Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:27 - ಕನ್ನಡ ಸತ್ಯವೇದವು C.L. Bible (BSI)

27 ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು; ದೇವಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು; ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿಸಿದನು. ಆತನು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ರೂಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು. ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು. ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:27
20 ತಿಳಿವುಗಳ ಹೋಲಿಕೆ  

ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೃಷ್ಟಿಕರ್ತ ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ಉಂಟುಮಾಡಿದರು ಎಂದೂ,


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಆದರೆ ಸೃಷ್ಟಿಯ ಆರಂಭದಿಂದಲೇ ‘ದೇವರು ಮನುಷ್ಯರನ್ನು ಗಂಡುಹೆಣ್ಣಾಗಿ ನಿರ್ಮಿಸಿದ್ದಾರೆ.


ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.


ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ I ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ I ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ II


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.


ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು.


ಯುಗಯುಗಾಂತರಗಳಿಂದಲೂ ತಲತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯಗಳನ್ನು, ಅಂದರೆ ತಮ್ಮ ವಾಕ್ಯವನ್ನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ.


ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


“ದೇವರು ಮಾನವರನ್ನು ಸೃಷ್ಟಿಸಿ ಭೂಮಿಯ ಮೇಲಿರಿಸಿದ ದಿನ ಮೊದಲ್ಗೊಂಡು ಇಂದಿನವರೆಗೆ, ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೆ, ಅಂಥ ಅದ್ಭುತಕಾರ್ಯ ನಡೆದದ್ದುಂಟೇ? ಅಂಥ ಸುದ್ದಿಯನ್ನಾದರೂ ಕೇಳಿದ್ದುಂಟೇ? ನೀವೇ ವಿಚಾರಿಸಿಕೊಳ್ಳಿ.


ಇದೊಂದು ನಿನಗೆ ತಿಳಿದಿರಲಿ: ದೇವರು ಮನುಷ್ಯರನ್ನು ಸಜ್ಜನರನ್ನಾಗಿ ಸೃಷ್ಟಿಸಿದರು; ಮನುಷ್ಯರಾದರೂ ಅನೇಕ ಸಮಸ್ಯೆಗಳನ್ನು ಕಲ್ಪಿಸಿಕೊಂಡಿದ್ದಾರೆ. ನನಗೆ ಕಂಡುಬಂದುದು ಇದುವೇ.


ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರುತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿ; ಯುದ್ಧ ನಿಮಿತ್ತ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಎಂದರು.


ಸಂಸಾರಿಗಳಾಗಿ ಗಂಡು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಗಳನ್ನು ತೆಗೆದುಕೊಳ್ಳಿ. ನಿಮ್ಮ ಹೆಣ್ಣುಗಳನ್ನು ಗಂಡುಗಳಿಗೆ ಕೊಡಿ. ಅವರೂ ಗಂಡುಹೆಣ್ಣು ಮಕ್ಕಳನ್ನು ಪಡೆಯಲಿ. ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕಡಿಮೆಯಾಗದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು