Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:21 - ಕನ್ನಡ ಸತ್ಯವೇದವು C.L. Bible (BSI)

21 ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 [ಯೆಹೋವನ ಚಿತ್ತವನ್ನು ತಿಳುಕೊಳ್ಳುವದಕ್ಕೆ] ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮ್ ಎಂಬ ವಸ್ತುವಿನ ಮೂಲಕ ಅವನಿಗೋಸ್ಕರ ವಿಚಾರಣೆಮಾಡುವನು. ಯೆಹೋಶುವನೂ ಇಸ್ರಾಯೇಲ್ಯರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಲೂಬೇಕು ಬರಲೂಬೇಕು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:21
23 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.


ಆಗ ಇಸ್ರಯೇಲರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಸರ್ವೇಶ್ವರ ಸ್ವಾಮಿಯ ಅಪ್ಪಣೆಯನ್ನು ಕೇಳಲಿಲ್ಲ.


ದೈವನಿರ್ಣಯವನ್ನು ತಿಳಿಸುವ ಊರಿಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಆ ಫಲಕದ ಚೀಲದಲ್ಲಿ ಇಡಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಅವು ಅವನ ಎದೆಯ ಮೇಲೆ ಇರುವುವು. ಇಸ್ರಯೇಲರು ಕೈಗೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಯಾವಾಗಲು ಧರಿಸಿಕೊಂಡಿರುವನು.


ಊರಿಮ್‍ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲ ತೀರ್ಪುಮಾಡಿದನು.


ಊರಿಮ್ ತುಮ್ಮಿಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ, ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲನು ತೀರ್ಪುಮಾಡಿದನು.


ಆದರೂ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿ ಧೈರ್ಯ ತಂದುಕೊಂಡನು. ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ‘ಏಫೋದ’ನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿದನು. ಅವನು ತಂದನು.


ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿ ತರಿಸಿ,


(ಇಸ್ರಯೇಲರು ಹೋಗಿ ಸರ್ವೇಶ್ವರನ ಮುಂದೆ ದುಃಖಿಸುತ್ತಾ, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೆ?” ಎಂದು ಕೇಳಲು ಅವರು, “ಹೋಗಿ ಯುದ್ಧಮಾಡಿ,” ಎಂದರು.


ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.


ಯೆಹೋಶುವನು ಮರಣಹೊಂದಿದ ಬಳಿಕ ಇಸ್ರಯೇಲರು ಕಾನಾನ್ಯರೊಡನೆ ಯುದ್ಧಮಾಡಲು ತಮ್ಮಲ್ಲಿ ಯಾವ ಕುಲ ಮುಂದಾಗಿ ಹೋಗಬೇಕೆಂದು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದರು.


ಲೇವಿಯ ಕುಲ ಕುರಿತು ಮೋಶೆ ನುಡಿದದ್ದು: “ಸರ್ವೇಶ್ವರಾ, ನೀಡಿವನಿಗೆ ನಿನ್ನ ವಿಧಿ ತಿಳಿಸುವ ಊರಿಮ್, ನಿನ್ನ ಭಕ್ತನಾದ ಇವನ ವಶದಲ್ಲಿರಲಿ ಆ ತುಮ್ಮೀಮ್. ನೀನಿವನನ್ನು ಪರೀಕ್ಷಿಸಿದೆ ಮಸ್ಸದಲ್ಲಿ ವಿವಾದಿಸಿದೆ ಜಲ ಹೊರಹೊಮ್ಮಿದ ಮೆರೀಬದಲ್ಲಿ.


ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು.


ವಕ್ಷಪದಕವನ್ನು ಅವನಿಗೆ ಬಿಗಿಸಿ, ಅದರ ಚೀಲದೊಳಗೆ ಊರೀಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಹಾಕಿ


ಮೋಶೆ ಅವರ ವಿಜ್ಞಾಪನೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ವಿಚಾರಿಸಿದನು. ಅವರು ಆತನಿಗೆ ಹೀಗೆಂದು ವಿಧಿಸಿದರು:


ಸಮಾಜದವರೆಲ್ಲರು ಅವನಿಗೆ ವಿಧೇಯರಾಗಿ ಇರುವಂತೆ ನಿನಗಿರುವ ಗೌರವವನ್ನು ಅವನಿಗೆ ಕೊಡು.


ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಯೆಹೋಶುವನನ್ನು ಮಹಾಯಾಜಕ ಎಲ್ಲಾಜಾರನ ಮತ್ತು ಸಮಾಜದವರೆಲ್ಲರ ಮುಂದೆ ನಿಲ್ಲಿಸಿ


ಸೌಲನು ಯಾಜಕನೊಡನೆ ಮಾತಾಡುತ್ತಿರುವಷ್ಟರಲ್ಲೆ ಫಿಲಿಷ್ಟಿಯರ ಸೈನ್ಯದ ಗದ್ದಲವು ಹೆಚ್ಚು ಹೆಚ್ಚಾಯಿತು. ಆದುದರಿಂದ ಅವನು ದಾಳಹಾಕುವ ಕೈ ನಿಲ್ಲಿಸೆಂದು ಯಾಜಕನಿಗೆ ಹೇಳಿ,


ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ಇವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಿದ್ದ ಮೋಶೆ, ಮಹಾಯಾಜಕ ಎಲ್ಲಾಜಾರ್, ಕುಲಾಧಿಪತಿಗಳು ಹಾಗು ಸರ್ವಸಮೂಹದವರ ಮುಂದೆ ಬಂದು ತಮ್ಮ ಒಂದು ವಿಜ್ಞಾಪನೆಯನ್ನು ಮುಂದಿಟ್ಟರು:


ನಿಮ್ಮ ದೇವರಾದ ಸರ್ವೇಶ್ವರ ತಾವೇ ನಿಮ್ಮ ಸೇನಾ ನಾಯಕರಾಗಿ ನದಿಯನ್ನು ದಾಟಿಹೋಗುವರು; ಅವರು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವರು. ಆಗ ನೀವು ಅವರ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ. ಸರ್ವೇಶ್ವರ ಆಜ್ಞಾಪಿಸಿದಂತೆ ಯೆಹೋಶುವನು ಕೂಡ ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು