Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:14 - ಕನ್ನಡ ಸತ್ಯವೇದವು C.L. Bible (BSI)

14 ಇವುಗಳಿಗೆ ತಕ್ಕ ಪಾನಾರ್ಪಣೆ ಯಾವುವೆಂದರೆ - ಒಂದೊಂದು ಹೋರಿಯೊಡನೆ ಮೂರು ಸೇರು, ಟಗರಿನೊಡನೆ ಎರಡು ಸೇರು, ಕುರಿಯೊಡನೆ ಒಂದು ಸೇರು ದ್ರಾಕ್ಷಾರಸ. ವರ್ಷದ ಪ್ರತಿ ಅಮಾವಾಸ್ಯೆಯಲ್ಲಿ ಹೀಗೆ ದಹನಬಲಿಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವದಂದರೆ - ಒಂದೊಂದು ಹೋರಿಯೊಡನೆ ಮೂರು ಸೇರೂ ಟಗರಿನೊಡನೆ ಎರಡು ಸೇರೂ ಕುರಿಯೊಡನೆ ಒಂದುವರೆ ಸೇರೂ ದ್ರಾಕ್ಷಾರಸ. ಸಂವತ್ಸರದ ಪ್ರತಿ ಅಮಾವಾಸ್ಯೆಯಲ್ಲಿಯೂ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆಗಳನ್ನು ಮಾಡಬೇಕು. ಅವು ಯಾವುವೆಂದರೆ: ಒಂದು ಹೋರಿಯೊಡನೆ ಮೂರು ಸೇರು ದ್ರಾಕ್ಷಾರಸವನ್ನೂ ಟಗರಿನೊಡನೆ ಎರಡು ಸೇರು ದ್ರಾಕ್ಷಾರಸವನ್ನೂ ಕುರಿಮರಿಯೊಡನೆ ಒಂದೂವರೆ ಸೇರು ದ್ರಾಕ್ಷಾರಸವನ್ನೂ ಅರ್ಪಿಸಬೇಕು. ವರ್ಷದ ಪ್ರತಿತಿಂಗಳು ಅಮಾವಾಸ್ಯೆಯಲ್ಲಿ ಅರ್ಪಿಸತಕ್ಕ ಮಾಸಿಕ ಸರ್ವಾಂಗಹೋಮಗಳು ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಎಂದರೆ, ಹೋರಿಗೆ ಸುಮಾರು ಎರಡು ಲೀಟರ್ ದ್ರಾಕ್ಷಾರಸವು, ಟಗರಿಗೆ ಸುಮಾರು ಒಂದುವರೆ ಲೀಟರ್ ದ್ರಾಕ್ಷಾರಸವು, ಕುರಿಮರಿಗೆ ಸುಮಾರು ಒಂದು ಲೀಟರ್ ದ್ರಾಕ್ಷಾರಸವು ಇರಬೇಕು. ಇದು ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ದಹನಬಲಿಯನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:14
11 ತಿಳಿವುಗಳ ಹೋಲಿಕೆ  

ಕುರಿಯೊಂದಕ್ಕೆ ಮೂರು ಸೇರು - ಈ ಮೇರೆಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಸಮರ್ಪಿಸಬೇಕು. ಇದು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗುವುದು.


ಅಮಾವಾಸ್ಯೆಯಲ್ಲಿ ದಹನಬಲಿಯನ್ನೂ ಅರ್ಪಿಸುವುದಲ್ಲದೆ ಪಾಪಪರಿಹಾರಕಬಲಿಗಾಗಿ ಒಂದು ಹೋತವನ್ನು ಸರ್ವೇಶ್ವರನಿಗೆ ಹೆಚ್ಚಾಗಿ ಸಮರ್ಪಿಸಬೇಕು.


ಮತ್ತು ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ದಹನಬಲಿದಾನವಾಗಿ ಇಲ್ಲವೆ ಸಮಾಧಾನ ಬಲಿಯಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನು ಸಮರ್ಪಿಸಬೇಕು.


ಆಗ ನೀವು ‘ಆ ಬಲಿಪ್ರಾಣಿಯೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರೆಸಿದ ಒಂಬತ್ತು ಸೇರು ಗೋದಿಯ ಹಿಟ್ಟನ್ನು ಅರ್ಪಿಸಬೇಕು.


ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ಪವಿತ್ರಸ್ಥಾನದಲ್ಲಿ ಪೀಠದ ಮೇಲೆ ಸುರಿಯಬೇಕು.


ಆ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧಿಸಿದ ಪ್ರಕಾರ ಧಾನ್ಯ ಹಾಗು ಪಾನಗಳನ್ನು ಒಪ್ಪಿಸಬೇಕು.


ಅಂದಿನಿಂದ ನಿತ್ಯ ದಹನಬಲಿ ಮತ್ತು ಅಮಾವಾಸ್ಯೆ ಬಲಿ, ಸರ್ವೇಶ್ವರನ ಎಲ್ಲ ಉತ್ಸವದಿನಗಳಿಗೆ ನೇಮಕವಾದ ದಹನಬಲಿ ಹಾಗು, ಜನರು ಸ್ವಂತ ಇಚ್ಛೆಯಿಂದ ತಂದುಕೊಟ್ಟ ಬಲಿದಾನಗಳು, ಇವು ಸರ್ವೇಶ್ವರನಿಗೆ ಸಮರ್ಪಣೆಯಾಗುತ್ತಾ ಬಂದವು.


ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ.


“ಮೋವಾಬಿನ ಪೂಜಾಸ್ಥಾನಗಳಲ್ಲಿ ಬಲಿಯರ್ಪಿಸುವುದನ್ನೂ ತಮ್ಮ ದೇವರುಗಳಿಗೆ ಧೂಪಾರತಿಯೆತ್ತುವುದನ್ನೂ ನಿಲ್ಲಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


“ಸಬ್ಬತ್‍ದಿನದಲ್ಲಿ ರಾಜನು ಸರ್ವೇಶ್ವರನಿಗೆ ಕಳಂಕರಹಿತವಾದ ಆರು ಕುರಿಗಳನ್ನೂ ಕಳಂಕರಹಿತವಾದ ಒಂದು ಟಗರನ್ನೂ ದಹನಬಲಿಯಾಗಿ ಅರ್ಪಿಸತಕ್ಕದ್ದು.


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು