Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:26 - ಕನ್ನಡ ಸತ್ಯವೇದವು C.L. Bible (BSI)

26 ಅಂಥವರು ತಮ್ಮ ಸ್ವಕುಲದವರ ಜೊತೆ ದೇವದರ್ಶನದ ಗುಡಾರವನ್ನು ಕಾಯುವ ಸೇವೆ ಮಾಡಬಹುದು. ಅದೊಂದನ್ನು ಬಿಟ್ಟು ಅವರಿಂದ ಬೇರೆ ಪರಿಚರ್ಯೆಯನ್ನು ಮಾಡಿಸಕೂಡದು. ಲೇವಿಯರು ಮಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ವಿಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನ ಗುಡಾರವನ್ನು ಕಾಯುವ ಸೇವೆಯನ್ನು ಮಾಡಬಹುದೇ ಹೊರತು ಅವರಿಂದ ಬೇರೆ ಸೇವಾಕಾರ್ಯವನ್ನು ಮಾಡಿಸಬಾರದು. ಲೇವಿಯರು ಕಾಪಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ಅವರಿಗೆ ನೇಮಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನದ ಗುಡಾರವನ್ನು ಕಾಯುವ ಸೇವೆ ಮಾಡಬಹುದೇ ಹೊರತು ಅವರಿಂದ ಬೇರೆ ಪರಿಚರ್ಯವನ್ನು ಮಾಡಿಸಕೂಡದು. ಲೇವಿಯರು ಕಾಪಾಡಬೇಕಾದವುಗಳ ವಿಷಯದಲ್ಲಿ ನೀನು ಹೀಗೆ ಅವರಿಗೆ ನೇವಿುಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರು ಕಾವಲುಗಾರರಾಗಿ ದೇವದರ್ಶನಗುಡಾರದ ಬಳಿ ಇತರ ಲೇವಿಯರಿಗೆ ಸಹಾಯ ಮಾಡಬಹುದೇ ಹೊರತು ಭಾರವಾದ ಕೆಲಸವನ್ನು ಮಾಡಲೇಕೂಡದು. ನೀನು ಈ ರೀತಿಯಲ್ಲಿ ಲೇವಿಯರಿಗೆ ಕೆಲಸವನ್ನು ಹಂಚಿಕೊಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:26
10 ತಿಳಿವುಗಳ ಹೋಲಿಕೆ  

ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ನಿನ್ನ ಆಧ್ಯಾತ್ಮಿಕ ಪ್ರಗತಿ ಎಲ್ಲರಿಗೂ ಗೋಚರವಾಗುವಂತೆ ಈ ಕಾರ್ಯಸಾಧನೆಗಳಲ್ಲಿ ನಿರತನಾಗಿರು;


ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪರವಾಗಿ ದಹನ ಬಲಿಪಶುವನ್ನೂ ಶಾಂತಿಸಮಾಧಾನ ಬಲಿಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು.


ನೀವು ನನ್ನ ಪರಿಶುದ್ಧ ವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿಕೊಂಡಿರಿ; ನಿಮ್ಮ ಅಪಾರ ದುರಾಚಾರಗಳು ಇನ್ನು ಸಾಕು.


ಹೀಗೆ ಅವರು ತಮ್ಮ ಸಹೋದರರಾದ ಆರೋನ್ಯರ ಸಹಾಯಕರಾಗಿದ್ದು, ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ಸಾಮಾನುಗಳನ್ನೂ ನೋಡಿಕೊಳ್ಳುವುದೇ ಸರ್ವೇಶ್ವರನ ಆಲಯದಲ್ಲಿ ಅವರು ಮಾಡಬೇಕಾಗಿದ್ದ ಪರಿಚರ್ಯೆ.


ಮಿಕ್ಕ ಇಸ್ರಯೇಲರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಿ,” ಎಂದು ಆಜ್ಞಾಪಿಸಿದರು.


ಅವರು ನಿಮ್ಮ ಜೊತೆ ಸೇರಿ ದೇವದರ್ಶನದ ಗುಡಾರವನ್ನು ನೋಡಿಕೊಳ್ಳಲಿ; ಅದರ ಎಲ್ಲ ಪರಿಚರ್ಯವನ್ನು ಮಾಡಲಿ. ಇತರ ಕುಲದವರ ಜೊತೆ ನಿಮಗೆ ಬೇಡ.


ಇದಲ್ಲದೆ ಮಹಾಯಾಜಕ ಆರೋನನ ಮಗ ಎಲ್ಲಾಜಾರನು ಲೇವಿಯರ ಮುಖ್ಯಸ್ಥರಿಗೆ ಅಧ್ಯಕ್ಷನಾಗಿದ್ದ; ದೇವಸ್ಥಾನವನ್ನು ಕಾಯುವವರಿಗೆ ಮೇಲ್ವಿಚಾರಕನಾಗಿದ್ದ.


ಅವರು ಐವತ್ತು ವರ್ಷದವರಾದ ನಂತರ ಆ ಸೇವಾ ಸಂಸ್ಥೆಯನ್ನು ಬಿಟ್ಟು ದೇವಸ್ಥಾನದ ಪರಿಚರ್ಯದಿಂದ ನಿವೃತ್ತರಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು