Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:12 - ಕನ್ನಡ ಸತ್ಯವೇದವು C.L. Bible (BSI)

12 ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ನೀನು ಸರ್ವೇಶ್ವರನಿಗೆ ಪಾಪಪರಿಹಾರಕ ಬಲಿಗಾಗಿ ಒಂದು ಹೋರಿಯನ್ನು, ಹಾಗು ದಹನಬಲಿಗಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಿ ಅವರಿಗಾಗಿ ಪಾಪಪರಿಹಾರವನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ನೀನು ಯೆಹೋವನಿಗೆ ದೋಷಪರಿಹಾರಕಯಜ್ಞವಾಗಿ ಒಂದು ಹೋರಿಯನ್ನೂ ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನೂ ಸಮರ್ಪಿಸಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ, ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ ಸರ್ವಾಂಗಹೋಮವಾಗಿ ಇನ್ನೊಂದು ಹೋರಿಯನ್ನೂ ಸಮರ್ಪಿಸಬೇಕು. ಇವು ಲೇವಿಯರಿಗೆ ನೈವೇದ್ಯದ ಸಮರ್ಪಣೆಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:12
25 ತಿಳಿವುಗಳ ಹೋಲಿಕೆ  

ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತರಿಸಿ ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ಕೈಗಳನ್ನಿಟ್ಟ ನಂತರ


ಎಂದೇ, ಧರ್ಮಶಾಸ್ತ್ರದ ಪ್ರಕಾರ ಹೆಚ್ಚುಕಡಿಮೆ ಎಲ್ಲವೂ ರಕ್ತದಿಂದಲೇ ಶುದ್ಧೀಕರಣ ಹೊಂದುತ್ತವೆ. ರಕ್ತಧಾರೆ ಇಲ್ಲದೆ ಪಾಪಪರಿಹಾರವಿಲ್ಲ.


ಅನಂತರ ಅವನು ದೋಷಪರಿಹಾರಾರ್ಥವಾದ ಹೋರಿಯನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಚಾಚಿದರು.


ಅರ್ಪಿಸುವವನು ಆ ಪ್ರಾಣಿಯ ತಲೆಯ ಮೇಲೆ ಕೈಯಿಡಬೇಕು. ಆಗ ಅದು ಅವನ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಅಂಗೀಕೃತವಾಗುವುದು.


ಬಳಿಕ ಅವರು ದಹನಬಲಿಗಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯವನ್ನೂ, ಅಂದರೆ ಎಣ್ಣೆಬೆರೆಸಿದ ಗೋದಿಯ ಹಿಟ್ಟನ್ನೂ ಮತ್ತು ಪಾಪಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ತೆಗೆದುಕೊಳ್ಳಲಿ.


ಯಾಜಕನು ಇವುಗಳನ್ನು ಸರ್ವೇಶ್ವರನ ಸನ್ನಿಧಿಗೆ ತಂದು ನಾಜೀರ ವ್ರತ ಪಾಪಪರಿಹಾರಕ ಬಲಿಯನ್ನೂ ದಹನಬಲಿಯನ್ನೂ ಸಮರ್ಪಿಸಬೇಕು.


ದಹನಬಲಿಗಾಗಿ ಕಳಂಕರಹಿತವಾದ ಒಂದು ವರ್ಷದ ಟಗರು, ಪಾಪಪರಿಹಾರ ಬಲಿಗಾಗಿ ಕಳಂಕರಹಿತವಾದ ಒಂದು ವರ್ಷದ ಕುರಿ, ಸಮಾಧಾನ ಬಲಿಗಾಗಿ ಕಳಂಕರಹಿತವಾದ ಒಂದು ಟಗರು.


ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಯೇಲರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ, ಅಪರಾಧಗಳನ್ನೂ, ಸರ್ವೇಶ್ವರನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಮರುಭೂಮಿಗೆ ಕಳಿಸಿಬಿಡಬೇಕು.


ಆರೋನನು ತನಗಾಗಿ ದೋಷಪರಿಹಾರಕ ಬಲಿಯ ಹೋರಿಯನ್ನು ಸಮರ್ಪಿಸಿ ತನ್ನ ಹಾಗು ತನ್ನ ಮನೆತನದವರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು.


ಆರೋನನು ತನಗಾಗಿ ತಂದ ಹೋರಿಯನ್ನು ಸಮರ್ಪಿಸಿ ತನ್ನ ಹಾಗು ತನ್ನ ಮನೆತನದವರ ಪರವಾಗಿ ಪಶ್ಚಾತ್ತಾಪ ವಿಧಿಯನ್ನು ನೆರವೇರಿಸಬೇಕು.


ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಮತ್ತೊಂದನ್ನೂ ಸಮರ್ಪಿಸಬೇಕು.


ಅನಂತರ ಮೋಶೆ ಆರೋನನಿಗೆ, “ಬಲಿಪೀಠದ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಬಲಿಯನ್ನು ಮತ್ತು ದಹನಬಲಿಯನ್ನು ಸಮರ್ಪಿಸಿ ನಿನ್ನ ಹಾಗು ಜನರ ದೋಷವನ್ನು ಪರಿಹರಿಸು. ಜನರು ತಂದದ್ದನ್ನು ಸಮರ್ಪಿಸಿ ಸರ್ವೇಶ್ವರನ ಆಜ್ಞೆಯಂತೆ ಅವರ ದೋಷವನ್ನು ಪರಿಹರಿಸು,” ಎಂದು ಹೇಳಿದನು.


ನಿಮ್ಮ ದೋಷಪರಿಹಾರಕ್ಕಾಗಿ ಈ ದಿನ ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂಬುದು ಸರ್ವೇಶ್ವರನ ಆಜ್ಞೆ.


ತರುವಾಯ ಅವನು ದಹನ ಬಲಿಗಾಗಿ ಟಗರನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು.


“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.


ಶಾಂತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಬಲಿಪೀಠದಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಸರ್ವೇಶ್ವರನಿಗೆ ಹೋಮಮಾಡಲಿ. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಅಭಿಷಿಕ್ತ ಯಾಜಕನು ದೋಷಪರಿಹಾರಕ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲಾಯಿತೋ ಹಾಗೆಯೆ ಇದರ ವಿಷಯದಲ್ಲೂ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದ ನಂತರ ಅವರಿಗೆ ಕ್ಷಮಾಪಣೆಯಾಗುವುದು.


ಅವನು ಆ ಹೋರಿಯನ್ನು ಸರ್ವೇಶ್ವರನ ಸನ್ನಿಧಿಗೆ, ದೇವದರ್ಶನದ ಗುಡಾರದ ಬಾಗಿಲಿಗೆ, ತಂದು ಅದರ ತಲೆಯ ಮೇಲೆ ಕೈಯಿಟ್ಟು ಸರ್ವೇಶ್ವರನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.


ಸರ್ವೇಶ್ವರನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.


“ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಸರ್ವೇಶ್ವರನಿಗೆ ಸಮರ್ಪಿಸು.


ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು