Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:14 - ಕನ್ನಡ ಸತ್ಯವೇದವು C.L. Bible (BSI)

14 ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಳಿಕ ದೇವರು - ಆಕಾಶಮಂಡಲದಲ್ಲಿ ಬೆಳಕುಗಳು ಉಂಟಾಗಲಿ; ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ; ಇದಲ್ಲದೆ ಅವು ಗುರುತುಗಳಾಗಿದ್ದು ಸಮಯಗಳನ್ನೂ ದಿನಸಂವತ್ಸರಗಳನ್ನೂ ತೋರಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ದೇವರು, “ಆಕಾಶದಲ್ಲಿ ಬೆಳಕುಗಳು ಉಂಟಾಗಲಿ. ಈ ಬೆಳಕುಗಳು ಹಗಲುರಾತ್ರಿಗಳನ್ನು ಬೇರ್ಪಡಿಸಲಿ. ಈ ಬೆಳಕುಗಳು ವಿಶೇಷವಾದ ಗುರುತುಗಳಾಗಿದ್ದು, ವಿಶೇಷವಾದ ಸಮಯಗಳನ್ನೂ ದಿನಗಳನ್ನೂ ವರ್ಷಗಳನ್ನೂ ತೋರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅನಂತರ ದೇವರು, “ಹಗಲನ್ನು ರಾತ್ರಿಯಿಂದ ಪ್ರತ್ಯೇಕಿಸುವುದಕ್ಕೆ ಆಕಾಶಮಂಡಲದಲ್ಲಿ ಬೆಳಕುಗಳಿರಲಿ; ಅವು ಕಾಲಗಳನ್ನೂ ದಿನ ಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:14
43 ತಿಳಿವುಗಳ ಹೋಲಿಕೆ  

ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಸರ್ವೇಶ್ವರನು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದಾತ. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದಾತ. ಅಲೆಗಳು ಭೋರ್ಗರೆವಷ್ಟು ಸಮುದ್ರವನ್ನು ಕೆರಳಿಸುವಾತ ‘ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮಧೇಯದಿಂದ ಪ್ರಸಿದ್ಧನಾತ.


ಸೂರ್ಯಚಂದ್ರರೇ, ಹೊಗಳಿ ಆತನನು I ಮಿನುಗುವ ತಾರೆಗಳೇ, ಹೊಗಳಿ ಆತನನು II


ಸ್ಥಾಪಿಸಿದನು ಎಂದೆಂದಿಗೂ ಅವನ್ನು I ವಿಧಿಸಿಹನು ಮೀರಲಾಗದ ನಿಯಮವನು I


ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು,


ಸೂರ್ಯಚಂದ್ರಗಳು ಮಂಕಾಗುತ್ತವೆ. ನಕ್ಷತ್ರಗಳು ಕಾಂತಿಗುಂದುತ್ತವೆ.


“ಅನ್ಯಜನಾಂಗಗಳ ಆಚರಣೆಯನ್ನು ಅನುಸರಿಸಬೇಡಿ ಅವರು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿ.


ಊದಿರಿ ಕೊಂಬನು ಅಮವಾಸ್ಯೆಯಲಿ I ಉತ್ಸವದಿನವಾದ ಪೂರ್ಣಿಮೆಯಲಿ II


ಬಿತ್ತನೆ - ಕೊಯಿಲು ಚಳಿ - ಬಿಸಿಲು ಗ್ರೀಷ್ಮ - ಹೇಮಂತ ಹಗಲು - ಇರುಳು ಈ ಕ್ರಮಕ್ಕೆ ಇರದು ಅಂತ್ಯ ಜಗವಿರುವವರೆಗು.”


ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.


ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ.


“ಸರ್ವೇಶ್ವರನಾದ ನನ್ನ ನುಡಿ ಇದು: ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೆ?


ಆ ಯಜ್ಞದ ಕುರಿಮರಿ ಆರನೆಯ ಮುದ್ರೆಯನ್ನು ಒಡೆದಾಗ, ದೊಡ್ಡ ಭೂಕಂಪವಾಯಿತು. ಸೂರ್ಯನು ಕರಿಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


“ಯೆಹೂದ್ಯರ ಅರಸ ಹುಟ್ಟಿದ್ದಾರಲ್ಲವೇ, ಅವರೆಲ್ಲಿ?” ಎಂದು ವಿಚಾರಿಸಿದರು; “ಅವರನ್ನು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಅವರನ್ನು ಆರಾಧಿಸಲು ಇಲ್ಲಿಗೆ ಬಂದಿದ್ದೇವೆ,” ಎಂದರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ವಾರದೊಳಗೆ ಕೆಲಸ ನಡೆಯುವ ಆರು ದಿವಸಗಳಲ್ಲಿ ಒಳಗಿನ ಪ್ರಾಕಾರದ ಪೂರ್ವ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲೂ ಅಮಾವಾಸ್ಯೆಯಲ್ಲೂ ತೆರೆದಿರಬೇಕು.


ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳು: ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆಹೋಗಿದ್ದರೆ, ಆಗ ಮಾತ್ರ ನಾನು ಯಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ.


ಆತನ ದೃಷ್ಟಿಗೆ ಚಂದ್ರನೂ ಕಾಂತಿಯುತನಲ್ಲ ನಕ್ಷತ್ರಗಳೂ ನಿರ್ಮಲವಾದವುಗಳಲ್ಲ.


ಮೇಘಗಳಲ್ಲಿ ನಾನಿಟ್ಟಿರುವ ಮಳೆಬಿಲ್ಲೇ ಗುರುತು. ನನಗೂ ಭೂಪ್ರಾಣಿಗಳಿಗೂ ಆದ ಒಡಂಬಡಿಕೆಗೆ ಇದೇ ಕುರುಹು.


ನಾಲ್ಕನೆಯ ದೇವದೂತನು ತುತೂರಿಯನ್ನು ಊದಿದನು. ಸೂರ್ಯಚಂದ್ರ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗಕ್ಕೆ ಧಕ್ಕೆ ಉಂಟಾಯಿತು. ಅವುಗಳ ಮೂರನೆಯ ಒಂದು ಭಾಗ ಕಾಂತಿಹೀನವಾಯಿತು. ಇದರಿಂದಾಗಿ ಹಗಲಿನಲ್ಲೂ ರಾತ್ರಿಯಲ್ಲೂ ಮೂರನೆಯ ಒಂದು ಭಾಗದಷ್ಟು ಬೆಳಕು ಕಡಿಮೆಯಾಯಿತು.


ಮಹಾದೇವಾಲಯದ ತೆರೆಯು ಇಬ್ಭಾಗವಾಗಿ ಸೀಳಿಹೋಯಿತು.


“ಆ ದಿನಗಳಲ್ಲಿ ಈ ಸಂಕಷ್ಟಗಳು ಮುಗಿದ ಬಳಿಕ ಸೂರ್ಯನು ಅಂಧಕಾರಮಯನಾಗುವನು;


ಅಮಾವಾಸ್ಯೆಯಲ್ಲಿ ಅವನು ಕಳಂಕರಹಿತವಾದ ಒಂದು ಹೋರಿಯನ್ನೂ ಆಡುಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅವು ಕಳಂಕರಹಿತವಾಗಿಯೇ ಇರಬೇಕು.


ನಿನ್ನ ವಿಧಿಗನುಸಾರ ಅವು ಇಂದಿಗೂ ಉಳಿದಿವೆ I ಏಕೆನೆ, ಸರ್ವವೂ ಮಾಡುತಿವೆ ನಿನಗೆ ಸೇವೆ II


ಲೆಕ್ಕವಿದೆಯೇ ಆತನ ಸೇನೆಗಳಿಗೆ? ಆತನ ತೇಜಸ್ಸು ಮೂಡದಿರುವುದು ಯಾರಿಗೆ?


ಮುಂಜಾನೆಯ ತಾರೆಗಳು ಆ ದಿನದೊಳು ಮಿಣುಕದಿರಲಿ ಇದಿರುನೋಡಿದರೂ ಬೆಳಕನು ಕಾಣದಿರಲಿ ಅರುಣೋದಯ ಕಣ್ದೆರೆವುದನು ಅದು ನೋಡದಿರಲಿ!


ಅವನು ಆ ಕೂಪದ ಮುಚ್ಚಳವನ್ನು ತೆರೆದನು. ಅದರೊಳಗಿಂದ ದಟ್ಟಹೊಗೆ ದೊಡ್ಡ ಕುಲುಮೆ ಒಂದರಿಂದ ಬರುತ್ತಿರುವಂತೆ ಮೇಲೇರಿತು. ಇದರಿಂದಾಗಿ ಸೂರ್ಯನೂ ವಾಯುಮಂಡಲವೂ ಕಪ್ಪಾದವು.


ಹೀಗೆ ಬೈಗೂ ಬೆಳಗೂ ಆಗಿ ಮೂರನೆಯ ದಿನವಾಯಿತು.


ಭೂಮಿಗೆ ಬೆಳಕನ್ನೀಯಲು, ಆಕಾಶ ದೀಪಗಳು ಉಂಟಾಗಲಿ,” ಎಂದರು. ಹಾಗೆಯೇ ಆಯಿತು.


ಅಲ್ಲೆಲೂಯ! I ಸ್ತುತಿಸಿರಿ ದೇವರನು ಆತನ ಪರಿಶುದ್ಧ ಆಲಯದಲಿ I ಆತನ ಶಕ್ತಿಯನು ಸಾರುವಾ ಆಕಾಶಮಂಡಲದಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು