Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:2 - ಕನ್ನಡ ಸತ್ಯವೇದವು C.L. Bible (BSI)

2 “ಆರೋನನು ದೇವಸ್ಥಾನದ ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಬೆಳಕು ಕೊಡುವಂತೆ ನೋಡಿಕೊಳ್ಳಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಆರೋನನು ಪವಿತ್ರಗುಡಾರದಲ್ಲಿ ದೀಪಸ್ತಂಭದ ಮೇಲಿನ ದೀಪಗಳನ್ನು ಕ್ರಮಪಡಿಸಲು ಹೇಳು. ಆಗ ದೀಪಸ್ತಂಭದ ಮುಂದಿನ ಸ್ಥಳದಲ್ಲಿ ಬೆಳಕು ಪ್ರಕಾಶಿಸುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಆರೋನನ ಸಂಗಡ ಮಾತನಾಡಿ ಅವನಿಗೆ ಹೀಗೆ ಹೇಳಬೇಕು, ‘ನೀನು ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳೂ ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಪ್ರಕಾಶಕೊಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:2
19 ತಿಳಿವುಗಳ ಹೋಲಿಕೆ  

ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳಲ್ಲಿ ದೀಪಹಚ್ಚಿದಾಗ ಅವುಗಳ ಬೆಳಕು ಮುಂಭಾಗದಲ್ಲಿ ಪ್ರಕಾಶಿಸುವುದು.


ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.


ನನ್ನ ಸಂಗಡ ಮಾತನಾಡುತ್ತಿರುವ ಈ ಶಬ್ದ ಯಾರದೆಂದು ನೋಡಲು ನಾನು ಹಿಂದಕ್ಕೆ ತಿರುಗಿದೆ. ಹಾಗೆ ತಿರುಗಿದಾಗ, ಏಳು ಚಿನ್ನದ ದೀಪಸ್ತಂಭಗಳನ್ನು ಕಂಡೆ.


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.


“ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು.


ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II


ನಿನ್ನ ವಾಕ್ಯ ನನಗೆ ದಾರಿದೀಪ I ನನ್ನ ಕಾಲಿನ ನಡೆಗೆ ಕೈದೀಪ II


ಆರೋನನು ಪ್ರತಿನಿತ್ಯವೂ ಸರ್ವೇಶ್ವರನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕ ಬಂಗಾರದ ದೀಪವೃಕ್ಷದ ಮೇಲೆ ಸರಿಯಾಗಿ ಇಡಬೇಕು.


ಅದರ ಹಣತೆಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.


ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿದನು.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಸರ್ವೇಶ್ವರ ಸ್ವಾಮಿ ಮೋಶೆಗೆ:


ಅಂತೆಯೇ ಆ ದೀಪಗಳನ್ನು ಕ್ರಮವಾಗಿ ಇಟ್ಟನು.


ಚೊಕ್ಕ ಬಂಗಾರದ ದೀಪವೃಕ್ಷ, ಅದರ ಮೇಲಿಡಬೇಕಾದ ಹಣತೆಗಳು, ಅದರ ಉಪಕರಣಗಳು, ದೀಪಕ್ಕೆ ಬೇಕಾದ ಎಣ್ಣೆ ಇವುಗಳನ್ನೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು