Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:15 - ಕನ್ನಡ ಸತ್ಯವೇದವು C.L. Bible (BSI)

15 ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:15
26 ತಿಳಿವುಗಳ ಹೋಲಿಕೆ  

ಕೆಹಾತ್ಯರಿಗೆ ಮಾತ್ರ ಏನನ್ನೂ ಕೊಡಲಿಲ್ಲ. ಏಕೆಂದರೆ ದೇವದರ್ಶನದ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲ ಮೇಲೆ ಹೊರಬೇಕಾಗಿತ್ತು.


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು.


ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾಗ್ರಿಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಮಿಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.


ಮಂಜೂಷವನ್ನು ತೆರೆದು ನೋಡಿದ ಬೇತ್ ಷೆಮೆಷಿನವರಾದ ಎಪ್ಪತ್ತು ಮಂದಿಯನ್ನು ಸರ್ವೇಶ್ವರ ನಾಶಮಾಡಿದರು. ಈ ವಿನಾಶಕ್ಕಾಗಿ ಬೇತ್ ಷೆಮೆಷಿನವರು ಗೋಳಾಡಿದರು.


ಲೇವಿಯರು ಅದನ್ನು ಗುದಿಗೆಗಳ ಮೇಲಿಟ್ಟು, ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ, ತಮ್ಮ ಹೆಗಲಮೇಲೆ ಹೊತ್ತುಕೊಂಡು ನಡೆದರು.


ಸರ್ವೇಶ್ವರನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದನಂತರ ದಾವೀದನು ಒಂದು ಎತ್ತನ್ನೂ ಒಂದು ಕೊಬ್ಬಿದ ಕರುವನ್ನೂ ಬಲಿದಾನ ಮಾಡಿದನು.


ಮೋಶೆ ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಸರ್ವೇಶ್ವರನ ಅಪ್ಪಣೆಗಳನ್ನೆಲ್ಲ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ಮಧ್ಯದಲ್ಲೇ ನಿಂತರು.


ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ, ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆ ಮತ್ತು ಆರೋನನು ಹಾಗೂ ಆರೋನನ ಮಕ್ಕಳು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು. ಅವರು ಇಸ್ರಯೇಲರ ಪರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕಾಗಿತ್ತು. ಬೇರೆ ಯಾರಾದರೂ ಆ ಕೆಲಸಕ್ಕೆ ಕೈ ಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕಾಗಿತ್ತು.


ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಜನರು ಹತ್ತಿರಕ್ಕೆ ಬಾರದಂತೆ ನೀನು ಬೆಟ್ಟದ ಸುತ್ತಲೂ ಒಂದು ಮೇರೆಯನ್ನು ಏರ್ಪಡಿಸು. ಮತ್ತು ಜನರಿಗೆ ‘ಎಚ್ಚರಿಕೆ, ನೀವು ಈ ಬೆಟ್ಟವನ್ನು ಏರಕೂಡದು; ಅದರ ಅಂಚನ್ನೂ ಮುಟ್ಟಕೂಡದು. ಮುಟ್ಟಿದವನಿಗೆ ಮರಣ ಶಿಕ್ಷೆಯಾಗುವುದು ನಿಶ್ಚಯ.


ಆ ಗುದಿಗೆಗಳನ್ನು ಆ ಬಳೆಗಳಿಗೆ ಸೇರಿಸಿದಾಗ ಅವು ಬಲಿಪೀಠವನ್ನು ಹೊರುವುದಕ್ಕಾಗಿ ಅದರ ಎರಡು ಕಡೆಗಳಲ್ಲಿ ಇರುವುವು.


ಆ ಧೂಪವನ್ನು ಸರ್ವೇಶ್ವರನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವುದು.


ಆಜ್ಞಾಶಾಸನಗಳಿರುವ ಗುಡಾರವನ್ನು ಹಾಗು ಅವರ ಸಾಮಾನು ಸರಂಜಾಮುಗಳನ್ನು ನೋಡಿಕೊಳ್ಳುವುದಕ್ಕೆ ಅವರನ್ನು ನೇಮಿಸಬೇಕು. ಅವರು ಆ ಗುಡಾರವನ್ನು ಅದರ ಉಪಕರಣಗಳನ್ನು ಹೊರುವವರಾಗಿರಬೇಕು. ಅದರ ಸೇವೆ ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಠಿಕೆಗಳು, ಮುಳ್ಳುಗಳು, ಸಲಿಕೆಗಳು ಹಾಗೂ ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.


ಪರಮ ಪವಿತ್ರವಾದ ವಸ್ತುಗಳ ಹತ್ತಿರಕ್ಕೆ ಬರುವಾಗ ಅವರು ಸಾಯದಂತೆ ಎಚ್ಚರಿಕೆ ವಹಿಸಿರಿ. ಆರೋನನು ಮತ್ತು ಅವನ ಮಕ್ಕಳು ಒಳಗೆ ಬಂದು ಅವರವರ ಕೆಲಸಗಳನ್ನು ಹೊರಬೇಕಾದ ಹೊರೆಗಳನ್ನು ಗೊತ್ತುಮಾಡಬೇಕು.


ಕೆಹಾತ್ಯರೇ ಒಳಗೆ ಬಂದು, ಒಂದು ಕ್ಷಣ ಮಾತ್ರವೂ ಆ ಪವಿತ್ರ ವಸ್ತುಗಳನ್ನು ನೋಡದಿರಲಿ; ನೋಡಿ ಸಾಯದಿರಲಿ.


ಲೇವಿಯರು ನಿನ್ನ ಅಪ್ಪಣೆ ಮೇರೆಗೆ ನಡೆದು ಇಡೀ ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಕೂಡದು; ಬಂದರೆ ಅವರು ಮಾತ್ರವಲ್ಲ ನೀವೂ ಕೂಡ ಸಾಯಬೇಕಾಗಬಹುದು.


ಚಾದೋಕನೂ ಅವನ ವಶದಲ್ಲಿದ್ದ ಲೇವಿಯರೆಲ್ಲರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು, ಅದನ್ನು ಜನರೆಲ್ಲರು ದಾಟಿ ಹೋಗುವವರೆಗೆ ಕೆಳಗಿಳಿಸಿದ್ದರು. ಎಬ್ಯಾತಾರನೂ ಬಂದಿದ್ದನು.


ಲೇವಿಯರು ಇನ್ನು ಮುಂದೆ ಅವರ ಗುಡಾರವನ್ನೂ ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲವೆಂದುಕೊಂಡು, ದಾವೀದನು ಈ ಪ್ರಕಾರ ವಿಧಿಸಿದನು:


ಆಗ ಸರ್ವೇಶ್ವರ ಮೋಶೆಗೆ, “ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಸರ್ವೇಶ್ವರನಾದ ನನ್ನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.


ಇಸ್ರಯೇಲರ ಹಿರಿಯರೆಲ್ಲರು ಹೀಗೆ ಕೂಡಿಬಂದಿರಲು ಯಾಜಕರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು