Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:26 - ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರ ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ, ನಿಮಗೆ ಸಮಾಧಾನ ಅನುಗ್ರಹಿಸಲಿ.” ’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:26
24 ತಿಳಿವುಗಳ ಹೋಲಿಕೆ  

“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!


ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ‍ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’


ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.


ಶಾಂತಿದಾತ ದೇವರು ನಿಮ್ಮೆಲ್ಲರೊಡನೆ ಇರಲಿ! ಆಮೆನ್.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ.


ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II


ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಆತನೇ ನಮಗೆ ಶಾಂತಿದಾತನು, ಅಸ್ಸೀರಿಯದವರು ನಮ್ಮ ಮೇಲೆ ದಾಳಿಮಾಡಿ ಆಕ್ರಮಣ ಮಾಡುವಾಗ, ಅವರಿಗೆ ವಿರುದ್ಧ ಏಳುಮಂದಿ ಪಾಲಕರನ್ನು ಹಾಗೂ ಎಂಟುಮಂದಿ ಪುರುಷೋತ್ತಮರನ್ನು ನೇಮಿಸುವೆನು.


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ಪಿತನಾದ ದೇವರೂ ಪ್ರಭುವಾದ ಯೇಸುಕ್ರಿಸ್ತರೂ ಸಹೋದರರಿಗೆ ಶಾಂತಿಸಮಾಧಾನವನ್ನು ಮತ್ತು ಪ್ರೀತಿವಿಶ್ವಾಸವನ್ನು ದಯಪಾಲಿಸಲಿ.


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು