Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:49 - ಕನ್ನಡ ಸತ್ಯವೇದವು C.L. Bible (BSI)

49 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಯೊಬ್ಬನಿಗೆ ಅವನವನ ಕೆಲಸ ಹಾಗೂ ಹೊಣೆಯನ್ನು ಗೊತ್ತುಮಾಡಲಾಯಿತು. ಹೀಗೆ ಸರ್ವೇಶ್ವರನ ಆಜ್ಞೆಯ ಮೇರೆಗೆ ಜನಗಣತಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ ಹೊರೆಯೂ ಗೊತ್ತು ಮಾಡಲ್ಪಟ್ಟಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನೂ ಲೆಕ್ಕಿಸಲ್ಪಟ್ಟನು. ಪ್ರತಿಯೊಬ್ಬನಿಗೂ ವರ್ಗಾವಣೆಗಾಗಿ ವಸ್ತುಗಳನ್ನು ಕಟ್ಟುವ ಮತ್ತು ವರ್ಗಾವಣೆ ಕೆಲಸದ ಕರ್ತವ್ಯಗಳನ್ನು ಗೊತ್ತುಪಡಿಸಲಾಯಿತು. ಯೆಹೋವನು ಆಜ್ಞಾಪಿಸಿದ ಮೇರೆಗೆ ಇದು ಮಾಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ, ಹೊರುವುದಕ್ಕಾಗಿಯೂ ಜವಾಬ್ದಾರಿಕೆ ಕೊಡಲಾಯಿತು. ಹೀಗೆ ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಎಣಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:49
18 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ನಡೆದುಕೊಂಡರು.


ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕರ್ತವ್ಯಗಳು ಯಾವುವೆಂದರೆ -


“ಪರಿಚರ್ಯ ಮಾಡುವುದರಲ್ಲೂ ಹೊರೆಗಳನ್ನು ಹೊರುವುದರಲ್ಲೂ ಗೇರ್ಷೋನ್ಯರು ಮಾಡಬೇಕಾದ ಕರ್ತವ್ಯ ಇವು:


ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆ ಇದು:


ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಮೆರಾರೀಯರನ್ನು ಮೋಶೆ - ಆರೋನರು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಇತ್ತು.


ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಹಾಗು ಆರೋನರಿಂದ ಎಣಿಕೆಯಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾಗಿದ್ದವರು ಇಷ್ಟೇ ಮಂದಿ.


ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಯಂತೆ ಕೆಹಾತ್ಯರನ್ನು ಮೋಶೆ - ಆರೋನರು ಎಣಿಕೆಮಾಡಿದಾಗ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾಗಿದ್ದವರು ಇಷ್ಟೇ ಜನ.


ಸರ್ವೇಶ್ವರನ ಆಜ್ಞೆಯಂತೆ ವಿಮೋಚನೆಯ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಟ್ಟನು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇತರ ಇಸ್ರಯೇಲರ ಸಂಗಡ ಎಣಿಕೆಯಾಗಲಿಲ್ಲ.


ಆದರೆ ಲೇವಿಕುಲದ ಕುಟುಂಬಗಳು ಮೇಲ್ಕಂಡ ಲೆಕ್ಕದಲ್ಲಿ ಸೇರಿರಲಿಲ್ಲ.


ಸರ್ವೇಶ್ವರ ಸ್ವಾಮಿ, ಮೋಶೆಗೆ ಹೀಗೆಂದರು:


ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಗದ್ದಿಗೆ ಕಲ್ಲುಗಳನ್ನು, ಗೂಟಗಳನ್ನು, ಹಗ್ಗಗಳನ್ನು ಮತ್ತು ಅವುಗಳ ಎಲ್ಲ ಉಪಕರಣಗಳನ್ನು ಹೊರಬೇಕು. ಅವರವರ ಹೊರೆಗಳನ್ನೆಲ್ಲ ನೀವೇ ಹೆಸರಿಸಿ ಗೊತ್ತುಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು