Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:19 - ಕನ್ನಡ ಸತ್ಯವೇದವು C.L. Bible (BSI)

19 ಕಾನಾನ್ಯರ ನಾಡು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿ ಇರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಆದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿದ್ದ ಲೆಷಾ ಊರಿನವರೆಗೂ ಹಬ್ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕಾನಾನ್ಯರ ಸೀಮೆಯು ಸೀದೋನಿನ ಉತ್ತರದಿಂದಿಡಿದು ಗೆರಾರಿನ ದಕ್ಷಿಣದವರೆಗೂ, ಗಾಜಾದಿಂದ ಪೂರ್ವದ ಸೊದೋಮ್ ಗೊಮೋರ ಪಟ್ಟಣಗಳವರೆಗೂ, ಅದ್ಮಾ ಮತ್ತು ಚೆಬೋಯಿಮ್‌ಗಳಿಂದ ಲೆಷಾದವರೆಗೆ ವಿಸ್ತರಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:19
29 ತಿಳಿವುಗಳ ಹೋಲಿಕೆ  

ಈಗ ಲವಣ ಸಮುದ್ರ ಎನಿಸಿಕೊಳ್ಳುವ ಸಿದ್ದೀಮ್ ತಗ್ಗುಪ್ರದೇಶದಲ್ಲಿ ಒಂದುಗೂಡಿದ್ದ ಸೊದೋಮಿನ ಅರಸ ಬೆರಗ, ಗೊಮೋರದ ಅರಸ ಬಿರ್ಶಗ, ಅದ್ಮಾಹದ ಅರಸ ಶಿನಾಬ, ಚೆಬೋಯಿಮನ ಅರಸ ಶೆಮೇಬರ, ಬೆಲಗಿನ (ಅಂದರೆ ಚೋಗರದ) ಅರಸ - ಈ ಐವರೊಡನೆ ಯುದ್ಧಮಾಡಿದರು.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಊಚ್ ನಾಡಿನ ಎಲ್ಲ ಅರಸರು, ಫಿಲಿಷ್ಟಿಯ ದೇಶದ ಎಲ್ಲ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಅಷ್ಟೋದಿನ ಶೇಷ, ಈ ಪ್ರಾಂತ್ಯಗಳ ಎಲ್ಲ ಅರಸರು;


ತರುವಾಯ ಸಂಸೋನನು ಗಾಜಾಕ್ಕೆ ಹೋದಾಗ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.


ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.


ಹಿಂದೆ ಅಬ್ರಹಾಮನ ಕಾಲದಲ್ಲಿ ಬಂದಿದ್ದ ಬರಗಾಲವು ಮತ್ತೊಮ್ಮೆ ಕಾನಾನ್ ನಾಡಿಗೆ ಬಂದಿತು. ಇಸಾಕನು ಫಿಲಿಷ್ಟಿಯರ ಅರಸ ಅಬೀಮೆಲೆಕನನ್ನು ಕಾಣಲು ಗೆರಾರಿಗೆ ಹೋದನು.


ಅಬ್ರಹಾಮನು ಅಲ್ಲಿಂದ ಕಾನಾನ್ ನಾಡಿನ ದಕ್ಷಿಣ ಪ್ರಾಂತಕ್ಕೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿದನು. ಕೆಲವು ಕಾಲ ಗೆರಾರಿನಲ್ಲೂ ಇದ್ದನು.


ಇದಲ್ಲದೆ ಸರ್ವೇಶ್ವರ, “ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪಕೃತ್ಯವೂ ಘೋರವಾದುದು.


ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು.


ಅರ್ವಾದಿಯರೂ ಚೆಮಾರಿಯರೂ ಹಮಾತಿಯರೂ ಕಾನಾನನಿಂದ ಹುಟ್ಟಿದರು. ಕಾಲಕ್ರಮೇಣ ಈ ಕಾನಾನ್ ಕುಲಗಳವರು ಹರಡಿಕೊಂಡರು.


ಕುಲ - ಭಾಷಾ - ದೇಶ - ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.


ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಸಿದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.


ಅವರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು. ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಸರ್ವೇಶ್ವರನ ಮತ್ತು ಅವರ ಸೈನ್ಯದ ಮುಂದೆ ಸುಡಾನರು ಭಿನ್ನಭಿನ್ನರಾದರು. ಇಸ್ರಯೇಲರಿಗೆ ಅಪರಿಮಿತವಾದ ಕೊಳ್ಳೆಸಿಕ್ಕಿತು.


ಸಿದೋನ್ ನಗರವೇ, ನಿನಗೆ ನಾಚಿಕೆಗೇಡು ! ಸಮುದ್ರವೂ ಸಮುದ್ರ ತಳವೂ ನಿನ್ನನ್ನು ನಿರಾಕರಿಸುತ್ತಾ; “ನಾನು ಗರ್ಭಧರಿಸಲಿಲ್ಲ, ಪ್ರಸವಿಸಲಿಲ್ಲ, ಪುತ್ರಪುತ್ರಿಯರನ್ನು ಸಾಕಿ ಸಲಹಲಿಲ್ಲ,” ಎಂದು ನುಡಿದಿದೆ.


ಫರೋಹನು ಗಾಜಾ ಊರಿಗೆ ಮುತ್ತಿಗೆ ಹಾಕುವ ಮೊದಲು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿಬಂದ ವಾಣಿ:


“ನರಪುತ್ರನೇ, ನೀನು ಸಿದೋನಿಗೆ ಅಭಿಮುಖನಾಗಿ ಅದರ ಬಗ್ಗೆ ಹೀಗೆ ನುಡಿ -


ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಸರ್ವೇಶ್ವರ ರೆಫಾಯರನ್ನು ಅಮ್ಮೋನಿಯರ ಬಳಿಯಿಂದ ಹೊರದೂಡಿದರು; ಅಮ್ಮೋನಿಯರು ಆ ನಾಡನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.)


ಗಾಜಾ ಪ್ರಾಂತ್ಯದವರೆಗೆ ಭೂಮಿಯ ಫಲವನ್ನೆಲ್ಲ ನಾಶ ಮಾಡುತ್ತಿದ್ದರು. ಈ ಕಾರಣ ಇಸ್ರಯೇಲರಿಗೆ ದವಸಧಾನ್ಯವಾಗಲಿ, ಕುರಿದನಕತ್ತೆಗಳಾಗಲಿ ಉಳಿಯುತ್ತಿರಲಿಲ್ಲ.


ಇನ್ನೊಂದು ಬೇತ್‍ಹೋರೋನಿನ ಕಡೆಗೆ, ಮತ್ತೊಂದು ಜೆಬೋಯೀಮ್ ಕಣಿವೆಯೂ ಅದರ ಕೆಳಗಿರುವ ಅರಣ್ಯವೂ ಕಾಣಿಸುವ ಸ್ಥಳಕ್ಕೆ ಹೋದವು.


ಸರ್ವೇಶ್ವರ ಅರಸನಿಂದಲೂ ಯೆಹೂದ್ಯರಿಂದಲೂ ಸುಡಾನರಿಗೆ ಅಪಜಯ ಉಂಟಾಗುವಂತೆ ಮಾಡಿದರು.


ನೀನು ಅವುಗಳನು ಅವುಗಳ ಪ್ರಾಂತ್ಯಕ್ಕೆ ಕರೆದೊಯ್ಯಬಲ್ಲೆಯಾ? ಅವುಗಳ ನಿವಾಸಕೆ ಹಾದಿಯನು ಕಂಡುಹಿಡಿಯಬಲ್ಲೆಯಾ?


ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು