Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:25 - ಕನ್ನಡ ಸತ್ಯವೇದವು C.L. Bible (BSI)

25 ಏಳನೆಯ ದಿನದಲ್ಲೂ ಸಭೆ ಕೂಡಬೇಕು. ಆ ದಿನದಂದು ಯಾವ ದುಡಿಮೆಯನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಏಳನೆಯ ದಿನದಲ್ಲೂ ಸಭೆಕೂಡಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಇದಲ್ಲದೆ ಏಳನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಪ್ರಯಾಸದ ಕೆಲಸವನ್ನು ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಏಳನೆಯ ದಿವಸದಲ್ಲಿ ಪರಿಶುದ್ಧವಾದ ಸಭೆ ಕೂಡಬೇಕು. ಆ ದಿನದಲ್ಲಿ ನೀವು ದೈನಂದಿನ ಉದ್ಯೋಗವನ್ನೂ ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:25
14 ತಿಳಿವುಗಳ ಹೋಲಿಕೆ  

ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಅಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು.


ಮೊದಲನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು.


ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ಸರ್ವೇಶ್ವರನ ಗೌರವಾರ್ಥ ಹಬ್ಬ ಮಾಡಬೇಕು.


ಮೊದಲನೆಯ ದಿನದಲ್ಲೇ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲೂ ದೇವಾರಾಧನೆಗಾಗಿ ಸಭೆಸೇರಬೇಕು. ಈ ಎರಡೂ ದಿವಸಗಳಲ್ಲಿ ಯಾವ ಕೆಲಸವನ್ನೂ ಮಾಡಕೂಡದು. ಊಟಕ್ಕೆ ಬೇಕಾದುದನ್ನು ಮಾತ್ರ ಮಾಡಬಹುದು.


‘ಎಂಟನೆಯ ದಿನ, ದೇವಾರಾಧನೆಗೆ ಸಭೆಕೂಡಬೇಕು. ಅಂದು ಯಾವ ದುಡಿಮೆಯನ್ನೂ ಮಾಡಕೂಡದು.


‘ಏಳನೆಯ ತಿಂಗಳಿನ ಹದಿನಾಲ್ಕನೆಯ ದಿನ ದೇವಾರಾಧನೆಗಾಗಿ ಸಭೆ ಕೂಡಬೇಕು. ನೀವು ಆ ದಿನದಂದು ಯಾವ ದುಡಿಮೆಯನ್ನೂ ಮಾಡಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಸರ್ವೇಶ್ವರನಿಗೆ ಹಬ್ಬವನ್ನು ಆಚರಿಸಬೇಕು.


‘ಏಳನೆಯ ತಿಂಗಳಿನ ಮೊದಲನೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆ ಸೇರಬೇಕು. ಅದು ನಿಮಗೆ ಕೊಂಬೂದುವ ದಿನ.


‘ಪಾಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ನೈವೇದ್ಯ ಮಾಡಬೇಕು. ಆ ಪ್ರಥಮ ಫಲಾರ್ಪಣೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆಸೇರಬೇಕು.


ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು; ಸರ್ವೇಶ್ವರನಿಗೆ ದಹನಬಲಿಯನ್ನು ಸಮರ್ಪಿಸಬೇಕು.


ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂದು ಪ್ರಕಟಿಸಬೇಕು. ಅಂದು ಯಾವ ದುಡಿಮೆಯನ್ನು ಕೈಗೊಳ್ಳಬಾರದು. ನೀವು ಎಲ್ಲೇ ಇರಲಿ ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರುವುದು.


ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು.


ಮೊದಲನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು.


ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನ ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಸಭೆಸೇರಬೇಕು. ಆ ದಿನದಲ್ಲಿ ಯಾವ ದುಡಿಮೆಯನ್ನೂ ಮಾಡಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು