Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:5 - ಕನ್ನಡ ಸತ್ಯವೇದವು C.L. Bible (BSI)

5 ಅವನು ತನ್ನ ವ್ರತ ದಿನಗಳಲ್ಲೆಲ್ಲಾ ಕ್ಷೌರ ಮಾಡಿಸಿಕೊಳ್ಳಬಾರದು. ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ವ್ರತಬದ್ಧನಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬೆಳೆಯಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ತನ್ನ ಹರಕೆಯ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಅವನ ವ್ರತದ ಕಾಲದಲ್ಲಿ ಕ್ಷೌರದ ಕತ್ತಿಯು ಅವನ ತಲೆಯನ್ನು ಸೋಂಕಬಾರದು. ಯೆಹೋವನಿಗೋಸ್ಕರ ಪ್ರತಿಷ್ಠಿತವಾದ ತನ್ನ ಕಾಲವನ್ನು ಪೂರ್ಣಗೊಳಿಸುವ ತನಕ ಅವನು ಪರಿಶುದ್ಧನಾಗಿರಬೇಕು. ತನ್ನ ವ್ರತದ ದಿನಗಳು ಮುಗಿಯುವ ತನಕ ಅವನು ಕೂದಲನ್ನು ಬೆಳೆಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ ‘ಅವರ ನಾಜೀರ ವ್ರತದ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳು ಪೂರ್ತಿಯಾಗುವವರೆಗೆ ಅವರು ಪರಿಶುದ್ಧರಾಗಿರುವರು, ಅವರು ತಮ್ಮ ತಲೆಗೂದಲನ್ನು ಕತ್ತರಿಸದೇ ಬೆಳೆಯಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:5
9 ತಿಳಿವುಗಳ ಹೋಲಿಕೆ  

“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಕೊನೆಗೆ ಅವನು, “ಕ್ಷೌರಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ಮಾತೃಗರ್ಭ ಬಿಟ್ಟಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾದವನು. ನನ್ನ ತಲೆಯನ್ನು ಕ್ಷೌರಮಾಡಿದರೆ ನನ್ನ ಶಕ್ತಿ ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿ ಹೇಳಿದನು.


ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇ ಬಾರದು. ಅವನು ಹುಟ್ಟಿನಿಂದ ದೇವರಿಗೆ ಪ್ರತಿಷ್ಠಿತನಾಗುವನು. ಅವನು ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವುದಕ್ಕೆ ಪ್ರಾರಂಭಿಸುವನು,” ಎಂದನು.


ಆಕೆ ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ ಅವನನ್ನು ದುರ್ಬಲಪಡಿಸಿದಳು.


ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.


ಅಂಥವನು ವ್ರತ ಕೈಗೊಂಡು ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಬಳ್ಳಿಯಿಂದ ಉತ್ಪನ್ನವಾದ ಹೀಚನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.


“ಅವರು ತಲೆ ಬೋಳಿಸಬಾರದು; ಕೂದಲನ್ನು ಬೆಳೆಸಬಾರದು, ಕತ್ತರಿಸಿಕೊಂಡಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು