Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:15 - ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ ಒಂದು ಬುಟ್ಟಿ ತುಂಬ ಎಣ್ಣೆಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡಬುಗಳು ಮತ್ತು ಮೇಲೆ ಹೇಳಿದ ಬಲಿಗಳ ಸಮೇತ ಕೊಡಬೇಕಾದ ಧಾನ್ಯದ್ರವ್ಯ-ಪಾನದ್ರವ್ಯಗಳು, ಇವುಗಳನ್ನೆಲ್ಲಾ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡುಬುಗಳು ಇವುಗಳನ್ನೂ ಮೇಲೆ ಕಂಡ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಶುದ್ಧವಾದ ಹಿಟ್ಟಿನಿಂದ ಮತ್ತು ಎಣ್ಣೆಯಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆಹಾಕಿ ಮಾಡಿದ ಹುಳಿಯಿಲ್ಲದ ತೆಳುವಾದ ರೊಟ್ಟಿಗಳನ್ನೂ ಒಂದು ಪುಟ್ಟಿತುಂಬಾ ಸಮರ್ಪಿಸಬೇಕು; ಅಲ್ಲದೆ ಮೇಲೆ ವಿವರಿಸಿದ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಗಳನ್ನೂ ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳ ಒಂದು ಬುಟ್ಟಿಯನ್ನೂ, ಎಣ್ಣೆ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ, ಧಾನ್ಯದ್ರವ್ಯ ಪಾನದ್ರವ್ಯ ಇವುಗಳನ್ನೆಲ್ಲಾ ಅರ್ಪಣೆಯಾಗಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:15
15 ತಿಳಿವುಗಳ ಹೋಲಿಕೆ  

“ನೀವು ಒಲೆಯಲ್ಲಿ ಅಡಿಗೆ ಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿ ಹಿಟ್ಟಿನ ಹೋಳಿಗೆಗಳಾಗಿರಲಿ ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳಾಗಿರಲಿ.


ಹುಳಿಯಿಲ್ಲದ ರೊಟ್ಟಿಗಳನ್ನು ಎಣ್ಣೆಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು ಹಾಗು ಎಣ್ಣೆ ಹೊಯಿದು ಹುಳಿಯಿಲ್ಲದ ಕಡುಬುಗಳನ್ನು ಗೋದಿ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಿಕೊ.


ಮತ್ತು ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನು ತಂದು ಸಮರ್ಪಿಸಬೇಕು. ಇದು ಸರ್ವೇಶ್ವರನಾದ ನನಗೆ ಪ್ರಿಯವಾದ ಸುಗಂಧ ದಹನಬಲಿಯಾಗುವುದು.


ಎಂದೇ, ನೀವು ಈ ರೊಟ್ಟಿಯನ್ನು ಭುಜಿಸಿ ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ.


ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.


ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ. ಆ ಸ್ವಾಮಿಯ ಪರಿಚಾರಕರಾದ ಯಾಜಕರು ದುಃಖತಪ್ತರಾಗಿದ್ದಾರೆ.


ಬೆಳೆಮಾಡಿದವರೇ ಕಾಳನು ತಿಂದು ಸ್ತುತಿಸುವರು ಸರ್ವೇಶ್ವರನನು; ದ್ರಾಕ್ಷಿ ಕಿತ್ತವರೇ ಕುಡಿವರು ಈ ರಸವನು ನನ್ನಾಲಯದ ಅಂಗಳದೊಳು.”


ಶಾಂತಿಸಮಾಧಾನ ಬಲಿಗಾಗಿ ಒಂದು ಹೋರಿ ಹಾಗು ಒಂದು ಟಗರನ್ನು ಮತ್ತು ನೈವೇದ್ಯಕ್ಕಾಗಿ ಎಣ್ಣೆ ಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಬರಬೇಕೆಂದು ಆಜ್ಞಾಪಿಸು,” ಎಂದನು.


“ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು, ಅಭಿಷೇಕ ತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಹಾಗು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡು ಬಾ;


ಯಾರಾದರು ಕೃತಜ್ಞತೆಯನ್ನು ಸಲ್ಲಿಸುವುದಕ್ಕಾಗಿ ಶಾಂತಿಸಮಾಧಾನದ ಬಲಿಯನ್ನು ಸರ್ವೇಶ್ವರನಿಗೆ ಅರ್ಪಿಸಲಾಶಿಸಿದರೆ ಆ ಬಲಿಪ್ರಾಣಿಯ ಸಮೇತ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಹಾಗು ಎಣ್ಣೆಯಿಂದ ಪೂರ್ತಿಯಾಗಿ ತೋಯಿಸಿದ ಗೋದಿಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.


ಯಾಜಕನು ಇವುಗಳನ್ನು ಸರ್ವೇಶ್ವರನ ಸನ್ನಿಧಿಗೆ ತಂದು ನಾಜೀರ ವ್ರತ ಪಾಪಪರಿಹಾರಕ ಬಲಿಯನ್ನೂ ದಹನಬಲಿಯನ್ನೂ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು