Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:5 - ಕನ್ನಡ ಸತ್ಯವೇದವು C.L. Bible (BSI)

5 ಮೋಶೆ ಅವರ ವಿಜ್ಞಾಪನೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ವಿಚಾರಿಸಿದನು. ಅವರು ಆತನಿಗೆ ಹೀಗೆಂದು ವಿಧಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮೋಶೆಯು ಅವರ ಪ್ರಾರ್ಥನೆಯನ್ನು ಯೆಹೋವನ ಬಳಿಯಲ್ಲಿ ವಿಚಾರಿಸಲಾಗಿ ಆತನು ಅವನಿಗೆ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೋಶೆಯು ಇದರ ವಿಷಯದಲ್ಲಿ ತಾನು ಏನು ಮಾಡಬೇಕೆಂದು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮೋಶೆಯು ಅವರ ವ್ಯಾಜ್ಯವನ್ನು ಯೆಹೋವ ದೇವರ ಮುಂದೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:5
12 ತಿಳಿವುಗಳ ಹೋಲಿಕೆ  

ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸಬಹುದಿತ್ತು ಬಾಯ್ತುಂಬಾ ಆತನೊಡನೆ ವಾದಿಸಬಹುದಿತ್ತು.


ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ಬಗ್ಗೆ ಇದುವರೆಗೂ ಯಾವ ನಿಯಮವೂ ಇರಲಿಲ್ಲ. ಆದುದರಿಂದ ಅವನನ್ನು ಕಾವಲಿನಲ್ಲಿಟ್ಟರು.


ಅವರಿಗೆ ಮೋಶೆ, “ಸ್ವಲ್ಪ ತಾಳಿ, ಸರ್ವೇಶ್ವರ ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ಎಂದು ವಿಚಾರಿಸುತ್ತೇನೆ,” ಎಂದು ಹೇಳಿದನು.


ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.


ನಮ್ಮ ತಂದೆಗೆ ಗಂಡುಮಗನಿಲ್ಲದ ಮಾತ್ರಕ್ಕೆ ಅವರ ಹೆಸರನ್ನು ಕುಲದಿಂದ ತೆಗೆದುಹಾಕುವುದು ನ್ಯಾಯವೇ? ನಮ್ಮ ತಂದೆಯ ಸ್ವಂತದವರಲ್ಲಿ ನಮಗೂ ಸೊತ್ತನ್ನು ಕೊಡಿ,” ಎಂದು ಕೇಳಿಕೊಂಡರು.


“ಚಲ್ಪಹಾದನ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ.


ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.


“ಚೀಟುಹಾಕಿ ನಾಡನ್ನು ಇಸ್ರಯೇಲರಿಗೆ ಹಂಚಿಕೊಡಬೇಕೆಂದು ಸರ್ವೇಶ್ವರ ಸ್ವಾಮಿ ಒಡೆಯರಾದ ತಮಗೆ ಆಜ್ಞಾಪಿಸಿದರು. ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸೊತ್ತನ್ನು ಅವನ ಹೆಣ್ಣು ಮಕ್ಕಳಿಗೆ ಕೊಡಬೇಕೆಂದು ಅಪ್ಪಣೆ ಮಾಡಿದರು.


ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗ ಯೆಹೋಶುವ ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದಾರಲ್ಲವೆ?” ಎಂದು ಹೇಳಿದರು. ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸೊತ್ತನ್ನು ಪಾಲಾಗಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು