Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:19 - ಕನ್ನಡ ಸತ್ಯವೇದವು C.L. Bible (BSI)

19 ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮುಂದೆ ಹಾಗು ಸಮಾಜದವರೆಲ್ಲರ ಮುಂದೆ ನಿಲ್ಲಿಸು; ಅವನ ಮೇಲೆ ಹಸ್ತನಿಕ್ಷೇಪಮಾಡಿ ಅವರ ಸಮ್ಮುಖದಲ್ಲೆ ಅಧಿಕಾರ ವಹಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸಮೂಹದವರೆಲ್ಲರ ಮುಂದೆ ನಿಲ್ಲಿಸಿ ಅವನ ಮೇಲೆ ಕೈಯಿಟ್ಟು ಅವರ ಎದುರಿನಲ್ಲೇ ಅಧಿಕಾರವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸಮೂಹದವರೆಲ್ಲರ ಮುಂದೆ ನಿಲ್ಲಿಸಿ ಅವನ ಮೇಲೆ ಕೈಯಿಟ್ಟು ಅವರ ಎದುರಿನಲ್ಲೇ ಅಧಿಕಾರವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ಅವನನ್ನು ನಿಲ್ಲಿಸು. ಅವರ ಎದುರಿನಲ್ಲಿಯೇ ಅವನಿಗೆ ಆದೇಶಗಳನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ, ಅವರಿಗೆದುರಾಗಿ ಅವನನ್ನು ನೇಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:19
12 ತಿಳಿವುಗಳ ಹೋಲಿಕೆ  

ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ತನಗೆ ಒಪ್ಪಿಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂಬುದಾಗಿ ಅರ್ಖಿಪ್ಪನಿಗೆ ತಿಳಿಸಿರಿ.


ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.


ಸಮಾಜದವರೆಲ್ಲರು ಅವನಿಗೆ ವಿಧೇಯರಾಗಿ ಇರುವಂತೆ ನಿನಗಿರುವ ಗೌರವವನ್ನು ಅವನಿಗೆ ಕೊಡು.


ನಿಮ್ಮ ದೇವರಾದ ಸರ್ವೇಶ್ವರ ತಾವೇ ನಿಮ್ಮ ಸೇನಾ ನಾಯಕರಾಗಿ ನದಿಯನ್ನು ದಾಟಿಹೋಗುವರು; ಅವರು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವರು. ಆಗ ನೀವು ಅವರ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ. ಸರ್ವೇಶ್ವರ ಆಜ್ಞಾಪಿಸಿದಂತೆ ಯೆಹೋಶುವನು ಕೂಡ ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು