Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:14 - ಕನ್ನಡ ಸತ್ಯವೇದವು C.L. Bible (BSI)

14 ದಹನಬಲಿಗಾಗಿ ಕಳಂಕರಹಿತವಾದ ಒಂದು ವರ್ಷದ ಟಗರು, ಪಾಪಪರಿಹಾರ ಬಲಿಗಾಗಿ ಕಳಂಕರಹಿತವಾದ ಒಂದು ವರ್ಷದ ಕುರಿ, ಸಮಾಧಾನ ಬಲಿಗಾಗಿ ಕಳಂಕರಹಿತವಾದ ಒಂದು ಟಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಟಗರನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಒಂದು ವರುಷದ ಟಗರು, ದೋಷಪರಿಹಾರಕಯಜ್ಞಕ್ಕಾಗಿ ಪೂರ್ಣಾಂಗವಾದ ಒಂದು ವರುಷದ ಕುರಿ, ಸಮಾಧಾನಯಜ್ಞಕ್ಕಾಗಿ ಪೂರ್ಣಾಂಗವಾದ ಟಗರು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನಿಗೆ ತನ್ನ ಸಮರ್ಪಣೆಯನ್ನು ಮಾಡಬೇಕು. ಅವನು ಸಮರ್ಪಿಸಬೇಕಾದದು ಯಾವುವೆಂದರೆ, ಸರ್ವಾಂಗಹೋಮಕ್ಕೆ ದೋಷವಿಲ್ಲದ ಒಂದು ವರ್ಷದ ಗಂಡು ಕುರಿಮರಿ, ದೋಷಪರಿಹಾರ ಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ವರ್ಷದ ಹೆಣ್ಣು ಕುರಿಮರಿ, ಸಮಾಧಾನಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ಟಗರು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಯೆಹೋವ ದೇವರಿಗೆ ತಮ್ಮ ಅರ್ಪಣೆಗಳನ್ನು ಅರ್ಪಿಸಬೇಕು. ಅದೇನೆಂದರೆ, ದಹನಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಟಗರಿನ ಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಹೆಣ್ಣು ಕುರಿಮರಿಯನ್ನೂ, ಸಮಾಧಾನದ ಬಲಿಗಾಗಿ ಒಂದು ಕಳಂಕವಿಲ್ಲದ ಟಗರನ್ನೂ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:14
12 ತಿಳಿವುಗಳ ಹೋಲಿಕೆ  

ಅವನು ತನ್ನ ದೋಷಪರಿಹಾರಾರ್ಥವಾಗಿ ತರುವುದು ಒಂದು ಕುರಿಯಾದರೆ ಅದು ಕಳಂಕರಹಿತವಾದ ಹೆಣ್ಣಾಗಿರಬೇಕು.


“ಶಾಂತಿಸಮಾಧಾನಕ್ಕಾಗಿ ಸರ್ವೇಶ್ವರನಿಗೆ ಸಮರ್ಪಿಸುವ ಬಲಿಪ್ರಾಣಿ ಕುರಿ ಅಥವಾ ಆಡು ಆಗಿದ್ದರೆ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರ ಸಹಾಯ ದೊರೆತುದರಿಂದ ಅವರು ಏಳು ಹೋರಿಗಳನ್ನೂ ಏಳು ಕುರಿಗಳನ್ನೂ ಬಲಿದಾನ ಮಾಡಿದರು.


ಯಾವನಾದರೂ ಒಬ್ಬನು ವೈಯಕ್ತಿಕವಾಗಿ ತಿಳಿಯದೆ ತಪ್ಪು ಮಾಡಿದರೆ ಅಂಥವನು ದೋಷಪರಿಹಾರಕ ಬಲಿಗಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.


ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ನಿಮ್ಮ ನಾಡಿನವರಲ್ಲಿ ಬೇರೆ ಯಾರಾದರು ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ಕೊಬ್ಬಿದ ಪ್ರಾಣಿಗಳನರ್ಪಿಸುವೆನು ಯಜ್ಞವಾಗಿ I ಹೋತಹೋರಿಗಳ ಕೊಡುವೆನು ನಿನಗೆ ಕಾಣಿಕೆಯಾಗಿ I ಟಗರುಗಳ ಬಲಿಧೂಪವೆತ್ತುವೆನು ಆರತಿಯಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು