Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:6 - ಕನ್ನಡ ಸತ್ಯವೇದವು C.L. Bible (BSI)

6 ಅಮಾವಾಸ್ಯೆಯಲ್ಲೂ ಪ್ರತಿದಿನವೂ ಸಲ್ಲಿಸುವ ದಹನಬಲಿಗಳ ಹಾಗು ಅವುಗಳಿಗೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು. ಅವು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಮಾವಾಸ್ಯೆಯಲ್ಲಿಯೂ ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮಗಳನ್ನೂ ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಪ್ರತಿ ತಿಂಗಳಿನ ಮತ್ತು ನಿತ್ಯವಾದ ದಹನಬಲಿಗಳಿಗೆ ಹೆಚ್ಚುವರಿಯಾಗಿ ಅವುಗಳ ಧಾನ್ಯ ಅರ್ಪಣೆಯನ್ನು ಮತ್ತು ಪಾನ ಅರ್ಪಣೆಗಳನ್ನು ನಿರ್ದಿಷ್ಟಪಡಿಸಿದಂತೆ ಸಮರ್ಪಣೆಯಾಗಬೇಕು, ಅವು ಯೆಹೋವ ದೇವರಿಗೆ ಸುವಾಸನೆಗಾಗಿ ಅರ್ಪಿಸುವ ದಹನಬಲಿಯಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:6
14 ತಿಳಿವುಗಳ ಹೋಲಿಕೆ  

ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಕುಟೀರಗಳ ಜಾತ್ರೆಯನ್ನು ಆಚರಿಸಿ, ದಿನಕ್ಕೆ ಇಷ್ಟಿಷ್ಟೆಂಬ ವಿಧಿಗನುಸಾರವಾಗಿ ಪ್ರತಿದಿನವೂ ದಹನಬಲಿಗಳನ್ನರ್ಪಿಸಿದರು.


ನೈವೇದ್ಯಕ್ಕಾಗಿ ಆ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧಿಸಿದ ಧಾನ್ಯಪಾನಗಳನ್ನು ಒಪ್ಪಿಸಬೇಕು;-


ಆ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧಿಸಿದ ಪ್ರಕಾರ ಧಾನ್ಯ ಹಾಗು ಪಾನಗಳನ್ನು ಒಪ್ಪಿಸಬೇಕು.


ಆಗ ಅವರೆಲ್ಲರು ಒಟ್ಟಿಗೆ ಸೇರಿ ಸರ್ವೇಶ್ವರನಿಗೆ ಸುಗಂಧ ಕಾಣಿಕೆಯಾಗಿ ಹಾಗೂ ದಹನಬಲಿಯಾಗಿ ಒಂದು ಹೋರಿಯನ್ನು ಅರ್ಪಿಸಬೇಕು; ನೈವೇದ್ಯವಾಗಿ ನಿಯಮಿತ ಧಾನ್ಯದ್ರವ್ಯಗಳನ್ನು ಹಾಗೂ ಪಾನದ್ರವ್ಯಗಳನ್ನೂ ಅರ್ಪಿಸಬೇಕು; ಅಲ್ಲದೆ ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ನಿಮ್ಮಲ್ಲಿ ಅನ್ಯದೇಶಿಯನೊಬ್ಬನು ಪ್ರವಾಸಿಯಾಗಿದ್ದು ಸರ್ವೇಶ್ವರನಿಗೆ ಪಾಸ್ಕ ಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ ಅದನ್ನು ವಿಧಿನಿಯಮಗಳ ಅನುಸಾರವೇ ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.


“ನೀನು ಆರೋನನಿಗೂ ಅವನ ವಂಶದವರಿಗೂ ಈ ಕೆಳಕಂಡ ದಹನ ಬಲಿಯ ಈ ನಿಯಮಗಳನ್ನು ಆಜ್ಞಾಪಿಸು: ದಹನ ಬಲಿ ದ್ರವ್ಯವು ರಾತ್ರಿಯೆಲ್ಲಾ, ಮರುದಿನದ ಬೆಳಗಿನವರೆಗೂ ಬಲಿಪೀಠದ ಮೇಲೆ ಉರಿಯುತ್ತಿರಬೇಕು. ಅದರಿಂದಲೇ ಬಲಿಪೀಠದ ಮೇಲಿನ ಬೆಂಕಿ ಹೊತ್ತಿ ಉರಿಯುತ್ತಿರಬೇಕು.


ಆ ದಿನ ಸರ್ವೇಶ್ವರನಿಗೆ ಸುಗಂಧ ಸುವಾಸನೆಯುಂಟು ಮಾಡುವುದಕ್ಕಾಗಿ ಎರಡು ಹೋರಿ, ಒಂದು ಟಗರು, ಹಾಗು ವರ್ಷದ ಏಳು ಕುರಿ ಇವುಗಳನ್ನು,


ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ಅವನು ತಂದ ಕಾಣಿಕೆಗಳು: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಬೆಳ್ಳಿಯ ಒಂದು ಹರಿವಾಣ; 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು


ಆ ಬಲಿಪ್ರಾಣಿಯೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದೂವರೆ ಸೇರು ಎಣ್ಣೆ ಬೆರೆಸಿದ ಮೂರು ಸೇರು ಗೋದಿಯ ಹಿಟ್ಟನ್ನು ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು