Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:3 - ಕನ್ನಡ ಸತ್ಯವೇದವು C.L. Bible (BSI)

3 ಮೊದಲನೆಯ ತಿಂಗಳಿನ ಹದಿನೈದನೆಯ ದಿನ, ಅಂದರೆ ಪಾಸ್ಕಹಬ್ಬದ ಮರುದಿನ, ಇಸ್ರಯೇಲರು ಈಜಿಪ್ಟರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಅಂದರೆ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲ್ಯರು ಐಗುಪ್ತ್ಯರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೊದಲನೆ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ರಮ್ಸೇಸ್ ಪಟ್ಟಣವನ್ನು ಬಿಟ್ಟು ಹೊರಟರು. ಪಸ್ಕಹಬ್ಬದ ಮರುದಿನದಲ್ಲಿ ಇಸ್ರೇಲರು ಜಯದೊಂದಿಗೆ ತಮ್ಮ ಕೈಗಳನ್ನು ಎತ್ತಿಕೊಂಡು ಈಜಿಪ್ಟಿನಿಂದ ಹೊರಗೆ ನಡೆದರು. ಈಜಿಪ್ಟಿನ ಜನರೆಲ್ಲರೂ ಇದನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರ ಪ್ರಯಾಣಗಳ ವಿವರಗಳು ಯಾವುವೆಂದರೆ: ಅವರು ಮೊದಲನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪಸ್ಕಹಬ್ಬದ ಮರುದಿನ ಇಸ್ರಾಯೇಲರು ಸಮಸ್ತ ಈಜಿಪ್ಟನವರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:3
10 ತಿಳಿವುಗಳ ಹೋಲಿಕೆ  

ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.


ಚೈತ್ರಮಾಸದ ಈ ದಿನದಂದು ನೀವು ಹೊರಟವರು.


ಇಸ್ರಯೇಲರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಅವರಲ್ಲಿ ಮಹಿಳೆಯರನ್ನೂ ಮಕ್ಕಳನ್ನೂ ಬಿಟ್ಟು ಗಂಡಸರ ಸಂಖ್ಯೆಯೇ ಸುಮಾರು ಆರು ಲಕ್ಷವಿತ್ತು.


ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.


ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.


ಭೀತಿಯಿತ್ತಾ ಈಜಿಪ್ಟರಿಗೆ ಇಸ್ರಯೇಲರ ಬಗ್ಗೆ I ಈ ಕಾರಣ ಆನಂದಿಸಿದರು ಅವರು ಹೋದುದಕ್ಕೆ II


“ಎಲ್ಲ ಮಾಸಗಳಲ್ಲಿ ಇದೇ ನಿಮಗೆ ಆದಿ ಮಾಸವಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರಬೇಕು.


ಫರೋಹನ ಅಪ್ಪಣೆಯ ಮೇರೆಗೆ ಜೋಸೆಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಈಜಿಪ್ಟಿನಲ್ಲಿ ವಾಸಸ್ಥಾನವನ್ನು ನೇಮಿಸಿ, ಅದರಲ್ಲಿ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸೊತ್ತನ್ನು ಕೊಟ್ಟನು.


ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಇಸ್ರಯೇಲರು ತಮ್ಮ ಪ್ರಯಾಣಗಳಲ್ಲಿ ತಂಗಿದ್ದ ಸ್ಥಳಗಳ ಹೆಸರುಗಳನ್ನು ಮೋಶೆ ಸರ್ವೇಶ್ವರನ ಅಪ್ಪಣೆಯನ್ನು ಪಡೆದು ಬರೆದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು