Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:29 - ಕನ್ನಡ ಸತ್ಯವೇದವು C.L. Bible (BSI)

29 “ಗಾದ್ಯರಲ್ಲೂ ರೂಬೇನ್ಯರಲ್ಲೂ ಯುದ್ಧಸನ್ನದ್ಧರಾದವರೆಲ್ಲರು ನಿಮ್ಮೊಡನೆ ಜೋರ್ಡನ್ ನದಿಯನ್ನು ದಾಟಿ ಸರ್ವೇಶ್ವರನ ಸಮ್ಮುಖದಲ್ಲಿ ಯುದ್ಧಮಾಡಿದ್ದೇ ಆದರೆ ಕಾನಾನ್ ನಾಡು ನಿಮ್ಮ ಸ್ವಾಧೀನಕ್ಕೆ ಬಂದಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸೊತ್ತಾಗಿ ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆಯು ಅವರಿಗೆ, “ಗಾದ್ಯರಲ್ಲಿಯೂ, ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ನದಿಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವನ್ನು ನೀವು ಸ್ವಾಧೀನಮಾಡಿಕೊಂಡಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವುದಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಗಾದ್ಯರಲ್ಲಿಯೂ ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ಹೊಳೆಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವು ನಿಮ್ಮ ಸ್ವಾಧೀನಕ್ಕೆ ಬಂದಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವದಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮೋಶೆ ಅವರಿಗೆ, “ಗಾದ್ ಮತ್ತು ರೂಬೇನ್ ಕುಲಗಳಿಂದ ಯುದ್ಧಕ್ಕಾಗಿ ಆರಿಸಲ್ಪಟ್ಟವರು ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿ ಆ ದೇಶವನ್ನು ಗೆದ್ದುಕೊಂಡರೆ, ನೀವು ಅವರಿಗೆ ಗಿಲ್ಯಾದ್ ಪ್ರಾಂತ್ಯವನ್ನು ಸ್ವಾಸ್ತ್ಯವಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೋಶೆಯು ಅವರಿಗೆ, “ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಎಲ್ಲರೂ ಯುದ್ಧಕ್ಕೆ ಸಿದ್ಧವಾಗಿದ್ದು, ನಿಮ್ಮ ಸಂಗಡ ಯೊರ್ದನ್ ನದಿಯನ್ನು ಯೆಹೋವ ದೇವರ ಮುಂದೆ ದಾಟಿದರೆ, ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸೊತ್ತಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:29
10 ತಿಳಿವುಗಳ ಹೋಲಿಕೆ  

ಮೋಶೆ ಅವರ ಬಗ್ಗೆ ಮಹಾಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಹಾಗು ಇಸ್ರಯೇಲರ ಕುಲನಾಯಕರಿಗೂ ಹೀಗೆಂದು ಆಜ್ಞೆಮಾಡಿದನು:


ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ನಾಡಿನಲ್ಲೇ ಅವರಿಗೆ ಸೊತ್ತು ಸಿಗಲಿ.”


ಗಿಲ್ಯಾದ್ ನಾಡು, ಗೆಷ್ಯೂರ ಮತ್ತು ಮಾಕತೀಯರ ಪ್ರಾಂತ್ಯಗಳು, ಹೆರ್ಮೋನ್ ಬೆಟ್ಟದ ಮೇಲಿನ ಪ್ರದೇಶ


ಆದರೆ ನಾವು ಇಸ್ರಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವ ತನಕ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆಯೇ ನಡೆಯುತ್ತೇವೆ. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಕೋಟೆ ಕಟ್ಟಿದ ಊರುಗಳಲ್ಲಿ ವಾಸಿಸಲಿ. ಏಕೆಂದರೆ ಈ ನಾಡಿನ ನಿವಾಸಿಗಳ ಭಯವಿದೆ.


ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರ ಸಹಿತವಾಗಿ ಈ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಕುಲದ ಅರ್ಧಜನರಿಗೂ ಶಾಶ್ವತ ಸೊತ್ತಾಗಿ ಕೊಟ್ಟನು.


ಉಳಿದ ಎರಡುವರೆ ಕುಲಗಳ ಜನರಿಗೆ ಜೋರ್ಡನಿನ ಆಚೆಯಲ್ಲಿ ಮೋಶೆಯೇ ಸೊತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಡಲಿಲ್ಲ.


ಲೇವಿಯರಿಗೆ ನಿಮ್ಮ ಹಾಗೆ ಪಾಲು ಸಿಕ್ಕುವುದಿಲ್ಲ. ಸರ್ವೇಶ್ವರನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸೊತ್ತು. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಜೋರ್ಡನಿನ ಪೂರ್ವದಿಕ್ಕಿನಲ್ಲಿ ಸರ್ವೇಶ್ವರನ ದಾಸ ಮೋಶೆಯಿಂದಲೇ ಸೊತ್ತು ಸಿಕ್ಕಿದೆ,” ಎಂದನು.


ಆಗ ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಇಸ್ರಯೇಲರನ್ನು ಬಿಟ್ಟು ಸರ್ವೇಶ್ವರನ ಆಜ್ಞೆಗನುಸಾರ ಮೋಶೆಯಿಂದ ತಮಗೆ ದೊರಕಿದ ಸೊತ್ತಾದ ಗಿಲ್ಯಾದ್ ನಾಡಿಗೆ ಹೋದರು.


ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.


ಒಂದು ದಿನ ಸೌಲನು, “ಇವನು ನನ್ನ ಕೈಯಿಂದ ಸಾಯಬಾರದು; ಫಿಲಿಷ್ಟಿಯರ ಕೈಯಿಂದಲೇ ಸಾಯಲಿ,” ಎಂದು ಒಂದು ಉಪಾಯ ಹೂಡಿದನು. ದಾವೀದನಿಗೆ, “ನೀನು ನನ್ನ ವೀರನಾಗಿ ಹೋಗಿ ಸರ್ವೇಶ್ವರನ ಯುದ್ಧಗಳನ್ನು ನಡೆಸು; ನಾನು ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಮದುವೆಮಾಡಿಕೊಡುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು