Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:2 - ಕನ್ನಡ ಸತ್ಯವೇದವು C.L. Bible (BSI)

2 ಅವರು ಪೂರ್ವದಿಕ್ಕಿಗೆ ಪ್ರಯಾಣಮಾಡುತ್ತಾ ಇದ್ದಾಗ ಬಾಬಿಲೋನಿಯ ಕಾಡಿನ ಬಯಲು ಸೀಮೆ ಸಿಕ್ಕಿತು. ಅವರು ಅಲ್ಲೇ ನೆಲೆಸಲು ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ಪೂರ್ವದಿಕ್ಕಿಗೆ ಮುಂದೆ ಮುಂದೆ ಪ್ರಯಾಣ ಮಾಡುತ್ತಿರುವಾಗ ಶಿನಾರ್ ದೇಶದಲ್ಲಿ ಬೈಲುಸೀಮೆ ಸಿಕ್ಕಲು ಅಲ್ಲೇ ವಾಸಮಾಡಿಕೊಂಡು ತಮ್ಮ ತಮ್ಮೊಳಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜನರು ಪೂರ್ವದಿಕ್ಕಿನಿಂದ ಪ್ರಯಾಣಮಾಡಿ ಶಿನಾರ್ ಪ್ರದೇಶದಲ್ಲಿ ಬಯಲು ಸೀಮೆಯನ್ನು ಕಂಡು ಅಲ್ಲೇ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಜನರು ಪೂರ್ವದಿಕ್ಕಿಗೆ ಪ್ರಯಾಣ ಮಾಡುವಾಗ, ಶಿನಾರ್ ದೇಶದ ಬಯಲನ್ನು ಕಂಡು ಅಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:2
8 ತಿಳಿವುಗಳ ಹೋಲಿಕೆ  

ಬಾಬಿಲೋನಿಯ (ಶಿನಾರ್) ನಾಡಿನಲ್ಲಿರುವ ಯೆರೆಕ್, ಅಕ್ಕದ್ ಬಾಬಿಲೋನ್ ಕಲ್ನೇ ಈ ಎಲ್ಲ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.


ಆ ದಿನಗಳಲ್ಲಿ ಬಾಬೆಲೋನಿನ ಅರಸ ಅಮ್ರಾಫೆಲನು, ಎಲ್ಲಸಾರಿನ ಅರಸ ಅರಿಯೋಕನು, ಎಲಾಮಿನ ಅರಸ ಕೆದೊರ್ಲಗೋಮರನು ಮತ್ತು ಗೋಯಿಮದ ಅರಸ ತಿದ್ಗಾಲನು - ಈ ನಾಲ್ವರು


ಅದಕ್ಕೆ ಸೂತ್ರಧಾರಿಯಾದ ದೂತನು, “ಬಾಬಿಲೋನಿಯಾ ದೇಶಕ್ಕೆ: ಅಲ್ಲಿ ಅವಳಿಗೆ ಗುಡಿಕಟ್ಟುವುದಕ್ಕಾಗಿ ಹೋಗುತ್ತಿದ್ದಾರೆ. ಅದು ಸಿದ್ಧವಾದಾಗ ಅಲ್ಲಿನ ಪೀಠದ ಮೇಲೆ ಆ ಕೊಳಗವನ್ನು ಪ್ರತಿಷ್ಠಾಪಿಸಲಾಗುವುದು,” ಎಂದನು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಆದುದರಿಂದ ಲೋಟನು ಜೋರ್ಡನ್ ನದಿಯ ಸುತ್ತಲಿನ ಪ್ರದೇಶವನ್ನು ಆರಿಸಿಕೊಂಡು ಪೂರ್ವದಿಕ್ಕಿನ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಬೇರೆ ಬೇರೆ ಆದರು.


ಹೀಗೆ ಸರ್ವೇಶ್ವರ ಇಡೀ ಜಗತ್ತಿನ ಭಾಷೆಯನ್ನು ಗಲಿಬಿಲಿಗೊಳಿಸಿ ಅಲ್ಲಿಂದ ಜನರನ್ನು ಜಗದೆಲ್ಲೆಡೆಗೆ ಚದರಿಸಿದ ಕಾರಣ ಆ ಪಟ್ಟಣಕ್ಕೆ ‘ಬಾಬೆಲೋನ್‍’ ಎಂದು ಹೆಸರಾಯಿತು.


ಭೂಜನರೆಲ್ಲರಿಗೂ ಇದ್ದುದು ಒಂದೇ ಭಾಷೆ, ಒಂದೇ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು