Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:5 - ಕನ್ನಡ ಸತ್ಯವೇದವು C.L. Bible (BSI)

5 ದೇಶ - ಭಾಷಾ - ಕುಲ - ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇಶಭಾಷಾ ಕುಲಜನಾಂಗಗಳ ಪ್ರಕಾರ [ಇವರೇ ಯೆಫೆತನ ವಂಶದವರು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ತೀರ ಪ್ರದೇಶದ ಜನರೆಲ್ಲರು ಯೆಫೆತನ ಮಕ್ಕಳ ಸಂತಾನಕ್ಕೆ ಸೇರಿದವರು. ಅವನ ಪ್ರತಿಯೊಬ್ಬ ಮಗನಿಗೂ ಸ್ವಂತ ಭೂಮಿ ಇತ್ತು. ಅವರೆಲ್ಲರ ಕುಟುಂಬಗಳು ವೃದ್ಧಿಗೊಂಡು ಅನೇಕ ಜನಾಂಗಗಳಾದವು. ಪ್ರತಿಯೊಂದು ಜನಾಂಗಕ್ಕೂ ಸ್ವಂತ ಭಾಷೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇವರಿಂದ ಕಡಲತೀರದ ಹಾಗೂ ದ್ವೀಪಗಳ ನಿವಾಸಿಯರು ತಮ್ಮ ಸ್ವಂತ ದೇಶ, ಭಾಷೆ, ಕುಲ ಜನಾಂಗಗಳ ಪ್ರಕಾರ ಹರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:5
26 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.


“ಸೈಪ್ರಸ್ ದ್ವೀಪಗಳಿಗೆ ಹೋಗಿ ನೋಡಿ; ಕೇದಾರ್ ನಾಡಿಗೆ ಕಳಿಸಿ ವಿಚಾರಮಾಡಿ, ಇಂಥ ಕಾರ್ಯ ಎಲ್ಲಿಯಾದರು ನಡೆಯಿತೆ ಎಂದು ಚೆನ್ನಾಗಿ ಆಲೋಚಿಸಿರಿ.


ಟೈರ್ ಮತ್ತು ಸಿದೋನ್ ಇವುಗಳ ಅರಸರೆಲ್ಲರು;


ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.


ಕುಲ - ಭಾಷಾ - ದೇಶ - ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.


ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.


ಅವರವರ ಕೃತ್ಯಗಳಿಗೆ ತಕ್ಕಂತೆ ದೂರದ ನಾಡುಗಳವರೆಗೂ ಮುಯ್ಯಿ ತೀರಿಸುವರು. ವಿರೋಧಿಗಳಿಗೆ ಪ್ರತೀಕಾರ ಎಸಗುವರು; ಶತ್ರುಗಳಿಗೆ ಸೇಡನ್ನು ತೀರಿಸುವರು.


ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.


ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ.


ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.


ದೂರದೇಶದವರು ಕಂಡು ಬೆರಗಾದರು ಭೂಮಿಯ ಕಟ್ಟಕಡೆಯವರು ನಡುಗಿದರು ಎಲ್ಲರೂ ಇಲ್ಲಿಗೆ ನೆರೆದುಬಂದಿಹರು.


ಆತನ ಗಣನೆಗೆ ರಾಷ್ಟ್ರಗಳು ಕಪಿಲೆಯಿಂದ ಉದುರುವ ತುಂತುರುಗಳು ತ್ರಾಸಿನ ತಟ್ಟೆಯ ಮೇಲಿರುವ ಧೂಳಿನ ಕಣಗಳು ದ್ವೀಪಗಳೋ ಆತನ ತೂಕಕ್ಕೆ ಅಣುರೇಣುಗಳು.


ಎಂದೇ ಮೂಡಣದವರೇ, ಸನ್ಮಾನಿಸಿರಿ ಸರ್ವೇಶ್ವರ ಸ್ವಾಮಿಯನು, ಕರಾವಳಿಯವರೇ, ಘನಪಡಿಸಿರಿ ಇಸ್ರಯೇಲಿನ ದೇವರಾದ ಸ್ವಾಮಿಯ ನಾಮವನು.


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಎಬರನಿಗೆ ಇಬ್ಬರು ಮಕ್ಕಳು. ಒಬ್ಬನಿಗೆ ಪೆಲೆಗೆಂಬ ಹೆಸರು. ಇವನ ಕಾಲದಲ್ಲೇ ಭೂಜನದ ವಿಭಜನೆ ಆದುದು. ಅವನ ತಮ್ಮನ ಹೆಸರು ಯೊಕ್ತಾನ್.


ಯಾವಾನನ ಮಕ್ಕಳು - ಎಲಿಷಾ, ಸ್ಪೇಯಿನ್ (ತಾರ್ಷಿಸ್), ಸೈಪ್ರಸ್ (ಕಿತ್ತೀಮ್) ಮತ್ತು ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವುಗಳಲ್ಲಿ ಹರಡಿಕೊಂಡರು.


ಹಾಮನ ಮಕ್ಕಳು ಯಾರೆಂದರೆ - ಕೂಷ್, ಈಜಿಪ್ಟ್ (ಮಿಚ್ರಯಿಮ್) ಲಿಬಿಯಾ (ಪೂತ್) ಮತ್ತು ಕಾನಾನ್ ಎಂಬುವರು.


ಸರ್ವೇಶ್ವರನಾದ ದೇವರು ಟೈರ್ ನಗರಕ್ಕೆ ಹೀಗೆ ಹೇಳುತ್ತಾರೆ - “ನಿನ್ನ ಮಧ್ಯದಲ್ಲಿ ಕಗ್ಗೊಲೆಯುಂಟಾಗಿ, ಗಾಯಗೊಂಡವರು ನರಳುತ್ತಿರಲು, ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ?


ಈ ನಿನ್ನ ಪತನ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಅಳಿದುಹೋದುದಕ್ಕೆ ಸಮುದ್ರದ್ವೀಪಗಳು ತತ್ತರಿಸುತ್ತವೆ.’ ಎಂಬ ಶೋಕಗೀತೆಯನ್ನೆತ್ತುವರು.”


ಆಮೇಲೆ ಅವನು ಕರಾವಳಿಯ ನಾಡುಗಳ ಕಡೆಗೆ ಕಣ್ಣಿಟ್ಟು ಅಲ್ಲಿಯ ಅನೇಕ ನಾಡುಗಳನ್ನು ಆಕ್ರಮಿಸುವನು. ಆದರೆ ದಳವಾಯಿ ಒಬ್ಬನು ಅವನ ಅಟ್ಟಹಾಸವನ್ನು ತಡೆಗಟ್ಟುವನು. ಅವನು ಮಾಡುವ ಹಾನಿ ಅವನಿಗೇ ತಗಲುವಂತೆ ಮಾಡುವನು.


ಜಗದಲ್ಲೆಲ್ಲ ಹರಡಿಕೊಂಡಿರುವ ಜನರು ನೋಹನ ಈ ಮೂರು ಮಕ್ಕಳಿಂದಲೇ ಉತ್ಪತ್ತಿಯಾದುದು.


ಸಂತತಿ - ಜನಾಂಗಗಳ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.


ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.


ಅರಸ ಅಹಷ್ವೇರೋಷನು ತನ್ನ ರಾಜ್ಯಕ್ಕೆ ಸೇರಿದ ಎಲ್ಲಾ ದೇಶಗಳ ಮೇಲೂ ಸಮುದ್ರ-ದ್ವೀಪಗಳ ಮೇಲೂ ತೆರಿಗೆಯನ್ನು ವಿಧಿಸಿದನು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು