Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:13 - ಕನ್ನಡ ಸತ್ಯವೇದವು C.L. Bible (BSI)

13 ಅವನು ತಂದ ಕಾಣಿಕೆಗಳು: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಬೆಳ್ಳಿಯ ಒಂದು ಹರಿವಾಣ; 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನ ಕಾಣಿಕೆಯು ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಚೊಕ್ಕ ಬೆಳ್ಳಿಯ ಒಂದು ತಟ್ಟೆ ಮತ್ತು 70 ಶೆಕೆಲ್ ತೂಕದ ಬೆಳ್ಳಿಯ ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಇವೆರಡು ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:13
23 ತಿಳಿವುಗಳ ಹೋಲಿಕೆ  

ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನು ನನಗೆ ಅರ್ಧ ಶೆಕೆಲ್‍ ನಾಣ್ಯದ ಮೇರೆಗೆ ತೆರಿಗೆ ಕಟ್ಟಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಅರ್ಧರ್ಧ ನಾಣ್ಯವನ್ನು ತೆರಿಗೆಯಾಗಿ ಕೊಡಬೇಕು.


“ಯಾರಾದರು ಸರ್ವೇಶ್ವರ ಸ್ವಾಮಿಗೆ ಧಾನ್ಯವನ್ನು ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿ ಹಿಟ್ಟಾಗಿರಬೇಕು. ಅದರ ಮೇಲೆ ಎಣ್ಣೆಹೊಯ್ದು, ಸಾಂಬ್ರಾಣಿಯನ್ನಿಟ್ಟು, ಅದನ್ನು ಆರೋನನ ವಂಶಜರಾದ ಯಾಜಕರ ಬಳಿಗೆ ತರಬೇಕು.


ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು, ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕಬಂಗಾರದಿಂದ ಮಾಡಿದನು.


ಮೇಜಿನ ಮೇಲಿಡಬೇಕಾದ ತಟ್ಟೆಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನಾರ್ಪಣೆಗೆ ಬೇಕಾದ ಬಟ್ಟಲುಗಳನ್ನು ಅಪ್ಪಟ ಬಂಗಾರದಿಂದಲೇ ಮಾಡಿಸಬೇಕು.


ಅದನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಡಲಾಯಿತು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.


ಅವಳು ತನ್ನ ತಾಯಿಯ ಸಲಹೆ ಪಡೆದು, “ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ,” ಎಂದಳು.


ಆ ದಿನ ಬಂದಾಗ ‘ಸರ್ವೇಶ್ವರಸ್ವಾಮಿಗೆ ಸಮರ್ಪಿತ’ ಎಂಬ ಲಿಪಿಯು ಕುದುರೆಗಳ ಕತ್ತಿಗೆ ಕಟ್ಟಿರುವ ಗಂಟೆಗಳ ಮೇಲೆ ಕೆತ್ತನೆ ಮಾಡಲಾಗಿರುವುದು. ದೇವಾಲಯದ ಪಾತ್ರೆಗಳೆಲ್ಲವು ಬಲಿಪೀಠದ ಪಾತ್ರೆಗಳಷ್ಟೆ ಪವಿತ್ರವಾಗಿರುವುವು.


ಹಾಗೆ ಕುಡಿದುಕೊಂಡಿರುವಾಗ ತಾನೂ ತನ್ನ ಪ್ರಮುಖರೂ ಪತ್ನಿಯರೂ ಉಪಪತ್ನಿಯರೂ ಕುಡಿಯುವುದಕ್ಕಾಗಿ ತನ್ನ ತಂದೆ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದ ಗರ್ಭಗುಡಿಯಿಂದ ಸೂರೆಯಾಗಿ ತಂದ


ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಸಾಂಬ್ರಾಣಿಕಳಸ, ಪಾನಾರ್ಪಣೆಯ ಪಾತ್ರೆ ಮೊದಲಾದವುಗಳನ್ನು ದೋಚಿಕೊಂಡನು.


ಅರಸನಿಂದಲು, ಅವನ ಮಂತ್ರಿಗಳಿಂದಲು, ಪದಾಧಿಕಾರಿಗಳಿಂದಲು, ಅಲ್ಲಿದ್ದ ಎಲ್ಲ ಇಸ್ರಯೇಲರಿಂದಲು ನಮ್ಮ ದೇವರ ಆಲಯಕ್ಕೆ ಕಾಣಿಕೆಯಾಗಿ ಕೊಡಲಾಗಿದ್ದ ಬೆಳ್ಳಿಬಂಗಾರವನ್ನು ಹಾಗು ಸಾಮಾಗ್ರಿಗಳನ್ನು ತೂಕಮಾಡಿ ಅವರಿಗೆ ಒಪ್ಪಿಸಿದೆ.


ಹಂಡೆ, ಸಲಿಕೆ ಹಾಗು ಬೋಗುಣಿಗಳು. ಹೀರಾಮನು ಅರಸ ಸೊಲೊಮೋನನ ಅಪ್ಪಣೆಯಂತೆ ಸರ್ವೇಶ್ವರನ ಆಲಯಕ್ಕಾಗಿ ಈ ಎಲ್ಲ ಸಾಮಗ್ರಿಗಳನ್ನು ಒಪ್ಪಹಾಕಿದ ತಾಮ್ರದಿಂದ ಮಾಡಿದನು.


ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ನೀರಿನ ಬಾನೆಗಳು;


ದೇವರ ಸೇವೆಗೆ ನಿಗದಿಯಾದ ನಾಣ್ಯಗಳ ಮೇರೆಗೆ ತೆಗೆದುಕೊಳ್ಳಬೇಕು.


ದೇವರ ಸೇವೆಯಲ್ಲಿ ಬಳಕೆಯಲ್ಲಿರುವ ‘ಶೆಕೆಲ್’ ಒಂದಕ್ಕೆ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಬೆಲೆಯನ್ನು ನಿಗದಿಮಾಡಬೇಕು.


ಇಪ್ಪತ್ತರಿಂದ ಅರವತ್ತು ವರ್ಷ ವಯಸ್ಸುಳ್ಳ ಪುರುಷನ ಪರವಾಗಿ ಐವತ್ತು ಬೆಳ್ಳಿನಾಣ್ಯಗಳನ್ನು ಹಾಗು


ಮೊದಲನೆಯ ದಿನ ಕಾಣಿಕೆ ತಂದೊಪ್ಪಿಸಿದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗ ನಹಶೋನ.


ಧೂಪ ದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ.


ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು


ಆ ಬಲಿಪ್ರಾಣಿಯೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದೂವರೆ ಸೇರು ಎಣ್ಣೆ ಬೆರೆಸಿದ ಮೂರು ಸೇರು ಗೋದಿಯ ಹಿಟ್ಟನ್ನು ತರಬೇಕು.


ಬೆಳಿಗ್ಗೆ ಆ ಕುರಿಯೊಂದಿಗೆ ಧಾನ್ಯ ನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನು ಮತ್ತು ಮೂರು ಸೇರು ಗೋದಿಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.


ಅಮಾವಾಸ್ಯೆಯಲ್ಲೂ ಪ್ರತಿದಿನವೂ ಸಲ್ಲಿಸುವ ದಹನಬಲಿಗಳ ಹಾಗು ಅವುಗಳಿಗೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು. ಅವು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು