Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:26 - ಕನ್ನಡ ಸತ್ಯವೇದವು C.L. Bible (BSI)

26 ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಅವರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:26
34 ತಿಳಿವುಗಳ ಹೋಲಿಕೆ  

ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.


ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.


ಸರ್ವೇಶ್ವರನಾದ ದೇವರು, “ಮನುಷ್ಯನು ಈಗ ನಮ್ಮಲ್ಲಿ ಒಬ್ಬರಂತೆ ಒಳಿತು - ಕೆಡುಕುಗಳ ಜ್ಞಾನವನ್ನು ಪಡೆದುಬಿಟ್ಟಿದ್ದಾನೆ. ಇನ್ನು ಅಮರ ಜೀವಿಯಾಗಲು ಜೀವವೃಕ್ಷದ ಹಣ್ಣಿಗೆ ಕೈ ಚಾಚಿಬಿಡಬಾರದು,” ಎಂದುಕೊಂಡರು.


ಆದಾಮನ ವಂಶದವರ ಚರಿತ್ರೆ: ಸೃಷ್ಟಿಕಾಲದಲ್ಲಿ ದೇವರು ಮಾನವನನ್ನು ತಮ್ಮ ಹೋಲಿಕೆಯಂತೆಯೇ ಸೃಷ್ಟಿಮಾಡಿದರು.


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ಪ್ರಭುವನ್ನೂ ಪರಮ ಪಿತನನ್ನೂ ಸ್ತುತಿಸುವುದು ಅದೇ ನಾಲಿಗೆಯೇ; ದೇವಸ್ವರೂಪದಲ್ಲಿ ಸೃಷ್ಟಿಸಲಾದ ಮಾನವನನ್ನು ಶಪಿಸುವುದೂ ಅದೇ ನಾಲಿಗೆಯೇ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಪುರುಷನು ತಲೆಯ ಮೇಲೆ ಮುಸುಕುಹಾಕಬೇಕಾಗಿಲ್ಲ. ಏಕೆಂದರೆ, ಅವನು ದೇವರ ರೂಪ ಹಾಗೂ ಅವರ ಮಹಿಮೆಯ ಪ್ರತಿಬಿಂಬ. ಸ್ತ್ರೀಯಾದರೋ, ಪುರುಷನ ಮಹಿಮೆಯ ಪ್ರತಿಬಿಂಬ.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ಇದೊಂದು ನಿನಗೆ ತಿಳಿದಿರಲಿ: ದೇವರು ಮನುಷ್ಯರನ್ನು ಸಜ್ಜನರನ್ನಾಗಿ ಸೃಷ್ಟಿಸಿದರು; ಮನುಷ್ಯರಾದರೂ ಅನೇಕ ಸಮಸ್ಯೆಗಳನ್ನು ಕಲ್ಪಿಸಿಕೊಂಡಿದ್ದಾರೆ. ನನಗೆ ಕಂಡುಬಂದುದು ಇದುವೇ.


ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ಇದಕ್ಕೆ ಪವಿತ್ರಾತ್ಮ ಸಾಕ್ಷಿ. ಏಕೆಂದರೆ, ಪವಿತ್ರಾತ್ಮ ಸತ್ಯಸ್ವರೂಪಿ.


ಸಕಲ ಜಾತಿಯ ಪ್ರಾಣಿಪಕ್ಷಿಗಳನ್ನೂ ಹರಿದಾಡುವ ಜಂತುಗಳನ್ನೂ ಜಲಜೀವಿಗಳನ್ನೂ ಮಾನವ ಪಳಗಿಸಬಲ್ಲನು; ಪಳಗಿಸಿಯೂ ಇದ್ದಾನೆ.


ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.


ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II


ನಾವು ಹೋಗಿ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿಗೊಳಿಸೋಣ,” ಎಂದರು.


ಈಗ ಈ ನಾಡುಗಳನ್ನೆಲ್ಲ ಬಾಬಿಲೋನಿಯದ ಅರಸ ಹಾಗೂ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.


ಆದರೆ ‘ನಮ್ಮನ್ನು ಸೃಷ್ಟಿಸಿದ ಕರ್ತನೆಲ್ಲಿ? ಕತ್ತಲಲ್ಲೂ ಕೀರ್ತನೆ ಹಾಡಬಲ್ಲವನೆಲ್ಲಿ?


ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.


ನೀನು ಹೇಳುತ್ತಿರುವ ಕೆಲವು ಸಂಗತಿಗಳು ನಮಗೆ ವಿಚಿತ್ರವಾಗಿ ತೋರುತ್ತವೆ. ಆದ್ದರಿಂದ ಅವುಗಳ ಅರ್ಥವೇನೆಂದು ತಿಳಿಯಬಯಸುತ್ತೇವೆ,” ಎಂದರು. (


ಹೊಲದ ಕಲ್ಲುಬಂಡೆಗಳೊಡನೆ ಒಪ್ಪಂದಮಾಡಿಕೊಳ್ಳುವೆ ಆ ಕಾಡುಪ್ರಾಣಿಗಳೊಂದಿಗೆ ನೆಮ್ಮದಿಯಿಂದ ಬಾಳುವೆ.


ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು.


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ಬಲವಿದೆಯೆಂದು ಅದರಲಿ ನಂಬಿಕೆಯಿಡುವೆಯಾ? ಬಲಿಷ್ಠಕಾರ್ಯಗಳನು ಅದಕ್ಕೆ ಒಪ್ಪಿಸಿಬಿಡುವೆಯಾ?


ಮಾಡಿಸುವೆ ನಿನಗೆ ಬಂಗಾರದ ಅಂಚು, ಬೆಳ್ಳಿಯ ಕುಚ್ಚು. ನಲ್ಲೆ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು