Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:9 - ಕನ್ನಡ ಸತ್ಯವೇದವು C.L. Bible (BSI)

9 ಕೆಹಾತ್ಯರಿಗೆ ಮಾತ್ರ ಏನನ್ನೂ ಕೊಡಲಿಲ್ಲ. ಏಕೆಂದರೆ ದೇವದರ್ಶನದ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲ ಮೇಲೆ ಹೊರಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ; ದೇವದರ್ಶನದ ಗುಡಾರದ ಸಾಮಾನುಗಳನ್ನು ವಹಿಸುವದೇ ಅವರಿಗೆ ನೇಮಕವಾದ ಕೆಲಸ; ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೋಶೆಯು ಕೆಹಾತ್ಯರಿಗೆ ಎತ್ತುಗಳನ್ನಾಗಲಿ ಬಂಡಿಗಳನ್ನಾಗಲಿ ಕೊಡಲಿಲ್ಲ. ಯಾಕೆಂದರೆ ಅವರು ಪವಿತ್ರವಸ್ತುಗಳನ್ನು ತಮ್ಮ ಭುಜದ ಮೇಲೆ ಹೊರಬೇಕು. ಅವರಿಗೆ ಈ ಕೆಲಸವು ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಕೊಹಾತ್ಯರಿಗೆ ಯಾವುದನ್ನೂ ಕೊಡಲಿಲ್ಲ. ಏಕೆಂದರೆ ಅವರು ತಮ್ಮ ಹೆಗಲುಗಳ ಮೇಲೆ ಪರಿಶುದ್ಧಸ್ಥಳದ ವಸ್ತುಗಳನ್ನು ಹೊತ್ತುಕೊಂಡು ಹೋಗುವುದೇ ಅವರಿಗೆ ಸೇವೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:9
9 ತಿಳಿವುಗಳ ಹೋಲಿಕೆ  

ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.


ಸರ್ವೇಶ್ವರನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದನಂತರ ದಾವೀದನು ಒಂದು ಎತ್ತನ್ನೂ ಒಂದು ಕೊಬ್ಬಿದ ಕರುವನ್ನೂ ಬಲಿದಾನ ಮಾಡಿದನು.


ಅವರು ನೋಡಿಕೊಳ್ಳಬೇಕಾಗಿದ್ದವುಗಳು ಇವು - ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ತೆರೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.


ಲೇವಿಯರು ಇನ್ನು ಮುಂದೆ ಅವರ ಗುಡಾರವನ್ನೂ ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲವೆಂದುಕೊಂಡು, ದಾವೀದನು ಈ ಪ್ರಕಾರ ವಿಧಿಸಿದನು:


ತಾನು ಸಿದ್ಧಪಡಿಸಿದ ಸ್ಥಳಕ್ಕೆ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ಎಲ್ಲಾ ಇಸ್ರಯೇಲರನ್ನು ಜೆರುಸಲೇಮಿಗೆ ಬರಮಾಡಿಕೊಂಡನು.


ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ತಡವರಿಸಿದವು. ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.


ಇಸ್ರಯೇಲರ ಹಿರಿಯರೆಲ್ಲರು ಹೀಗೆ ಕೂಡಿಬಂದಿರಲು ಯಾಜಕರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು.


ದೇವರ ಆ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನು ಹಾಗು ಅಹೀಯೋವನು ಆ ಬಂಡಿಯನ್ನು ನಡೆಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು