Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:18 - ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರನ ಅಪ್ಪಣೆಯನ್ನು ಹೊಂದಿಯೇ ಅವರು ಪ್ರಯಾಣ ಮಾಡುತ್ತಿದ್ದರು. ಸರ್ವೇಶ್ವರನ ಅಪ್ಪಣೆಯನ್ನು ಪಡೆದು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರು ಪ್ರಯಾಣಮಾಡುತ್ತಿದ್ದರು, ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಮೇಘವು ಎಲ್ಲಿ ನಿಲ್ಲುವದೋ ಅಲ್ಲಿ ಇಸ್ರಾಯೇಲ್ಯರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು. ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲ್ಯರು ಪ್ರಯಾಣಮಾಡುವರು; ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಸ್ರೇಲರು ಯೆಹೋವನ ಸೂಚನೆಯನ್ನು ಹೊಂದಿದ ಮೇಲೆ ಪ್ರಯಾಣಮಾಡುವರು. ಆ ಮೋಡವು ಪವಿತ್ರಗುಡಾರದ ಮೇಲಿರುವ ತನಕ ಅವರು ತಾವಿರುವಲ್ಲಿಯೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರ ಆಜ್ಞೆಯ ಪ್ರಕಾರ ಇಸ್ರಾಯೇಲರು ಪ್ರಯಾಣಮಾಡಿದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:18
7 ತಿಳಿವುಗಳ ಹೋಲಿಕೆ  

ಪ್ರಿಯ ಸಹೋದರರೇ, ನಮ್ಮ ಪೂರ್ವಜರಿಗೆ ಸಂಭವಿಸಿದವುಗಳತ್ತ ನಿಮ್ಮ ಗಮನವನ್ನು ಸೆಳೆಯಬೇಕೆಂದಿದ್ದೇನೆ. ಅವರೆಲ್ಲರೂ ಮೋಡದ ನೆರಳಿನಲ್ಲಿಯೇ ನಡೆದರು. ಎಲ್ಲರೂ ಸಮುದ್ರವನ್ನು ಸುರಕ್ಷಿತವಾಗಿ ದಾಟಿದರು.


ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಪ್ರೀತಿ. ಪ್ರೀತಿಮಾರ್ಗದಲ್ಲಿ ನಡೆಯಬೇಕೆಂಬುದೇ ನೀವು ಮೊತ್ತಮೊದಲಿನಿಂದಲೂ ಕೇಳಿರುವ ಆಜ್ಞೆ.


ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ ಕ್ರಮಾನುಸಾರ ದಂಡುಗಳು ಪ್ರಯಾಣಮಾಡಿದ್ದು ಇದೇ ಮೊದಲನಯ ಸಾರಿ.


ಒಂದೊಂದು ವೇಳೆ ಆ ಮೇಘ ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಸರ್ವೇಶ್ವರನ ಆಜ್ಞಾನುಸಾರ ಅವರು ಹಾಗೆಯೇ ಇಳಿದುಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞಾನುಸಾರವಾಗಿಯೇ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು.


ಇಸ್ರಯೇಲರು ಸರ್ವೇಶ್ವರನ ಅಪ್ಪಣೆಯ ಪ್ರಕಾರ ಸೀನ್ ಎಂಬ ಮರುಭೂಮಿಯಿಂದ ಹೊರಟು ಮುಂದಕ್ಕೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು.


ಅದು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುತ್ತಿದ್ದ ಸಂದರ್ಭದಲ್ಲಿ ಇಸ್ರಯೇಲರು ಸರ್ವೇಶ್ವರನ ಸೂಚನೆಯನ್ನು ಅನುಸರಿಸಿ ಪ್ರಯಾಣಮಾಡದೆ ಇರುತ್ತಿದ್ದರು.


ಅದು ಸದಾ ಹಾಗೆಯೇ ಇರುತ್ತಿತ್ತು. ಆ ಮೇಘ ದೇವಸ್ಥಾನವನ್ನು ಆವರಿಸಿಕೊಳ್ಳುತ್ತಿತ್ತು; ರಾತ್ರಿವೇಳೆಯಲ್ಲಿ ಬೆಂಕಿಯಂತೆ ಕಾಣಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು