Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:9 - ಕನ್ನಡ ಸತ್ಯವೇದವು C.L. Bible (BSI)

9 ‘ಪ್ರತಿದಿನ ಅರ್ಪಿಸಬೇಕಾದ ದಹನಬಲಿ ಹಾಗು ಅದಕ್ಕೆ ಸಂಬಂಧಿಸಿದ ಪಾನದ್ರವ್ಯ ಇವುಗಳ ಜೊತೆಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9-10 ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮವು, ಅದಕ್ಕೆ ಸೇರಿದ ಪಾನದ್ರವ್ಯವು ಇವುಗಳನ್ನಲ್ಲದೆ ನೀವು ಸಬ್ಬತ್‍ದಿನದಲ್ಲಿ ಹೆಚ್ಚಾಗಿ ಎರಡು ಪೂರ್ಣಾಂಗವಾದ ವರುಷದ ಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಗೋದಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 “ಸಬ್ಬತ್‌ದಿನದಲ್ಲಿ ಎರಡು ಪೂರ್ಣಾಂಗವಾದ ಒಂದು ವರ್ಷದ ಗಂಡುಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರೆಸಿದ ಆರು ಸೇರು ಗೋಧಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಕ್ರಮವಾಗಿ ಅರ್ಪಿಸತಕ್ಕ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪ್ರತಿಸಬ್ಬತ್ ದಿನ ಸರ್ವಾಂಗಹೋಮವನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಆದರೆ ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನೂ, ಓಲಿವ್ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಗೋಧಿಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:9
12 ತಿಳಿವುಗಳ ಹೋಲಿಕೆ  

“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ಇದಲ್ಲದೆ, ತಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರ ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ ಅವರಿಗೂ ಸಂಕೇತವಾದ ಸಬ್ಬತ್ ದಿನಗಳನ್ನು ಅವರಿಗೆ ನೇಮಿಸಿದೆ.


ಸಂಜೆ ಎರಡನೇ ಕುರಿಯನ್ನು ದಹನಬಲಿ ಕೊಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯ ಹಾಗು ಪಾನದ್ರವ್ಯಗಳನ್ನು ಸಮರ್ಪಿಸಬೇಕು.


ನೀವು ಸಬ್ಬತ್ ದಿನದಂದು ಹೆಚ್ಚಾಗಿ ಎರಡು ಕಳಂಕರಹಿತವಾದ ವರ್ಷದ ಕುರಿಗಳನ್ನು ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಆರು ಸೇರು ಗೋದಿಹಿಟ್ಟನ್ನು ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು.


ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.


ಮೋಶೆಯ ಆಜ್ಞೆಯಂತೆ, ಸಬ್ಬತ್‍ದಿನ, ಅಮಾವಾಸ್ಯೆ, ಇವುಗಳಲ್ಲೂ ಹುಳಿರಹಿತ ರೊಟ್ಟಿಗಳ ಜಾತ್ರೆ, ಪಂಚಾಶತ್ತಮ ದಿನದ ಜಾತ್ರೆ, ಪರ್ಣಕುಟೀರಗಳ ಜಾತ್ರೆ ಎಂಬೀ ಮೂರು ವಾರ್ಷಿಕ ಜಾತ್ರೆಗಳಲ್ಲೂ ಆಯಾ ದಿವಸಗಳಿಗೆ ನೇಮಕವಾದ ದಹನಬಲಿಗಳನ್ನು ಸಮರ್ಪಿಸುತ್ತಿದ್ದನು.


“ಸಬ್ಬತ್‍ದಿನದಲ್ಲಿ ರಾಜನು ಸರ್ವೇಶ್ವರನಿಗೆ ಕಳಂಕರಹಿತವಾದ ಆರು ಕುರಿಗಳನ್ನೂ ಕಳಂಕರಹಿತವಾದ ಒಂದು ಟಗರನ್ನೂ ದಹನಬಲಿಯಾಗಿ ಅರ್ಪಿಸತಕ್ಕದ್ದು.


ಅದಕ್ಕೆ ಅವನು, “ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ತೂ ಅಲ್ಲ, ಈ ದಿನ ಹೋಗಿ ಪ್ರಯೋಜನವಿಲ್ಲ,” ಎಂದನು.


ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು