Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:21 - ಕನ್ನಡ ಸತ್ಯವೇದವು C.L. Bible (BSI)

21 ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗೆ ದೇವರು ಮಹಾಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೀಗೆ ದೇವರು ಸಮುದ್ರದ ಬೃಹದಾಕಾರದ ಪ್ರಾಣಿಗಳನ್ನು, ಸಮುದ್ರದಲ್ಲಿ ಚಲಿಸುವ ಪ್ರತಿಯೊಂದು ಬಗೆಯ ಜೀವಿಗಳನ್ನು ಮತ್ತು ರೆಕ್ಕೆಗಳುಳ್ಳ ಪ್ರತಿಯೊಂದು ಬಗೆಯ ಪಕ್ಷಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆ ದೇವರು ದೊಡ್ಡ ಜಲಚರಗಳನ್ನು, ನೀರಿನಲ್ಲಿ ತುಂಬಿರುವ ಎಲ್ಲಾ ಚಲಿಸುವ ಜೀವ ಜಂತುಗಳನ್ನು, ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಯನ್ನು ಅವುಗಳ ಜಾತಿಗನುಸಾರವಾಗಿ ಸೃಷ್ಟಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:21
23 ತಿಳಿವುಗಳ ಹೋಲಿಕೆ  

ಎಲ್ಲ ತರದ ದೊಡ್ಡ - ಚಿಕ್ಕ ಕಾಡುಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನು ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು.


ಪ್ರಾಣಿ, ಪಶು, ಪಕ್ಷಿ, ಕ್ರಿಮಿ ಇವುಗಳೆಲ್ಲವೂ ತಮ್ಮ ತಮ್ಮ ಜಾತಿಗನುಸಾರ ನಾವೆಯಿಂದ ಹೊರಗೆ ಬಂದವು.


ನಿನ್ನ ಬಳಿಯಿರುವ ಪ್ರಾಣಿಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲ ಜೀವಿಗಳೂ ಹೊರಗೆ ಬರಲಿ; ಅವುಗಳ ಸಂಖ್ಯೆ ಭೂಮಿಯಲ್ಲಿ ಬೆಳೆಯಲಿ; ಅವು ಹೆಚ್ಚಿ ವೃದ್ಧಿಯಾಗಲಿ,” ಎಂದರು.


ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ಹೊರಟುಬಂದು ನಿನ್ನ ಅರಮನೆಯಲ್ಲೂ ಮಲಗುವ ಕೋಣೆಯಲ್ಲೂ ನಿನ್ನ ಹಾಸಿಗೆಯಲ್ಲೂ ನಿನ್ನ ಪರಿವಾರದವರ ಹಾಗು ಪ್ರಜೆಗಳ ಮನೆಗಳಲ್ಲೂ ಒಲೆಗಳಲ್ಲೂ ಹಿಟ್ಟುನಾದುವ ಹರಿವಾಣಗಳಲ್ಲೂ ಕಾಣಿಸಿಕೊಳ್ಳುವುವು.


ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ನೀವು ಹೆಚ್ಚಿ ಅಭಿವೃದ್ಧಿಯಾಗಿರಿ, ನಿಮ್ಮ ಸಂಖ್ಯೆ ಬೆಳೆಯಲಿ ಭೂಮಿಯಲ್ಲಿ."


ಅವರೊಂದಿಗೆ ಸಕಲ ವಿಧವಾದ ಕಾಡುಮೃಗಗಳೂ ಸಾಕು ಪ್ರಾಣಿಗಳೂ ಕ್ರಿಮಿಕೀಟಗಳೂ ರೆಕ್ಕೆಬಡಿಯುವ ಹಕ್ಕಿಪಕ್ಷಿಗಳೂ


ಪ್ರಾಣಿಪಕ್ಷಿ, ಕ್ರಿಮಿಕೀಟ ಇವುಗಳ ಸಕಲ ಜಾತಿಗಳಲ್ಲಿ ಎರಡೆರಡು ಬದುಕಿಬಾಳಲು ನಿನ್ನೊಡನೆ ಬರಲಿ.


ಬಿಲ್ದದನು: ಜಲಚರಗಳಿಂದ ತುಂಬಿದ ಸಾಗರದ ಕೆಳಗಿನ ಲೋಕದೊಳು (ದೇವರ ಭಯದಿಂದ) ಯಾತನೆಪಡುತ್ತಿವೆ ಪ್ರೇತಗಳು.


ನಾನೇನು ಕಡಲೋ? ಕಡಲಿನ ಘಟಸರ್ಪವೋ? ನೀವು ನನ್ನ ಮೇಲೆ ಕಾವಲಿಡುವುದು ಸರಿಯೋ?


ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.


ಹಗಲಿರುಳುಗಳನ್ನು ಆಳುವುದಕ್ಕೂ, ಬೆಳಕನ್ನೂ ಕತ್ತಲನ್ನೂ ಬೇರೆಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು.


ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.


ಇತ್ತ ಸರ್ವೇಶ್ವರಸ್ವಾಮಿಯ ಆಜ್ಞಾನುಸಾರ ದೊಡ್ಡ ಮೀನೊಂದು ಬಂದು ಯೋನನನ್ನು ನುಂಗಿತು. ಅವನು ಅದರ ಹೊಟ್ಟೆಯಲ್ಲಿ ಮೂರು ಹಗಲು, ಮೂರು ಇರುಳು ಇದ್ದನು.


“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನನ್ನು ಕುರಿತು ಶೋಕಗೀತೆಯೊಂದನ್ನು ನುಡಿ : “ನೀನು ಮೃಗರಾಜನೆನಿಸಿಕೊಂಡಿರುವೆ ಜನಾಂಗಗಳಲ್ಲಿ, ಇಗೋ ದೊಡ್ಡ ಮೊಸಳೆಯಾಗಿಬಿಟ್ಟಿರುವೆ ಮಹಾನದಿಯಲ್ಲಿ. ನೀನಿದ್ದ ನದಿಗಳ ಭೇದಿಸಿಕೊಂಡು ಬಂದು, ಕಾಲಿಂದ ನೀ ಕಲಕಿರುವೆ ಅದರ ನೀರನ್ನು, ತುಳಿದು ಬದಿಮಾಡಿರುವೆ ಜನಾಂಗವೆಂಬ ಹೊಳೆಯನ್ನು.”


ಸರ್ವೇಶ್ವರಸ್ವಾಮಿಯ ಆಜ್ಞೆಯ ಪ್ರಕಾರ ಆ ಮೀನು ಯೋನನನ್ನು ದಡದ ಮೇಲೆ ಕಕ್ಕಿತು.


ಆಮೇಲೆ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು.


ಅವುಗಳಿಗೆ ದೇವರು, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ,” ಎಂದು ಹೇಳಿ ಆಶೀರ್ವದಿಸಿದರು.


ಭೂಮಿಯ ಮೇಲಿರುವ ಎಲ್ಲ ಪ್ರಾಣಿಗಳೂ ಆಕಾಶದ ಎಲ್ಲ ಪಕ್ಷಿಗಳೂ ನೆಲದ ಮೇಲೆ ಹರಿದಾಡುವ ಎಲ್ಲ ಕ್ರಿಮಿಕೀಟಗಳೂ ಸಮುದ್ರದ ಎಲ್ಲ ಮೀನುಗಳೂ ನಿಮಗೆ ಹೆದರಿ ಬೆದರುವುವು. ಅವುಗಳನ್ನೆಲ್ಲ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.


ತಿಮಿಂಗಲಗಳೂ ಆದಿಸಾಗರಗಳೂ I ಹೊಗಳಲಿ ಭೂಮಂಡಲದಿಂದ ಪ್ರಭುವನು II


ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು.


ಮೃಗಗಳನ್ನು ಬೇಕಾದರೆ ಕೇಳು, ಅವು ಕಲಿಸುವುವು ಆಕಾಶದ ಪಕ್ಷಿಗಳನ್ನು ಕೇಳು, ಅವು ತಿಳಿಸುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು