Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:19 - ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರನಿಗೆ ದಹನಬಲಿಗಾಗಿ ಎರಡು ಹೋರಿಗಳನ್ನೂ ಒಂದು ಟಗರನ್ನೂ ಹಾಗು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪ್ರಾಣಿಗಳು ಕಳಂಕರಹಿತವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಗಳನ್ನೂ ಸಮರ್ಪಿಸಬೇಕು; ಈ ಪಶುಗಳು ಪೂರ್ಣಾಂಗವಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರ್ಷದ ಏಳು ಗಂಡುಕುರಿಮರಿಗಳನ್ನು ಅರ್ಪಿಸಬೇಕು. ಈ ಪಶುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ದಹನಬಲಿಯನ್ನು ಅರ್ಪಿಸಬೇಕು. ಯಾವುದೆಂದರೆ: ಎರಡು ಎಳೆಯ ಹೋರಿಗಳು, ಒಂದು ಟಗರು, ಒಂದು ವರ್ಷದ ಏಳು ಕುರಿಮರಿಗಳು. ಇವು ದೋಷವಿಲ್ಲದೆ ಪೂರ್ಣಾಂಗವಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:19
11 ತಿಳಿವುಗಳ ಹೋಲಿಕೆ  

“ಅದು ಕುಂಟಾಗಿ, ಕುರುಡಾಗಿ, ಇಲ್ಲವೆ ಬೇರೆ ವಿಧದಲ್ಲಿ ದೋಷವುಳ್ಳದ್ದಾಗಿದ್ದರೆ ಅದನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯಾಗಿ ಸಮರ್ಪಿಸಕೂಡದು;


ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು, ವರ್ಷದ ಏಳು ಕುರಿ ಇವುಗಳನ್ನು ಹಾಗು


ಈ ಪ್ರಾಣಿಗಳೆಲ್ಲಾ ಕಳಂಕರಹಿತವಾಗಿರಬೇಕು. ದೈನಿಕ ದಹನಬಲಿ ಮತ್ತು ಅದಕ್ಕೆ ಸೇರಿದ ಧಾನ್ಯನೈವೇದ್ಯ ಇವುಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನಾರ್ಪಣೆಗಳನ್ನೂ ಸೇರಿಸಿ ಸಮರ್ಪಿಸಬೇಕು.


ಕುಂದುಕೊರತೆ ಇರುವಂಥದನ್ನು ಒಪ್ಪಿಸಬಾರದು; ಅದು ಸ್ವೀಕೃತವಾಗುವುದಿಲ್ಲ.


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ಇವುಗಳ ಜೊತೆಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಬತ್ತು ಸೇರು, ಟಗರಿಗೆ ಆರು ಸೇರು,


ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಾಸ್ಕದ ಪಶುವನ್ನು, ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ಅವರಿಗಾಗಿ ನೀವು ಅದನ್ನು ವಧಿಸಬೇಕು.


ಲೇವಿಯರು, ಚರ್ಮ ಸುಲಿದು ಹೋಮಕ್ಕಾಗಿ ತೆಗೆದಿಟ್ಟಿದ್ದನ್ನು ಪ್ರತ್ಯೇಕಿಸಿ, ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರ, ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಸರ್ವೇಶ್ವರನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲೂ ಅದೇ ಕ್ರಮವನ್ನು ಅನುಸರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು