Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:15 - ಕನ್ನಡ ಸತ್ಯವೇದವು C.L. Bible (BSI)

15 ಅನಂತರ ಅವನು ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಅವನು ಅವುಗಳ ಬಗ್ಗೆ ಕೇಳಿ ಸ್ವಲ್ಪ ದಿನಗಳಾದ ಮೇಲೆ ಆಕೆಯ ಹರಕೆಗಳನ್ನಾಗಲಿ ಆಣೆಗಳನ್ನಾಗಲಿ ರದ್ದುಪಡಿಸಿದರೆ, ಆಕೆಯ ಹರಕೆಯನ್ನು ಮುರಿದದ್ದಕ್ಕಾಗಿ ಅವನು ಶಿಕ್ಷೆಯನ್ನು ಅನುಭವಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ, ಅವನೇ ಅವಳ ಅಕ್ರಮವನ್ನು ಹೊರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:15
7 ತಿಳಿವುಗಳ ಹೋಲಿಕೆ  

“ಈ ಕೆಳಕಂಡ ಸಂದರ್ಭಗಳಲ್ಲಿ ಪಾಪಪರಿಹಾರಕ ಬಲಿಗಳನ್ನು ಒಪ್ಪಿಸಬೇಕಾಗುತ್ತದೆ: ಒಬ್ಬನು ತಾನು ಕಂಡು ಕೇಳಿದ್ದಕ್ಕೆ ನ್ಯಾಯಸ್ಥಾನದಲ್ಲಿ ಸಾಕ್ಷಿಹೇಳಬೇಕೆಂದು ಅಧಿಕೃತವಾದ ಕರೆಯಿದ್ದರೂ ಸಾಕ್ಷಿ ಹೇಳದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುತ್ತವೆ. ಗಂಡನು ರದ್ದುಮಾಡಿದ್ದರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.


ಆದರೆ ಗಂಡನು, ಕೇಳಿದಾಗಲೆ ಬೇಡವೆಂದು ಆಜ್ಞೆ ಮಾಡಿದರೆ ಆ ಹರಕೆ ಇಲ್ಲವೆ ಆ ಅವಿಚಾರ ಪ್ರತಿಜ್ಞೆ ನಿರರ್ಥಕವಾಗುತ್ತವೆ. ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.


ಆದರೆ ಅವಳ ತಂದೆ ಆ ಸಂಗತಿಯನ್ನು ತಿಳಿದು ಹಾಗೆ ಮಾಡಬಾರದೆಂದು ಆಜ್ಞೆ ಮಾಡಿದರೆ ಅವಳು ಮಾಡಿದ ಹರಕೆ ಹಾಗೂ ಪ್ರತಿಜ್ಞೆಗಳು ವ್ಯರ್ಥವಾಗುತ್ತವೆ. ತಂದೆ ಬೇಡವೆಂದು ಹೇಳಿದ್ದರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.


ಆದರೆ ಅವಳ ಗಂಡ ಯಾವ ಅಡ್ಡಿಯನ್ನೂ ಮಾಡದೆ ದಿನದಿನಕ್ಕೂ ಸುಮ್ಮನಿದ್ದರೆ ಅವಳ ಹರಕೆಗಳನ್ನೂ ಅವನು ಅನುಮೋದಿಸಿದಂತಾಗುವುದು.


ಇವೇ ಗಂಡಹೆಂಡಿರ ವಿಷಯವಾಗಿ ಹಾಗು ಇನ್ನೂ ಮದುವೆಯಿಲ್ಲದ ಪುತ್ರಿ ಮತ್ತು ಅವಳ ತಂದೆಯ ವಿಷಯವಾಗಿ ಸರ್ವೇಶ್ವರ ಸ್ವಾಮಿ ಕೊಟ್ಟ ನಿಯಮಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು