Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:21 - ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರನು ನಿನ್ನ ಜನನೇಂದ್ರಿಯಗಳು ಬತ್ತಿಹೋಗುವಂತೆ, ನಿನ್ನ ಹೊಟ್ಟೆ ಉಬ್ಬುವಂತೆ ಮಾಡಿ, ನೀನು ನಿನ್ನ ಜನರ ಮಧ್ಯೆ ಶಾಪಗ್ರಸ್ತಳನ್ನಾಗಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ, ನಿನ್ನ ಹೊಟ್ಟೆಯು ಉಬ್ಬುವಂತೆ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇಮಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆಯೂ ಹೊಟ್ಟೆ ಉಬ್ಬುವಂತೆಯೂ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇವಿುಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ನೀನು ಈ ವಿಶೇಷ ಜಲವನ್ನು ಕುಡಿಯುವಾಗ, ನಿನಗೆ ಹಾನಿಯುಂಟಾಗುವುದು. ನಿನಗೆ ಮಕ್ಕಳಾಗುವುದಿಲ್ಲ. ನೀನು ಬಸುರಾಗಿದ್ದರೆ, ನಿನ್ನ ಮಗು ಸಾಯುವುದು. ಆಗ ನಿನ್ನ ಜನರು ನಿನ್ನನ್ನು ದೂರಮಾಡಿ ನಿನ್ನ ವಿರುದ್ಧವಾಗಿ ಕೆಟ್ಟ ಸಂಗತಿಗಳನ್ನು ಹೇಳುವರು.’ “ಬಳಿಕ ಯಾಜಕನು ಆ ಸ್ತ್ರೀಗೆ ಪ್ರಮಾಣ ಮಾಡಲು ಹೇಳಬೇಕು. ಅವಳು, ‘ನಾನು ಸುಳ್ಳಾಡಿದ್ದರೆ, ಈ ಕೆಟ್ಟ ಸಂಗತಿಗಳು ನನಗೆ ಸಂಭವಿಸಲಿ’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವನು. ನಿನ್ನ ಜನರು ನಿನ್ನನ್ನು ಶಪಿಸುವರು, ತಿರಸ್ಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:21
9 ತಿಳಿವುಗಳ ಹೋಲಿಕೆ  

ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:


ಆ ದಿವಸ ಸೌಲನು ಇಸ್ರಯೇಲರಿಗೆ, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕಾಗಿ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತ,” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹಳವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರಪದಾರ್ಥವನ್ನು ರುಚಿಸಿರಲಿಲ್ಲ.


ಅದೇ ಸಮಯಕ್ಕೆ ಯೆಹೋಶುವನು ಇಸ್ರಯೇಲರಿಂದ ಪ್ರಮಾಣ ಮಾಡಿಸಿ ಅವರಿಗೆ, “ಜೆರಿಕೋ ಎಂಬ ಈ ನಗರವನ್ನು ಕಟ್ಟುವುದಕ್ಕೆ ಕೈಹಾಕುವವನು ಸರ್ವೇಶ್ವರನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ! ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ,” ಎಂದು ಹೇಳಿದನು.


ಇವರಿಗೆ ಒದಗಿದ ಗತಿಯನ್ನು ನೆನೆದು, ಬಾಬಿಲೋನಿಯದಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಯಾರನ್ನಾದರು ಶಪಿಸುವಾಗ, ‘ಬಾಬಿಲೋನಿಯದ ಅರಸ ಬೆಂಕಿಯಲ್ಲಿ ಸುಟ್ಟು ಭಸ್ಮಮಾಡಿದ ಚಿದ್ಕೀಯನ ಹಾಗು ಅಹಾಬನ ಗತಿಯನ್ನೆ ಸರ್ವೇಶ್ವರ ನಿನಗೂ ತರಲಿ’ ಎಂದು ಶಾಪಹಾಕುವರು.


ಆಗ ಪೇತ್ರನು ತನ್ನನ್ನೇ ಶಪಿಸಿಕೊಳ್ಳಲಾರಂಭಿಸಿ, “ಆ ಮನುಷ್ಯನನ್ನು ನಾನು ಖಂಡಿತವಾಗಿ ಅರಿಯೆನು,” ಎಂದು ಆಣೆಯಿಟ್ಟು ಹೇಳಿದನು.


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ನಿನಗಾದರೋ ಕರುಳುಬೇನೆಯ ಕಠಿಣರೋಗ ಬರುವುದು. ಅದು ಬಹುದಿನಗಳವರೆಗೂ ವಾಸಿ ಆಗದು; ಕಡೆಯಲ್ಲಿ ನಿನ್ನ ಕರುಳುಗಳು ಹೊರಗೆ ಬೀಳುವುವು,” ಎಂದು ತಿಳಿಸಿದನು.


ಅವಳು ದೋಷಿಯಾಗಿ ಗಂಡನಿಗೆ ದ್ರೋಹವೆಸಗಿದ್ದರೆ ಕುಡಿದ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವುದು. ಈ ಕಾರಣ ಅವಳ ಹೊಟ್ಟೆ ಉಬ್ಬುವುದು. ಅವಳ ಜನನೇಂದ್ರಿಯಗಳು ಬತ್ತಿಹೋಗುವುವು. ಆಕೆ ತನ್ನ ಜನರ ಮಧ್ಯೆ ಶಾಪಗ್ರಸ್ತಳಾಗುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು