Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:21 - ಕನ್ನಡ ಸತ್ಯವೇದವು C.L. Bible (BSI)

21 ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದನು. ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ಪಾಪಪರಿಹಾರವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಲೇವಿಯರು ತಮ್ಮನ್ನು ಶುದ್ಧಪಡಿಸಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ, ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು; ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವರನ್ನು ಶುದ್ಧೀಕರಿಸುವದಕ್ಕೆ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಬಳಿಕ ಆರೋನನು ಅವರನ್ನು ಯೆಹೋವನಿಗೆ ವಿಶೇಷ ಕೊಡುಗೆಯಾಗಿ ಕೊಟ್ಟನು. ಆರೋನನು ಅವರನ್ನು ಶುದ್ಧೀಕರಿಸುವುದಕ್ಕಾಗಿ ದೋಷಪರಿಹಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಲೇವಿಯರು ತಮ್ಮನ್ನು ಶುದ್ಧಿಮಾಡಿಕೊಂಡು, ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಯೆಹೋವ ದೇವರ ಮುಂದೆ ನೈವೇದ್ಯದಂತೆ ಅರ್ಪಿಸಿದನು. ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:21
10 ತಿಳಿವುಗಳ ಹೋಲಿಕೆ  

ಅವರನ್ನು ಶುದ್ಧೀಕರಿಸುವ ವಿಧಾನ ಇದು: ಅವರ ಮೇಲೆ ಪಾಪ ಪರಿಹಾರಕ ಜಲವನ್ನು ಚಿಮುಕಿಸು. ಅವರು ಕ್ಷೌರ ಮಾಡಿಸಿಕೊಂಡು, ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಲಿ.


ಮೂರನೆಯ ದಿನದಲ್ಲೂ ಏಳನೆಯ ದಿನದಲ್ಲೂ ಮಡಿಗೆಟ್ಟವನ ಮೇಲೆ ಹಾಗೆಯೇ ಚಿಮುಕಿಸಬೇಕು. ಮಡಿಗೆಟ್ಟವನು ಏಳನೆಯ ದಿನ ದೋಷಪರಿಹಾರ ಹೊಂದುವನು. ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಕೊಂಡು ಸಂಜೆ ಶುದ್ಧನಾಗುವನು.


ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಿದ ನಂತರ ಅವರು ದೇವದರ್ಶನದ ಗುಡಾರದ ಪರಿಚರ್ಯೆಯನ್ನು ಮಾಡಲಿ.


ಮೂರನೇ ದಿನ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನ ಶುದ್ಧನಾಗುವನು. ಮೂರನೆಯ ದಿನ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆ ದಿನದಲ್ಲೂ ಶುದ್ಧನಾಗನು.


“ನಾನು ಇಸ್ರಯೇಲರಲ್ಲಿ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನೇ ಆರಿಸಿಕೊಂಡಿದ್ದೇನೆಂದು ತಿಳಿ. ಆದುದರಿಂದ ಲೇವಿಯರು ನನಗೆ ಸೇರಿದವರು, ನನ್ನ ಸೊತ್ತು.


ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.


ಸರ್ವೇಶ್ವರ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ, ಆರೋನನು ಹಾಗು ಇಸ್ರಯೇಲ್ ಜನರೆಲ್ಲರು ಮಾಡಿದರು.


ಇದಾದ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನದ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ನಡೆಸಲಾರಂಭಿಸಿದರು. ಅವರ ಬಗ್ಗೆ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.


ಶುದ್ಧಿಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಲ್ಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು