Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:12 - ಕನ್ನಡ ಸತ್ಯವೇದವು C.L. Bible (BSI)

12 ಅವನು ಎಷ್ಠು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಳ್ಳಬೇಕು. ಅದಲ್ಲದೆ ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ವ್ರತಕ್ಕೆ ವಿಘ್ನಪ್ರಾಪ್ತವಾದ್ದರಿಂದ ಕಳೆದುಹೋದ ದಿನಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ಎಷ್ಟು ದಿನಗಳವರೆಗೆ ತನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು; ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರುಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದದರಿಂದ ಕಳೆದುಹೋದ ದಿನಗಳು ವ್ಯರ್ಥವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವನು ಮತ್ತೊಮ್ಮೆ ನಿರ್ದಿಷ್ಟ ಕಾಲದವರೆಗೆ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕೆಂಬುದೇ ಇದರರ್ಥ. ಅವನು ಒಂದು ವರ್ಷದ ಕುರಿಮರಿಯನ್ನು ತಂದು ಅದನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡಬೇಕು. ಶವವು ಅವನನ್ನು ಅಶುದ್ಧನನ್ನಾಗಿ ಮಾಡಿದ್ದರಿಂದ ಮೊದಲಿನ ದಿನಗಳು ಲೆಕ್ಕಿಸಲ್ಪಡುವುದಿಲ್ಲ. ಅವನು ಮತ್ತೊಮ್ಮೆ ಪ್ರತಿಷ್ಠೆಯನ್ನು ಹೊಸದಾಗಿ ಆರಂಭಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಎಷ್ಟು ದಿನಗಳವರೆಗೆ ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದಾರೋ, ಅಷ್ಟು ದಿನಗಳವರೆಗೆ ಹೊಸದಾಗಿ ತಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಅವರ ಸಮರ್ಪಣೆಯ ಅವಧಿಯಲ್ಲಿ ಅವರು ಅಶುದ್ಧವಾದುದರಿಂದ ಮೊದಲಿನ ದಿವಸಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:12
12 ತಿಳಿವುಗಳ ಹೋಲಿಕೆ  

ಇಂಥ ದೋಷದ ಪ್ರಾಯಶ್ಚಿತ್ತಕ್ಕಾಗಿ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.


ಒಬ್ಬನು ಇಡೀ ಧರ್ಮಶಾಸ್ತ್ರವನ್ನೇ ಕೈಗೊಂಡು ಒಂದೇ ಒಂದು ನಿಯಮವನ್ನು ಮೀರಿ ನಡೆದರೂ ಅವನು ಇಡೀ ಧರ್ಮಶಾಸ್ತ್ರವನ್ನೇ ಮೀರಿ ನಡೆದಂತಾಗುತ್ತದೆ.


ಆದರೆ ಕೊನೆಯವರೆಗೂ ಸ್ಥಿರವಾಗಿರುವವರು ಜೀವೋದ್ಧಾರವನ್ನು ಹೊಂದುವರು.


ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಯಾಜಕನು ಪ್ರಾಯಶ್ಚಿತ್ತ ಬಲಿಯ ಕುರಿಯನ್ನೂ ಆ ಸೇರು ಎಣ್ಣೆಯನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿಯೆತ್ತಬೇಕು.


ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು.


“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.


ಯಾಜಕನು ದೋಷಪರಿಹಾರ ಬಲಿಯನ್ನಾಗಿ ಒಂದನ್ನೂ ಸಂಪೂರ್ಣ ದಹನ ಬಲಿಯನ್ನಾಗಿ ಇನ್ನೊಂದನ್ನೂ ಸಮರ್ಪಿಸಲಿ. ಹೀಗೆ ಶವಸೋಂಕಿದವನಿಗಾಗಿ ದೋಷಪರಿಹಾರಮಾಡಿ ಅವನ ತಲೆಗೂದಲು ಅಂದಿನಿಂದ ಪವಿತ್ರವೆಂದು ನಿರ್ಣಯಿಸಲಿ.


ನಾಜೀರ ವ್ರತಸ್ಥನು ತನ್ನ ವ್ರತಾವಧಿ ಮುಗಿದಾಗ ಈ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬಂದು ಸರ್ವೇಶ್ವರನಿಗೆ ಈ ಕಾಣಿಕೆಗಳನ್ನು ಸಲ್ಲಿಸಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು