Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:26 - ಕನ್ನಡ ಸತ್ಯವೇದವು C.L. Bible (BSI)

26 ‘ಪಾಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ನೈವೇದ್ಯ ಮಾಡಬೇಕು. ಆ ಪ್ರಥಮ ಫಲಾರ್ಪಣೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 [ಪಸ್ಕವಾದ ಏಳು] ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮ ಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ನಿಮ್ಮ ಪ್ರಥಮಫಲಗಳ ಹಬ್ಬದಲ್ಲಿ ಅಂದರೆ ವಾರಗಳ ಹಬ್ಬದಲ್ಲಿ ನೀವು ಹೊಸದಾಗಿ ಬೆಳೆದ ಗೋಧಿಯನ್ನು ಯೆಹೋವನಿಗೆ ಅರ್ಪಿಸುವಾಗ, ದೇವರನ್ನು ಆರಾಧಿಸಲು ನೀವು ಸಭೆ ಸೇರಬೇಕು. ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:26
13 ತಿಳಿವುಗಳ ಹೋಲಿಕೆ  

“ಹೊಸ ಗೋದಿ ಬೆಳೆಯ ಪ್ರಥಮ ಸಮರ್ಪಣೆಯ, ಅಂದರೆ (ಪಾಸ್ಕವಾದ ಏಳು) ವಾರಗಳ ಮೇಲೆ ನೀವು ಸುಗ್ಗಿಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಬೆಳೆ ಒಕ್ಕಣೆಯ ಹಬ್ಬವನ್ನು ಆಚರಿಸಬೇಕು.


“ಅಲ್ಲದೆ ನೀವು ಬಿತ್ತನೆ ಮಾಡಿದ ಹೊಲಗದ್ದೆಗಳಲ್ಲಿ ಮೊದಲನೆಯ ಫಲ ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಅಂದರೆ ಹೊಲ ತೋಟಗಳಿಂದ ನೀವು ಬೆಳೆಯನ್ನು ಕೂಡಿಸುವಾಗ, ಸುಗ್ಗಿಯ (ಫಲಸಂಗ್ರಹದ) ಹಬ್ಬವನ್ನು ಆಚರಿಸಬೇಕು.


“ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿಗೆ ತಂದೊಪ್ಪಿಸಬೇಕು.


ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಮೊದಲನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು.


ಆ ದಿನ ಸರ್ವೇಶ್ವರನಿಗೆ ಸುಗಂಧ ಸುವಾಸನೆಯುಂಟು ಮಾಡುವುದಕ್ಕಾಗಿ ಎರಡು ಹೋರಿ, ಒಂದು ಟಗರು, ಹಾಗು ವರ್ಷದ ಏಳು ಕುರಿ ಇವುಗಳನ್ನು,


‘ಏಳನೆಯ ತಿಂಗಳಿನ ಮೊದಲನೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆ ಸೇರಬೇಕು. ಅದು ನಿಮಗೆ ಕೊಂಬೂದುವ ದಿನ.


ಮೊದಲನೆಯ ದಿನದಲ್ಲೇ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲೂ ದೇವಾರಾಧನೆಗಾಗಿ ಸಭೆಸೇರಬೇಕು. ಈ ಎರಡೂ ದಿವಸಗಳಲ್ಲಿ ಯಾವ ಕೆಲಸವನ್ನೂ ಮಾಡಕೂಡದು. ಊಟಕ್ಕೆ ಬೇಕಾದುದನ್ನು ಮಾತ್ರ ಮಾಡಬಹುದು.


ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಅಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು