ಅರಣ್ಯಕಾಂಡ 28:10 - ಕನ್ನಡ ಸತ್ಯವೇದವು C.L. Bible (BSI)10 ನೀವು ಸಬ್ಬತ್ ದಿನದಂದು ಹೆಚ್ಚಾಗಿ ಎರಡು ಕಳಂಕರಹಿತವಾದ ವರ್ಷದ ಕುರಿಗಳನ್ನು ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಆರು ಸೇರು ಗೋದಿಹಿಟ್ಟನ್ನು ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿತ್ಯ ದಹನಬಲಿಯ ಹೊರತು, ಪ್ರತಿ ಸಬ್ಬತ್ ದಿನಕ್ಕೆ ತಕ್ಕ ದಹನಬಲಿಯೂ ಅದರ ಪಾನದ ಅರ್ಪಣೆಯೂ ಇದೇ. ಅಧ್ಯಾಯವನ್ನು ನೋಡಿ |
ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.