Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:16 - ಕನ್ನಡ ಸತ್ಯವೇದವು C.L. Bible (BSI)

16 ಪೆಗೋರದ ಬಾಳನ ವಿಷಯದಲ್ಲಿ ಬಿಳಾಮನ ದುರಾಲೋಚನೆಯನ್ನು ಅನುಸರಿಸಿ, ಇಸ್ರಯೇಲರನ್ನು ಸರ್ವೇಶ್ವರನಿಗೆ ದ್ರೋಹಿಗಳನ್ನಾಗಿಸಿ, ಸಮಾಜದವರಲ್ಲಿ ಘೋರ ವ್ಯಾಧಿಯುಂಟಾಗುವಂತೆ ಮಾಡಿದವರು ಅವರೇ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲ್ಯರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿಯುಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:16
11 ತಿಳಿವುಗಳ ಹೋಲಿಕೆ  

ಇವರು ಹಾದಿತಪ್ಪಿದವರು, ಸನ್ಮಾರ್ಗವನ್ನು ತ್ಯಜಿಸಿದವರು; ಬೆಯೋರನ ಮಗ ಬಿಳಾಮನ ದಾರಿಯನ್ನು ಹಿಡಿದವರು.


ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.


ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೆ? ಅದರ ನಿಮಿತ್ತ ಸರ್ವೇಶ್ವರನ ಸಭೆಗೇ ಜಾಡ್ಯ ತಗಲಿತು. ಆದ್ದರಿಂದ ನಾವು ಇಂದಿಗೂ ಶುದ್ಧರಾಗಲಿಲ್ಲ.


ಪೆಗೋರದ ಬಾಳ್ ದೇವತೆಯ ವಿಷಯದಲ್ಲಿ ಸರ್ವೇಶ್ವರ ಮಾಡಿದ ಕಾರ್ಯವನ್ನು ನೀವು ನೋಡಿದ್ದೀರಷ್ಟೆ; ಆ ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆಯಿಂದ ನಾಶಮಾಡಿದರಲ್ಲವೆ?


ಆಗಲಿ, ನಾನು ನನ್ನ ಸ್ವಜನರ ಬಳಿಗೆ ತೆರಳುತ್ತೇನೆ. ಆದರೆ ಈ ಜನರು ನಿನ್ನ ಜನರಿಗೆ ಕೊನೆಗೆ ಏನು ಮಾಡುವರೋ ಅದನ್ನು ತಿಳಿಸುತ್ತೇನೆ ಕೇಳು,” ಎಂದು ಹೇಳಿ


ವೇಶ್ಯೆ ಒಂದು ಆಳವಾದ ಬಾವಿ; ವ್ಯಭಿಚಾರಿಣಿ ಇಕ್ಕಟ್ಟಾದ ಗುಳಿ.


ಅವರು ಪೆಗೋರದಲ್ಲಿ ನಡೆದ ಘಟನೆಗಳಲ್ಲೂ ತಮ್ಮ ನಾಯಕನ ಮಗಳಾದ ಕೊಜ್ಜೀ ಎಂಬ ಸ್ವಕುಲಸ್ತ್ರೀಯ ವಿಷಯದಲ್ಲೂ ನಿಮ್ಮನ್ನು ಮೋಸಗೊಳಿಸಿದ್ದಾರೆ. ನಿಮಗೆ ಕೇಡುಮಾಡಿದ್ದಾರೆ,” ಎಂದರು. ಆ ಮಹಿಳೆ ಹತಳಾದುದು ಪೆಗೋರದ ಘಟನೆಗಳ ನಿಮಿತ್ತ ದೊಡ್ಡ ರೋಗ ಬಂದಾಗ.


ಸಾವಿಗಿಂತ ಹೆಚ್ಚು ವಿಷಕರವಾದ ವಿಷಯವೊಂದು ನನಗೆ ಕಂಡುಬಂದಿತು. ಅದು ಯಾವುದೆಂದರೆ - ಕೆಟ್ಟ ಹೆಂಗಸು. ಅವಳು ತೋರಿಸುವ ಪ್ರೀತಿ ಒಂದು ಬೋನು, ಸಿಕ್ಕಿಸಿಕೊಳ್ಳುವ ಒಂದು ಬಲೆ; ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯಾದರೋ ಅವಳ ಕೈಗೆ ಸಿಕ್ಕಿಬೀಳುವನು.


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಹಾಗು ರೆಬಾ ಎಂಬ ಮಿದ್ಯಾನರ ಐದು ಮಂದಿ ರಾಜರು ಇದ್ದರು. ಅದೂ ಅಲ್ಲದೆ ಬೆಯೋರನ ಮಗ ಬಿಳಾಮನನ್ನು ಕತ್ತಿಯಿಂದ ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು