Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:41 - ಕನ್ನಡ ಸತ್ಯವೇದವು C.L. Bible (BSI)

41 ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಈ ಕಪ್ಪವನ್ನು ಸರ್ವೇಶ್ವರನಿಗೆ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಮೋಶೆಯು ಯೆಹೋವನ ಅಪ್ಪಣೆಯ ಮೇರೆಗೆ ಆ ಕಪ್ಪವನ್ನೆಲ್ಲ ಯೆಹೋವನಿಗೆ ಕೊಡುಗೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಮೋಶೆಯು ಯೆಹೋವ ದೇವರಿಗೆ ಪಡೆಯುವ ಕಪ್ಪವನ್ನು ಯಾಜಕನಾದ ಎಲಿಯಾಜರನಿಗೆ ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:41
14 ತಿಳಿವುಗಳ ಹೋಲಿಕೆ  

“ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲಾ ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರಿಗೂ ಸಲ್ಲಬೇಕು. ಸದಾಕಾಲಕ್ಕೂ ಇದನ್ನು ನಾನು ನಿನಗೆ ಅನುಗ್ರಹಿಸಿದ್ದೇನೆ. ಇದು ನನ್ನ ಸನ್ನಿಧಿಯಲ್ಲಿ ನಿನ್ನೊಡನೆ ಮತ್ತು ನಿನ್ನ ಸಂತತಿಯೊಡನೆ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.”


ಸರ್ವೇಶ್ವರ ಆರೋನನಿಗೆ ಹೀಗೆಂದು ಆಜ್ಞಾಪಿಸಿದರು: “ಇಸ್ರಯೇಲರು ನನಗಾಗಿ ಮೀಸಲಾಗಿಟ್ಟು ಸಮರ್ಪಿಸುವ ಪದಾರ್ಥಗಳನ್ನೆಲ್ಲ ಅಂದರೆ ಪ್ರತಿಷ್ಠಾಪಿತವಾದ ವಸ್ತುಗಳನ್ನೆಲ್ಲಾ ನಿನಗೂ ನಿನ್ನ ಸಂತತಿಯವರಿಗೂ ದಾನಮಾಡಿದ್ದೇನೆ. ಅವು ಸದಾಕಾಲ ನಿಮಗೆ ಸಲ್ಲಬೇಕಾದ ಪಾಲು.


ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು.


ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು.


ಇಸ್ರಯೇಲಿನ ಜನರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ಪವಿತ್ರ ವಸ್ತುಗಳೆಲ್ಲವೂ ಯಾಜಕನವುಗಳಾಗಿಯೇ ಇರಬೇಕು.


ಒಬ್ಬನು ಸರ್ವೇಶ್ವರನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದೊಪ್ಪಿಸುತ್ತಾನೋ ಅದು ಅವನದಾಗಿಯೇ ಇರಬೇಕು.


16,000 ಕನ್ಯೆಯರಲ್ಲಿ 32 ಮಂದಿ ಸರ್ವೇಶ್ವರನಿಗೆ ಬಂದ ಕಪ್ಪ.


ಸೈನಿಕರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿದ ಮಿಕ್ಕ ಅರ್ಧಭಾಗದ ವಿವರ ಇದು:


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಯೇಲರು ಅಲ್ಲಿಂದ ಹೊರಟು ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು