Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:55 - ಕನ್ನಡ ಸತ್ಯವೇದವು C.L. Bible (BSI)

55 ನೀವು ಆ ನಾಡಿನ ನಿವಾಸಿಗಳನ್ನು ಹೊರಡಿಸದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆ ಆಗುವರು; ಪಕ್ಕೆ ತಿವಿಯುವ ಶೂಲಗಳಂತೆ ಆಗುವರು; ನೀವು ವಾಸಿಸುವ ನಾಡಿನಲ್ಲಿ ನಿಮಗೆ ಕಂಠಕಪ್ರಾಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ ಪಕ್ಕೆ ತಿವಿಯುವ ಶೂಲಗಳಂತೆಯೂ ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 “ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 “ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:55
11 ತಿಳಿವುಗಳ ಹೋಲಿಕೆ  

ನೀವು ಹೀಗೆ ಮಾಡುವುದಾದರೆ ನಾನು ಈ ನಾಡಿನ ನಿವಾಸಿಗಳನ್ನು ನಿಮ್ಮಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮನ್ನು ಉಪದ್ರವಪಡಿಸುವರು. ಅವರ ದೇವತೆಗಳು ನಿಮ್ಮನ್ನು ತಮ್ಮ ಉರುಳಿನಲ್ಲಿ ಸಿಕ್ಕಿಸಿಕೊಳ್ಳುವುವು ಎಂದು ನಿಮಗೆ ಮೊದಲೇ ಹೇಳಿದ್ದೇನೆ” ಎಂದನು.


ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು.


ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಸರ್ವೇಶ್ವರನಿಂದ ವಿಮುಖಗೊಳಿಸಿ ಇತರ ದೇವರುಗಳನ್ನು ಪೂಜಿಸುವಂತೆ ಮಾಡಬಹುದು. ಆಗ ಸರ್ವೇಶ್ವರ ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವರು.


ಅವರು ನಿಮ್ಮ ನಾಡಿನಲ್ಲಿ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರೋಧವಾಗಿ ನಿಮ್ಮಲ್ಲಿ ದ್ರೋಹಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯೆ ನಿಮಗೆ ಉರುಲಾಗುವುದು.


ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.”


ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಅಲ್ಲದೆ, ನಾನು ಅವರಿಗೆ ಮಾಡಯೋಚಿಸಿದಂತೆ ನಿಮಗೇ ಮಾಡುವೆನು’.”


ಉಳಿದಿರುವ ಈ ಜನಾಂಗಗಳ ಜೊತೆ ಸೇರಿಕೊಳ್ಳಬೇಡಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಬಾರದು, ಪ್ರಮಾಣ ಮಾಡಬಾರದು, ಅವುಗಳನ್ನು ಪೂಜಿಸಬಾರದು. ಅವುಗಳಿಗೆ ಸೇವೆ ಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು