Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:20 - ಕನ್ನಡ ಸತ್ಯವೇದವು C.L. Bible (BSI)

20 ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿ ಅವನ ಮೇಲೆ ಏನನ್ನಾದರೂ ಎಸೆಯುವುದರಿಂದಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವದರಿಂದಾಗಲಿ ಸಮಯನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವದರಿಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಯಾವನಾದರೂ ಮತ್ತೊಬ್ಬನನ್ನು ದ್ವೇಷಿಸಿ ನೂಕುವುದರಿಂದಾಗಲಿ ಉದ್ದೇಶಪೂರ್ವಕವಾಗಿ ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ, ಇಲ್ಲವೆ ನೂಕುವುದರಿಂದಲಾದರೂ, ಸಮಯ ನೋಡಿಕೊಂಡು ಅವನ ಮೇಲೆ ಯಾವುದನ್ನಾದರೂ ಬಲವಾಗಿ ಎಸೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:20
30 ತಿಳಿವುಗಳ ಹೋಲಿಕೆ  

ಕೊಲ್ಲಬೇಕೆಂಬ ಉದ್ದೇಶದಿಂದಲೆ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಬಲಿಪೀಠದ ಬಳಿಯಿದ್ದರೂ ಎಳೆದು ಅವನಿಗೆ ಮರಣ ದಂಡನೆ ಕೊಡಬೇಕು.”


“ಆದರೆ ಒಬ್ಬನು ಇನ್ನೊಬ್ಬನಲ್ಲಿ ದ್ವೇಷವನ್ನೇ ಸಾಧಿಸಿ, ಸಮಯನೋಡಿ ಅವನ ಮೇಲೆ ಬಿದ್ದು, ಅವನನ್ನು ಹೊಡೆದು ಕೊಂದು ತರುವಾಯ ಈ ನಗರಗಳಲ್ಲೊಂದಕ್ಕೆ ಓಡಿಹೋಗಬಹುದು. ಆಗ


ಅವನ ಕರುಳೆಲ್ಲಾ ಹೊರಗೆ ಬಂದುವು. ಎರಡನೆಯ ಸಾರಿ ಇರಿಯಬೇಕಾಗಿರಲಿಲ್ಲ; ಅಷ್ಟಕ್ಕೆ ಅವನು ಸತ್ತನು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.


ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.


ಆದರೆ ನೀವು ಅವರ ಮಾತನ್ನು ನಂಬಬೇಡಿ. ಏಕೆಂದರೆ, ನಾಲ್ವತ್ತಕ್ಕೂ ಹೆಚ್ಚು ಮಂದಿ ಅವನಿಗಾಗಿ ಹೊಂಚುಹಾಕಿ ಕಾದುಕೊಂಡಿರುತ್ತಾರೆ. ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿದ್ದಾರೆ. ಈಗ ಅವರು ನಿಮ್ಮ ಅನುಮತಿಯನ್ನು ಎದುರು ನೋಡುತ್ತಾ ಕಾಯುತ್ತಿದ್ದಾರೆ,” ಎಂದನು.


ಇಲ್ಲಿ ಅವನು ಮೂರು ತಿಂಗಳು ಕಳೆದನು. ಬಳಿಕ ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗುತ್ತಿದ್ದಾಗ , ಯೆಹೂದ್ಯರು ಅವನ ವಿರುದ್ಧ ಒಳಸಂಚು ಮಾಡುತ್ತಿರುವುದಾಗಿ ತಿಳಿದುಬಂದಿತು. ಆದುದರಿಂದ ಅವನು ಮಕೆದೋನಿಯದ ಮಾರ್ಗವಾಗಿ ಹಿಂದಿರುಗಲು ನಿರ್ಧರಿಸಿದನು.


ಯೇಸುವನ್ನು ಆ ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು.


ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ.


ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.


ಹಗೆಗಾರನ ತುಟಿಯಲ್ಲಿ ಸ್ನೇಹಭಾವದ ನಟನೆ; ಹೊಟ್ಟೆಯಲ್ಲಾದರೊ ಹುದುಗಿದೆ ವಂಚನೆ.


“ನೇರ ಮನಸ್ಕರನು ಕೊಲ್ಲಲು ಇರುಳೊಳು I ಬಿಲ್ಲು ಬಗ್ಗಿಸಿಹರಿದೋ ಆ ದುರುಳರು I ಎದೆಗೆ ಬಾಣವನು ಹೂಡಿ ನಿಂತಿರುವರು” II “ಓಡಿರಿ, ಪಕ್ಷಿಪಾರಿವಾಳಗಳಂತೆ ಗಿರಿಶಿಖರಗಳಿಗೆ I ಅಸ್ತಿವಾರವೆ ಕಿತ್ತಿರಲು, ಗತಿಯೆನಿತು ಸತ್ಯವಂತರಿಗೆ?” II


ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೇಮಾತನ್ನಾಗಲಿ ಕೆಟ್ಟಮಾತನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.


ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ?


ದಾವೀದನು ರಾಮಾದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದನು. “ನಿನ್ನ ತಂದೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ನಾನೇನು ಮಾಡಿದೆ? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹ ಯಾವುದು?” ಎಂದನು.


ಆಗ ಅವನು, “ನೀವು ಹೋಗಿ ದಾವೀದನಿಗೆ, ‘ಅರಸರು ಯಾವ ದಕ್ಷಿಣೆಯನ್ನೂ ಬಯಸುವುದಿಲ್ಲ; ಆದರೆ ಅವರ ಶತ್ರುಗಳಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರುಮಂದಿಯ ಮುಂದೊಗಲನ್ನು ತಂದುಕೊಟ್ಟರೆ ಸಾಕೆನ್ನುತ್ತಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು. (ದಾವೀದನನ್ನು ಫಿಲಿಷ್ಟಿಯರ ಕೈಯಿಂದಲೇ ಕೊಲ್ಲಿಸಬೇಕೆಂಬುದು ಅವನ ಉದ್ದೇಶವಾಗಿತ್ತು.)


ಸರ್ವೇಶ್ವರ ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು; ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಇದರಿಂದ ಕಾಯಿನನು ಕಡುಗೋಪಗೊಂಡನು; ಅವನ ಮುಖ ಸಿಂಡರಿಸಿತು.


ನರಹತ್ಯ ಮಾಡಿದವನನ್ನು ಕಂಡೊಡನೆ ಕೊಲ್ಲಬೇಕಾದವನು ಹತನಾದವನ ಸಮೀಪ ಬಂಧುವೇ.


ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ಕೂಡ ನರಹತ್ಯಗಾರನೆ. ಅಂಥವನಿಗೂ ಮರಣಶಿಕ್ಷೆಯಾಗಬೇಕು. ಹತನಾದವನ ಸಮೀಪಬಂಧು ಅವನನ್ನು ಕಂಡೊಡನೆ ಕೊಲ್ಲಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು