೆ ಒಂದೇ ಒಂದುಭಾಗವನ್ನು ಕೊಟ್ಟಿದ್ದೀರಿ, ಇದು ಸರಿಯೆ? ಸರ್ವೇಶ್ವರ ಸ್ವಾಮಿ ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿ ನಮ್ಮನ್ನು ಮಹಾಜನಾಂಗವಾಗಿಸಿದ್ದಾರಲ್ಲವೆ?” ಎಂದು ಕೇಳಿಕೊಂಡರು.


ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆ ಮಂದಿಯುಳ್ಳ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸೊತ್ತನ್ನು ಗೊತ್ತುಮಾಡು.


ನಿಮಗೂ ನಿಮ್ಮ ಮಧ್ಯೆ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ನಾಡನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಯೇಲರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸೊತ್ತಿರಲಿ.


“ಚೀಟುಹಾಕಿ ನಾಡನ್ನು ಇಸ್ರಯೇಲರಿಗೆ ಹಂಚಿಕೊಡಬೇಕೆಂದು ಸರ್ವೇಶ್ವರ ಸ್ವಾಮಿ ಒಡೆಯರಾದ ತಮಗೆ ಆಜ್ಞಾಪಿಸಿದರು. ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸೊತ್ತನ್ನು ಅವನ ಹೆಣ್ಣು ಮಕ್ಕಳಿಗೆ ಕೊಡಬೇಕೆಂದು ಅಪ್ಪಣೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು