Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:11 - ಕನ್ನಡ ಸತ್ಯವೇದವು C.L. Bible (BSI)

11 ತರುವಾಯ ದೇವರು, “ಭೂಮಿಯಲ್ಲಿ ಸಸ್ಯಗಳನ್ನೂ - ಎಲ್ಲ ತರದ ದವಸಧಾನ್ಯ, ಹಣ್ಣು ಹಂಪಲು ಇವುಗಳನ್ನು ಬಿಡುವ ಗಿಡಮರಬಳ್ಳಿಗಳನ್ನೂ ಬೆಳೆಯಿಸಲಿ,” ಎಂದರು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತರುವಾಯ ದೇವರು - ಭೂವಿುಯು ಹುಲ್ಲನ್ನೂ ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಸಲಿ; ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನೂ ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ ಎಂದು ಹೇಳಿದನು; ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅನಂತರ ದೇವರು, “ಭೂಮಿಯು ಹುಲ್ಲನ್ನೂ ಬೀಜಬಿಡುವ ಗಿಡಗಳನ್ನೂ ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನೂ ಉತ್ಪತ್ತಿ ಮಾಡಲಿ,” ಎಂದು ಹೇಳಿದರು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:11
20 ತಿಳಿವುಗಳ ಹೋಲಿಕೆ  

ಭೂಮಿಯು ಕಾಲಾನುಕಾಲಕ್ಕೆ ತನ್ನ ಮೇಲೆ ಬೀಳುವ ಮಳೆಯ ನೀರನ್ನು ಹೀರಿಕೊಂಡು ವ್ಯವಸಾಯಗಾರನಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಪಡೆಯುತ್ತದೆ.


ಕವಿಸುವನಾತ ಮೋಡಗಳನು ಗಗನದಲಿ I ಸುರಿಸುವನು ಮಳೆಯನು ಬುವಿಯಲಿ I ಬೆಳೆಸುವನು ಹುಲ್ಲನು ಬೆಟ್ಟಗಳಲಿ II


ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ.


“ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು.


ಭೂಮಿ ಮೊದಲು ಸಸಿಯನ್ನೂ ಅನಂತರ ಹೊಡೆಯನ್ನೂ ತರುವಾಯ ತೆನೆತುಂಬ ಕಾಳನ್ನೂ ತನ್ನಷ್ಟಕ್ಕೆ ತಾನೇ ಉತ್ಪತ್ತಿಮಾಡುತ್ತದೆ.


ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?


ಭೂಮಿ ಕೊಡುತ್ತದೆ ಆಹಾರವನು ಬೆಂಕಿಬಿದ್ದಂತೆ ಪಾಳಾಗಿರುತ್ತದೆ ಅದರ ಅಡಿಭಾಗವು.


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


ದೇವರಾದ ಸರ್ವೇಶ್ವರ ಸ್ವಾಮಿ ಪರಲೋಕ - ಭೂಲೋಕಗಳನ್ನು ಸೃಷ್ಟಿಮಾಡಿದಾಗ ಯಾವ ಗಿಡಗಳೂ ಭೂಮಿಯಲ್ಲಿ ಇರಲಿಲ್ಲ. ಯಾವ ಬೀಜವೂ ಮೊಳೆತಿರಲಿಲ್ಲ. ಏಕೆಂದರೆ ದೇವರಾದ ಸರ್ವೇಶ್ವರ ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡಲು ಮನುಷ್ಯನೂ ಇರಲಿಲ್ಲ.


ಅಂಜೂರದ ಮರ ಓಲಿವ್ ಹಣ್ಣನ್ನು ಕೊಡುವುದುಂಟೇ? ದ್ರಾಕ್ಷಿಯ ಬಳ್ಳಿಯಲ್ಲಿ ಅಂಜೂರ ಸಿಕ್ಕೀತೇ? ಎಂದಿಗೂ ಇಲ್ಲ. ಅಂತೆಯೇ ಸೌಳು ನೀರಿನ ಒರತೆಯಿಂದ ಸಿಹಿ ನೀರು ಬರುವುದಿಲ್ಲ.


ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ.


ಇದಲ್ಲದೆ, ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ, “ನೀನು ಈ ತೋಟದಲ್ಲಿರುವ ಎಲ್ಲ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.


ದೇವರು ತಮ್ಮ ಚಿತ್ತಾನುಸಾರ ಅದಕ್ಕೆ ದೇಹಾಕೃತಿಯನ್ನು ಕೊಡುತ್ತಾರೆ. ಒಂದೊಂದು ಬೀಜಕ್ಕೂ ಅದರದರ ದೇಹಾಕೃತಿಯನ್ನು ಕೊಡುತ್ತಾರೆ.


ಭೂಮಿಯಲ್ಲಿ ಸಸ್ಯಗಳು ಬೆಳೆದವು; ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ಬಿಡುವ ಗಿಡಮರಬಳ್ಳಿಗಳು ಕಾಣಿಸಿಕೊಂಡವು. ದೇವರ ಕಣ್ಣಿಗೆ ಅವು ಚೆನ್ನಾಗಿ ಕಂಡವು.


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು