Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:22 - ಕನ್ನಡ ಸತ್ಯವೇದವು C.L. Bible (BSI)

22 “ಒಬ್ಬನು ಯಾವ ದ್ವೇಷವೂ ಇಲ್ಲದೆ, ಅಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹೊಂಚು ಕಾಯದೆ ಏನನ್ನಾದರೂ ಎಸೆಯುವುದರಿಂದಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “‘ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಅಕಸ್ಮಾತ್ತಾಗಿ ನೂಕುವದರಿಂದಾಗಲಿ ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವದರಿಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ನಿರುದ್ದೇಶದಿಂದ ಎಸೆದ ಯಾವುದೋ ವಸ್ತುವಿನಿಂದ ಒಬ್ಬನನ್ನು ಕೊಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ ‘ಆದರೆ ಶತ್ರುತ್ವವಿಲ್ಲದೆ ಆಕಸ್ಮಿಕವಾಗಿ ಅವನನ್ನು ನೂಕುವುದರಿಂದಲಾದರೂ, ಸಮಯ ಸಾಧಿಸದೆ ಯಾವುದಾದರೊಂದು ವಸ್ತುವನ್ನು ಅವನ ಮೇಲೆ ಎಸೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:22
8 ತಿಳಿವುಗಳ ಹೋಲಿಕೆ  

ಆಶ್ರಯಧಾಮಗಳಿಗಾಗಿ ಪಟ್ಟಣಗಳನ್ನು ನಿಗದಿಮಾಡಿರಿ. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.


ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು.


ಹತನಾದವನ ಹತ್ತಿರದ ಬಂಧು, ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ, ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಕೊಂದದ್ದು ಅಕಸ್ಮಾತ್ತಾಗಿ, ಹಳೆಯ ದ್ವೇಷದಿಂದೇನೂ ಅಲ್ಲ.


ನಿಮ್ಮಲ್ಲಿ ಯಾರಾದರು ಅರಿಯದೆ ಅಕಸ್ಮಾತ್ತಾಗಿ ನರಹತ್ಯೆ ಮಾಡಿದ್ದೇ ಆದರೆ ಅಂಥವನು ಅಲ್ಲಿಗೆ ಓಡಿಹೋಗಲಿ. ಹತನಾದವನ ಹತ್ತಿರದ ಬಂಧು ಮುಯ್ಯಿತೀರಿಸದಂತೆ ಆ ನಗರಗಳು ನಿಮಗೆ ಆಶ್ರಯ ಸ್ಥಾನವಾಗಿರಲಿ.


ಉದಾಹರಣೆಗೆ, ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿ ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿ ಅವನ ಮೇಲೆ ಏನನ್ನಾದರೂ ಎಸೆಯುವುದರಿಂದಾಗಲಿ,


ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ಕೂಡ ನರಹತ್ಯಗಾರನೆ. ಅಂಥವನಿಗೂ ಮರಣಶಿಕ್ಷೆಯಾಗಬೇಕು. ಹತನಾದವನ ಸಮೀಪಬಂಧು ಅವನನ್ನು ಕಂಡೊಡನೆ ಕೊಲ್ಲಲಿ.


ಕೊಲ್ಲುವಷ್ಟು ದೊಡ್ಡಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿದ್ದನೆ? ಹಾನಿಮಾಡಬೇಕೆಂಬ ಅಭಿಪ್ರಾಯ ಅವನದಾಗಿತ್ತೆ? ಎಂದು ವಿಚಾರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು