Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:11 - ಕನ್ನಡ ಸತ್ಯವೇದವು C.L. Bible (BSI)

11 ಲೇವಿಯರು ಇಸ್ರಯೇಲರ ಪರವಾಗಿ ಸರ್ವೇಶ್ವರನ ಪರಿಚರ್ಯ ಮಾಡಲು ಯೋಗ್ಯರಾಗುವಂತೆ ಆರೋನನು ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಲೇವಿಯರು ಯೆಹೋವನ ಸೇವಾಕಾರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲರ ನಿಮಿತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಲೇವಿಯರು ಯೆಹೋವನ ಪರಿಚರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ಯರ ನಿವಿುತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದೋಪಾದಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಆರೋನನು ಲೇವಿಯರನ್ನು ಯೆಹೋವನಿಗೆ ಇಸ್ರೇಲರ ಕಾಣಿಕೆಯಾಗಿ ಕೊಡುವನು. ಈ ರೀತಿಯಾಗಿ ಲೇವಿಯರು ಯೆಹೋವನ ಪರಿಚರ್ಯ ಕೆಲಸಕ್ಕಾಗಿ ಸಿದ್ಧರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಲೇವಿಯರು ಇಸ್ರಾಯೇಲರ ಪರವಾಗಿ ಯೆಹೋವ ದೇವರ ಸೇವೆಯನ್ನು ಮಾಡುವುದಕ್ಕೆ ಸಿದ್ಧರಾಗುವಂತೆ ಆರೋನನು ಅವರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:11
9 ತಿಳಿವುಗಳ ಹೋಲಿಕೆ  

ಸರ್ವೇಶ್ವರನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪ್ರಾಣಿಯ ಕೊಬ್ಬನ್ನು ತನ್ನ ಕೈಯಿಂದಲೆ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಲು ತಂದು ಸಮರ್ಪಿಸಬೇಕು.


ಇದು ನೈವೇದ್ಯವಾಗಿ ಆರತಿಯೆತ್ತುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಬೇಕು. ಇದಾದ ನಂತರ ನಾಜೀರ ವ್ರತಸ್ಥನು ದ್ರಾಕ್ಷಾರಸವನ್ನು ಪಾನಮಾಡಬಹುದು.


ಮೋಶೆ ಬಲಿಪ್ರಾಣಿಯ ಎದೇಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು. ಸರ್ವೇಶ್ವರನ ಆಜ್ಞಾನುಸಾರ ಆ ಯಾಜಕಾಭಿಷೇಕ ಬಲಿಯ ಟಗರಿನ ಎದೆಯ ಭಾಗ ಮೋಶೆಗೆ ಸಲ್ಲತಕ್ಕದಾಗಿತ್ತು.


ಇವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿಸಿದನು.


ಅವುಗಳನ್ನೆಲ್ಲ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಆರತಿ ಮಾಡಿಸು.


ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸದಲ್ಲಿ ನೈವೇದ್ಯರೂಪವಾಗಿ ಆರತಿಯೆತ್ತುವ ಎದೆಯ ಭಾಗವನ್ನು ಮತ್ತು ಯಾಜಕನಿಗಾಗಿ ಪ್ರತ್ಯೇಕಿಸುವ ತೊಡೆಯನ್ನು ಸರ್ವೇಶ್ವರ ಇಸ್ರಯೇಲ್ ಜನರಿಂದ ತೆಗೆದುಕೊಂಡು ಮಹಾಯಾಜಕ ಆರೋನನಿಗೂ ಅವನ ವಂಶಜರಿಗೂ ಕೊಟ್ಟು, ಅದು ಶಾಶ್ವತ ನಿಯಮವಾಗಿ ಅವರಿಗೆ ಸಲ್ಲುವಂತೆ ಮಾಡಿದ್ದಾರೆ.


“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು